ಕಾಲೇಜಿನ ಪ್ರಾಂಶುಪಾಲ ಡಿ.ಜಿ.ಕೃಷ್ಣೇಗೌಡ ಮಾತನಾಡಿ, ಸರ್ಕಾರದ ಯೋಜನೆಗಳು ಉಪಯುಕ್ತವಾಗಿದ್ದು, ಅದರ ಅನುಕೂಲತೆ ಪಡೆದುಕೊಳ್ಳಲು ಪ್ರತಿಯೊಬ್ಬರು ಜ್ಞಾನವಂತರಾಗಬೇಕು. ಪ್ರಶ್ನೆ ಮಾಡುವ ಸಾಮರ್ಥ್ಯ ಕರಗತ ಮಾಡಿಕೊಳ್ಳಬೇಕು. ಬೇಕು-ಬೇಡಗಳನ್ನು ತೀರ್ಮಾನಿಸುವ ಛಲ ಹೊಂದಬೇಕು. ಆಗ ಮಾತ್ರ ಸರ್ವಾಂಗೀಣ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.