<p>ಅರಸೀಕೆರೆ: ಲೋಕಸಭಾ ಚುನಾವಣೆ ನೀತಿಸಂಹಿತೆ ಜಾರಿಯಾಗಿದ್ದರೂ ಪಟ್ಟಣದ ಪ್ರವಾಸಿ ಮಂದಿರದ ಮುಂಭಾಗ ಹಾದು ಹೋಗಿರುವ ಬಿ.ಎಚ್. ರಸ್ತೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ತಾಲ್ಲೂಕು ಕಚೇರಿ ಸಮೀಪ ಮುಖ್ಯಮಂತ್ರಿ ಮತ್ತು ಸಚಿವರ ಭಾವಚಿತ್ರಗಳಿರುವ ಪ್ರಚಾರ ಫಲಕಗಳು ರಾರಾಜಿಸುತ್ತಿವೆ.<br /> <br /> ಚುನಾವಣಾ ನೀತಿ ಸಂಹಿತೆ ಪ್ರಕಾರ, ಯಾವುದೇ ಸರ್ಕಾರಿ ಕಾರ್ಯಕ್ರಮ ನಡೆಸುವಂತಿಲ್ಲ ಹಾಗೂ ಸರ್ಕಾರದ ಸಾಧನೆಗಳನ್ನು ಬಿಂಬಿಸುವ ಫ್ಲೆಕ್ಸ್, ಬ್ಯಾನರ್, ನಾಮಫಲಕಗಳನ್ನು ತೆರವುಗೊಳಿಸಬೇಕು. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗ ಸ್ಪಷ್ಟ ನಿರ್ದೇಶನ ನೀಡಿದ್ದರೂ, ಅರಸೀಕೆರೆ ಪಟ್ಟಣದಲ್ಲಿ ಅದು ಜಾರಿಯಾಗಿಲ್ಲ ಎಂಬುದಕ್ಕೆ ಇನ್ನೂ ತೆರವುಗೊಳಿಸದ ಫ್ಲೆಕ್ಸ್ಗಳು ಸಾಕ್ಷಿಯಾಗಿವೆ.<br /> <br /> ಪಟ್ಣಣ ಸೇರಿದಂತೆ ತಾಲ್ಲೂಕಿನ ಬಹುತೇಕ ಗ್ರಾಮ ಪಂಚಾಯಿತಿಗಳಲ್ಲಿ ಇಂದಿಗೂ ಜಾಹೀರಾತು, ಶುಭಾಶಯ ಕೋರುವ ಜನಪ್ರತಿನಿಧಿಗಳ ಭಾವಚಿತ್ರವಿರುವ ಬ್ಯಾನರ್ ಹಾಗೂ ನಾಮಫಲಕಗಳು ಕಣ್ಣಿಗೆ ರಾಚುತ್ತಿವೆ. ಚುನಾವಣಾ ಆಯೋಗದ ನೀತಿಸಂಹಿತೆಯನ್ನು ಪಾಲಿಸಬೇಕಾದ ತಾಲ್ಲೂಕು ಆಡಳಿತ ಕಣ್ಣುಮುಚ್ಚಿ ಕುಳಿತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅರಸೀಕೆರೆ: ಲೋಕಸಭಾ ಚುನಾವಣೆ ನೀತಿಸಂಹಿತೆ ಜಾರಿಯಾಗಿದ್ದರೂ ಪಟ್ಟಣದ ಪ್ರವಾಸಿ ಮಂದಿರದ ಮುಂಭಾಗ ಹಾದು ಹೋಗಿರುವ ಬಿ.ಎಚ್. ರಸ್ತೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ತಾಲ್ಲೂಕು ಕಚೇರಿ ಸಮೀಪ ಮುಖ್ಯಮಂತ್ರಿ ಮತ್ತು ಸಚಿವರ ಭಾವಚಿತ್ರಗಳಿರುವ ಪ್ರಚಾರ ಫಲಕಗಳು ರಾರಾಜಿಸುತ್ತಿವೆ.<br /> <br /> ಚುನಾವಣಾ ನೀತಿ ಸಂಹಿತೆ ಪ್ರಕಾರ, ಯಾವುದೇ ಸರ್ಕಾರಿ ಕಾರ್ಯಕ್ರಮ ನಡೆಸುವಂತಿಲ್ಲ ಹಾಗೂ ಸರ್ಕಾರದ ಸಾಧನೆಗಳನ್ನು ಬಿಂಬಿಸುವ ಫ್ಲೆಕ್ಸ್, ಬ್ಯಾನರ್, ನಾಮಫಲಕಗಳನ್ನು ತೆರವುಗೊಳಿಸಬೇಕು. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗ ಸ್ಪಷ್ಟ ನಿರ್ದೇಶನ ನೀಡಿದ್ದರೂ, ಅರಸೀಕೆರೆ ಪಟ್ಟಣದಲ್ಲಿ ಅದು ಜಾರಿಯಾಗಿಲ್ಲ ಎಂಬುದಕ್ಕೆ ಇನ್ನೂ ತೆರವುಗೊಳಿಸದ ಫ್ಲೆಕ್ಸ್ಗಳು ಸಾಕ್ಷಿಯಾಗಿವೆ.<br /> <br /> ಪಟ್ಣಣ ಸೇರಿದಂತೆ ತಾಲ್ಲೂಕಿನ ಬಹುತೇಕ ಗ್ರಾಮ ಪಂಚಾಯಿತಿಗಳಲ್ಲಿ ಇಂದಿಗೂ ಜಾಹೀರಾತು, ಶುಭಾಶಯ ಕೋರುವ ಜನಪ್ರತಿನಿಧಿಗಳ ಭಾವಚಿತ್ರವಿರುವ ಬ್ಯಾನರ್ ಹಾಗೂ ನಾಮಫಲಕಗಳು ಕಣ್ಣಿಗೆ ರಾಚುತ್ತಿವೆ. ಚುನಾವಣಾ ಆಯೋಗದ ನೀತಿಸಂಹಿತೆಯನ್ನು ಪಾಲಿಸಬೇಕಾದ ತಾಲ್ಲೂಕು ಆಡಳಿತ ಕಣ್ಣುಮುಚ್ಚಿ ಕುಳಿತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>