<p>ಹಾಸನ: `ಇಂದಿನ ಮಾನವೀಯ ವಿಜ್ಞಾನಗಳಲ್ಲಿ ಅರ್ಥಶಾಸ್ತ್ರ ಶ್ರೇಷ್ಠವಾದುದು~ ಎಂದು ಮೈಸೂರಿನ ಮಾನಸ ಗಂಗೋತ್ರಿ ಸಹಕಾರ ಅಧ್ಯಯನ ವಿಭಾಗದ ಸಹ ಪ್ರಾಧ್ಯಾಪಕ ಡಾ. ಮಹೇಶ್ ನುಡಿದರು.<br /> <br /> ಚನ್ನರಾಯಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಆರ್ಥಿಕ ಚಿಂತಕರ ವೇದಿಕೆಯವರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ `ಅರ್ಥಶಾಸ್ತ್ರದಲ್ಲಿ ಗಣಿತ ಮತ್ತು ಸಂಖ್ಯಾಶಾಸ್ತ್ರದ ಬಳಕೆ~ ವಿಷಯದ ಉಪನ್ಯಾಸ ನೀಡಿದರು.<br /> <br /> ಸಾಮಾನ್ಯ ವಿಜ್ಞಾನವಾದರೆ ಅಂಶಗಳನ್ನು ಪ್ರಾಯೋಗಿಕ ಪರೀಕ್ಷೆಗೆ ಒಳಪಡಿಸಬಹುದು ಅದು ಹೆಚ್ಚು ನಿಖರವಾಗಿರತ್ತದೆ. ಆದರೆ ಮಾನವೀಯ ವಿಜ್ಞಾನದಲ್ಲಿ ಇದು ಅಸಾಧ್ಯ. ಈಚಿನ ದಿನದಲ್ಲಿ ಅರ್ಥಶಾಸ್ತ್ರದಲ್ಲಿ ಗಣಿತ ಹಾಗೂ ಸಂಖ್ಯಾ ಶಾಸ್ತ್ರವನ್ನು ಹೆಚ್ಚಾಗಿ ಬಳಸಲಾಗುತ್ತಿದ್ದು ಆರ್ಥಿಕ ವಿಚಾರಗಳನ್ನೂ ಪ್ರಾಯೋಗಿಕ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈ ಕಾರಣದಿಂದಲೇ ಇದು ಶ್ರೇಷ್ಠವೆನಿಸುತ್ತದೆ~ ಎಂದರು.<br /> <br /> ಪ್ರಾಂಶುಪಾಲ ಪ್ರೊ.ಎಂ.ಕೆ. ಉಮಾನಾಥ್ ಅಧ್ಯಕ್ಷತೆ ವಹಿಸಿದ್ದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ನೇ.ತಿ. ಸೋಮಶೇಖರ್, ಆರ್ಥಿಕ ಚಿಂತಕರ ವೇದಿಕೆಯ ಅಧ್ಯಕ್ಷ ಎಂ.ಎನ್. ಲೋಕೇಶ್ ಉಪನ್ಯಾಸಕ ಎಸ್.ಡಿ. ದಿಲೀಪ್ ಕುಮಾರ್ ಎಚ್.ಎಸ್. ಮಂಜು, ಪ್ರದೀಪ್ ಉಪಸ್ಥಿತರಿದ್ದರು. ದಿವ್ಯಾ ನಿರೂಪಿಸಿದರು, ಮಹಾದೇವ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: `ಇಂದಿನ ಮಾನವೀಯ ವಿಜ್ಞಾನಗಳಲ್ಲಿ ಅರ್ಥಶಾಸ್ತ್ರ ಶ್ರೇಷ್ಠವಾದುದು~ ಎಂದು ಮೈಸೂರಿನ ಮಾನಸ ಗಂಗೋತ್ರಿ ಸಹಕಾರ ಅಧ್ಯಯನ ವಿಭಾಗದ ಸಹ ಪ್ರಾಧ್ಯಾಪಕ ಡಾ. ಮಹೇಶ್ ನುಡಿದರು.<br /> <br /> ಚನ್ನರಾಯಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಆರ್ಥಿಕ ಚಿಂತಕರ ವೇದಿಕೆಯವರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ `ಅರ್ಥಶಾಸ್ತ್ರದಲ್ಲಿ ಗಣಿತ ಮತ್ತು ಸಂಖ್ಯಾಶಾಸ್ತ್ರದ ಬಳಕೆ~ ವಿಷಯದ ಉಪನ್ಯಾಸ ನೀಡಿದರು.<br /> <br /> ಸಾಮಾನ್ಯ ವಿಜ್ಞಾನವಾದರೆ ಅಂಶಗಳನ್ನು ಪ್ರಾಯೋಗಿಕ ಪರೀಕ್ಷೆಗೆ ಒಳಪಡಿಸಬಹುದು ಅದು ಹೆಚ್ಚು ನಿಖರವಾಗಿರತ್ತದೆ. ಆದರೆ ಮಾನವೀಯ ವಿಜ್ಞಾನದಲ್ಲಿ ಇದು ಅಸಾಧ್ಯ. ಈಚಿನ ದಿನದಲ್ಲಿ ಅರ್ಥಶಾಸ್ತ್ರದಲ್ಲಿ ಗಣಿತ ಹಾಗೂ ಸಂಖ್ಯಾ ಶಾಸ್ತ್ರವನ್ನು ಹೆಚ್ಚಾಗಿ ಬಳಸಲಾಗುತ್ತಿದ್ದು ಆರ್ಥಿಕ ವಿಚಾರಗಳನ್ನೂ ಪ್ರಾಯೋಗಿಕ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈ ಕಾರಣದಿಂದಲೇ ಇದು ಶ್ರೇಷ್ಠವೆನಿಸುತ್ತದೆ~ ಎಂದರು.<br /> <br /> ಪ್ರಾಂಶುಪಾಲ ಪ್ರೊ.ಎಂ.ಕೆ. ಉಮಾನಾಥ್ ಅಧ್ಯಕ್ಷತೆ ವಹಿಸಿದ್ದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ನೇ.ತಿ. ಸೋಮಶೇಖರ್, ಆರ್ಥಿಕ ಚಿಂತಕರ ವೇದಿಕೆಯ ಅಧ್ಯಕ್ಷ ಎಂ.ಎನ್. ಲೋಕೇಶ್ ಉಪನ್ಯಾಸಕ ಎಸ್.ಡಿ. ದಿಲೀಪ್ ಕುಮಾರ್ ಎಚ್.ಎಸ್. ಮಂಜು, ಪ್ರದೀಪ್ ಉಪಸ್ಥಿತರಿದ್ದರು. ದಿವ್ಯಾ ನಿರೂಪಿಸಿದರು, ಮಹಾದೇವ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>