<p>ಹಳೇಬೀಡು: ಪಟ್ಟಣದ ಪೊಲೀಸ್ ಉಪಠಾಣೆ ಮೇಲ್ದರ್ಜೆಗೆ ಪರಿವರ್ತನೆಯಾದ ನಂತರ, ಉಪಠಾಣೆಯಿದ್ದ ಹಳೆಯ ಕಟ್ಟಡ ಶಿಥಿಲಾವಸ್ಥೆ ತಲುಪಿದೆ. ಇದರಿಂದ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ.<br /> <br /> ಕಟ್ಟಡದ ಗೋಡೆಗಳ ಮೇಲ್ಪದರ ಮಾತ್ರವಲ್ಲದೇ, ಇಟ್ಟಿಗೆಗಳು ಸಹ ಪುಡಿಯಾಗಿ ಉದುರುತ್ತಿದೆ. ಇಲಿ, ಹೆಗ್ಗಣ, ಹಾವುಗಳು ವಾಸಸ್ಥಾನವನ್ನಾಗಿ ಮಾಡಿಕೊಂಡಿವೆ. ಕಟ್ಟಡದ ಪಕ್ಕದಲ್ಲಿ ಮಕ್ಕಳು ಆಟ ಆಡುತ್ತಾರೆ. ಕಟ್ಟಡ ಕುಸಿದು ಬೀಳುವ ಆತಂಕ ಪೋಷಕರನ್ನು ಕಾಡುತ್ತಿದೆ.<br /> <br /> ಗೃಹರಕ್ಷಕ ದಳದ ಕಚೇರಿಗೆ ಕಟ್ಟಡದ ಅಗತ್ಯವಿದೆ. ಆದ್ದರಿಂದ, ಈ ಕಟ್ಟಡವನ್ನು ಅವರಿಗೆ ವಹಿಸಿದರೆ ಅನುಕೂಲ ಎನ್ನುತ್ತಾರೆ ಮುಖಂಡ ಶಿವಪ್ಪ.<br /> <br /> ಹಳೇಬೀಡು ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸಹಾಯಕ ಸಬ್ಇನ್ಸ್ಪೆಕ್ಟರ್ ಹಾಗೂ ಮಹಿಳಾ ಪೇದೆಗಳಿಗೆ ವಸತಿಗೃಹದ ಅಗತ್ಯತೆ ಇದೆ. ವಸತಿಗೃಹ ನಿರ್ಮಿಸಿದರೆ ಸಿಬ್ಬಂದಿಗೆ ಸೂರು ದೊರಕುವುದಲ್ಲದೇ, ಸುತ್ತಲಿನ ನಿವಾಸಿಗಳಿಗೆ ಸುರಕ್ಷತೆ ನೀಡಿದಂತಾಗುತ್ತದೆ ಎನ್ನುತ್ತಾರೆ ಸೋಮಶೇಖರ್.<br /> <br /> ಇಲಾಖೆಯ ಹಳೆಯ ಕಟ್ಟಡ ಶಿಥಿಲವಾಗಿರುವುದು ನಮ್ಮ ಗಮನಕ್ಕೆ ಬಂದಿದೆ. ಉನ್ನತ ಅಧಿಕಾರಿಗಳಿಗೆ ಕಟ್ಟಡದ ಬಗ್ಗೆ ತಿಳಿಸುತ್ತೇವೆ ಎನ್ನುತ್ತಾರೆ ಸಬ್ಇನ್ಸ್ಪೆಕ್ಟರ್ ಕೆ.ಎಂ. ಮಂಜು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಳೇಬೀಡು: ಪಟ್ಟಣದ ಪೊಲೀಸ್ ಉಪಠಾಣೆ ಮೇಲ್ದರ್ಜೆಗೆ ಪರಿವರ್ತನೆಯಾದ ನಂತರ, ಉಪಠಾಣೆಯಿದ್ದ ಹಳೆಯ ಕಟ್ಟಡ ಶಿಥಿಲಾವಸ್ಥೆ ತಲುಪಿದೆ. ಇದರಿಂದ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ.<br /> <br /> ಕಟ್ಟಡದ ಗೋಡೆಗಳ ಮೇಲ್ಪದರ ಮಾತ್ರವಲ್ಲದೇ, ಇಟ್ಟಿಗೆಗಳು ಸಹ ಪುಡಿಯಾಗಿ ಉದುರುತ್ತಿದೆ. ಇಲಿ, ಹೆಗ್ಗಣ, ಹಾವುಗಳು ವಾಸಸ್ಥಾನವನ್ನಾಗಿ ಮಾಡಿಕೊಂಡಿವೆ. ಕಟ್ಟಡದ ಪಕ್ಕದಲ್ಲಿ ಮಕ್ಕಳು ಆಟ ಆಡುತ್ತಾರೆ. ಕಟ್ಟಡ ಕುಸಿದು ಬೀಳುವ ಆತಂಕ ಪೋಷಕರನ್ನು ಕಾಡುತ್ತಿದೆ.<br /> <br /> ಗೃಹರಕ್ಷಕ ದಳದ ಕಚೇರಿಗೆ ಕಟ್ಟಡದ ಅಗತ್ಯವಿದೆ. ಆದ್ದರಿಂದ, ಈ ಕಟ್ಟಡವನ್ನು ಅವರಿಗೆ ವಹಿಸಿದರೆ ಅನುಕೂಲ ಎನ್ನುತ್ತಾರೆ ಮುಖಂಡ ಶಿವಪ್ಪ.<br /> <br /> ಹಳೇಬೀಡು ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸಹಾಯಕ ಸಬ್ಇನ್ಸ್ಪೆಕ್ಟರ್ ಹಾಗೂ ಮಹಿಳಾ ಪೇದೆಗಳಿಗೆ ವಸತಿಗೃಹದ ಅಗತ್ಯತೆ ಇದೆ. ವಸತಿಗೃಹ ನಿರ್ಮಿಸಿದರೆ ಸಿಬ್ಬಂದಿಗೆ ಸೂರು ದೊರಕುವುದಲ್ಲದೇ, ಸುತ್ತಲಿನ ನಿವಾಸಿಗಳಿಗೆ ಸುರಕ್ಷತೆ ನೀಡಿದಂತಾಗುತ್ತದೆ ಎನ್ನುತ್ತಾರೆ ಸೋಮಶೇಖರ್.<br /> <br /> ಇಲಾಖೆಯ ಹಳೆಯ ಕಟ್ಟಡ ಶಿಥಿಲವಾಗಿರುವುದು ನಮ್ಮ ಗಮನಕ್ಕೆ ಬಂದಿದೆ. ಉನ್ನತ ಅಧಿಕಾರಿಗಳಿಗೆ ಕಟ್ಟಡದ ಬಗ್ಗೆ ತಿಳಿಸುತ್ತೇವೆ ಎನ್ನುತ್ತಾರೆ ಸಬ್ಇನ್ಸ್ಪೆಕ್ಟರ್ ಕೆ.ಎಂ. ಮಂಜು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>