<p>ಹಾಸನ: ನಮ್ಮ ಜನಸಂಖ್ಯೆಯನ್ನು ಗುಣಾತ್ಮಕ ಮಾನವ ಸಂಪತ್ತನ್ನಾಗಿ ಪರಿವರ್ತಿಸಿ, ಅದರ ಸದ್ಬಳಕೆ ಮಾಡಿ ದಾಗ ಮಾತ್ರ ಉತ್ತಮ ರಾಷ್ಟ್ರ ನಿರ್ಮಾಣ ಸಾಧ್ಯ~ ಎಂದು ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ ನುಡಿದರು.<br /> <br /> ನಗರದ ಸರ್ಕಾರಿ ಕಲಾ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ವಿಭಾಗದಲ್ಲಿ ಆಯೋಜಿಸಿದ್ದ ಸಮಗ್ರ ಗುಣಮಟ್ಟ ನಿರ್ವಹಣೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಕಾಲೇಜಿನ ಪ್ರಾಂಶುಪಾಲ ಪ್ರೊ. ಎಚ್.ವಿ. ಲಕ್ಷ್ಮೀ ನಾರಾಯಣ ಮಾತನಾಡಿ, `ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಹೊರತೆಗೆದು ಅವರ ಸಾಮರ್ಥ್ಯದ ಬಗ್ಗೆ ಅವರಲ್ಲೇ ತಿಳಿವ ಳಿಕೆ ಮೂಡಿಸಿ ಮಾನವ ಸಂಪನ್ಮೂಲದ ಸಮರ್ಥ ಬಳಕೆಗೆ ಇಂಥ ತರಬೇತಿಗಳು ಸಹಾಯಕವಾಗುತ್ತವೆ~ ಎಂದರು.<br /> <br /> `ಜಾಗತಿಕ ಮಾರುಕಟ್ಟೆಯಲ್ಲಿ ದೇಶವನ್ನು ಸಮರ್ಥವಾಗಿ ಮುನ್ನಡೆಸಬೇಕಾದರೆ ಗುಣಮಟ್ಟದ ಮಾನವ ಸಂಪನ್ಮೂಲ ಅಗತ್ಯ. ಈ ನಿಟ್ಟಿನಲ್ಲಿ ಸಮಗ್ರ ಗುಣಮಟ್ಟ ನಿರ್ವಹಣೆಯಂಥ ಕಾರ್ಯಕ್ರಮಗಳು ಅನುಕೂಲಕರ~ ಎಂದು ಸ್ನಾತಕೋತ್ತರ ವಿಭಾಗದ ಸಂಯೋಜಕ ಪ್ರೊ. ಡಿ.ಜಿ. ಕೃಷ್ಣೇಗೌಡ ನುಡಿದರು.<br /> <br /> ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಸುನೀತಾ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ ಲಲಿತಾದೇವಿ ಮುಂತಾದವರು ವೇದಿಕೆಯಲ್ಲಿದ್ದರು. ಮಾನಸಾ ಸ್ವಾಗತಿಸಿದರು. ಪುಷ್ಪಾಂಜಲಿ ನಿರೂಪಿಸಿದರು. ತೇಜಸ್ ಕುಮಾರ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ನಮ್ಮ ಜನಸಂಖ್ಯೆಯನ್ನು ಗುಣಾತ್ಮಕ ಮಾನವ ಸಂಪತ್ತನ್ನಾಗಿ ಪರಿವರ್ತಿಸಿ, ಅದರ ಸದ್ಬಳಕೆ ಮಾಡಿ ದಾಗ ಮಾತ್ರ ಉತ್ತಮ ರಾಷ್ಟ್ರ ನಿರ್ಮಾಣ ಸಾಧ್ಯ~ ಎಂದು ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ ನುಡಿದರು.<br /> <br /> ನಗರದ ಸರ್ಕಾರಿ ಕಲಾ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ವಿಭಾಗದಲ್ಲಿ ಆಯೋಜಿಸಿದ್ದ ಸಮಗ್ರ ಗುಣಮಟ್ಟ ನಿರ್ವಹಣೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಕಾಲೇಜಿನ ಪ್ರಾಂಶುಪಾಲ ಪ್ರೊ. ಎಚ್.ವಿ. ಲಕ್ಷ್ಮೀ ನಾರಾಯಣ ಮಾತನಾಡಿ, `ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಹೊರತೆಗೆದು ಅವರ ಸಾಮರ್ಥ್ಯದ ಬಗ್ಗೆ ಅವರಲ್ಲೇ ತಿಳಿವ ಳಿಕೆ ಮೂಡಿಸಿ ಮಾನವ ಸಂಪನ್ಮೂಲದ ಸಮರ್ಥ ಬಳಕೆಗೆ ಇಂಥ ತರಬೇತಿಗಳು ಸಹಾಯಕವಾಗುತ್ತವೆ~ ಎಂದರು.<br /> <br /> `ಜಾಗತಿಕ ಮಾರುಕಟ್ಟೆಯಲ್ಲಿ ದೇಶವನ್ನು ಸಮರ್ಥವಾಗಿ ಮುನ್ನಡೆಸಬೇಕಾದರೆ ಗುಣಮಟ್ಟದ ಮಾನವ ಸಂಪನ್ಮೂಲ ಅಗತ್ಯ. ಈ ನಿಟ್ಟಿನಲ್ಲಿ ಸಮಗ್ರ ಗುಣಮಟ್ಟ ನಿರ್ವಹಣೆಯಂಥ ಕಾರ್ಯಕ್ರಮಗಳು ಅನುಕೂಲಕರ~ ಎಂದು ಸ್ನಾತಕೋತ್ತರ ವಿಭಾಗದ ಸಂಯೋಜಕ ಪ್ರೊ. ಡಿ.ಜಿ. ಕೃಷ್ಣೇಗೌಡ ನುಡಿದರು.<br /> <br /> ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಸುನೀತಾ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ ಲಲಿತಾದೇವಿ ಮುಂತಾದವರು ವೇದಿಕೆಯಲ್ಲಿದ್ದರು. ಮಾನಸಾ ಸ್ವಾಗತಿಸಿದರು. ಪುಷ್ಪಾಂಜಲಿ ನಿರೂಪಿಸಿದರು. ತೇಜಸ್ ಕುಮಾರ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>