<p><strong>ಅರಸೀಕೆರೆ: </strong> ತಾಲ್ಲೂಕಿನ ಕಲ್ಲುಸಾದರಹಳ್ಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಸುವಂತೆ ಆಗ್ರಹಿಸಿ ಗ್ರಾಮಸ್ಥರು ಕೆಪಿಟಿಸಿಎಲ್ನ ಉಪ ಕೇಂದ್ರ ಕಚೇರಿಗೆ ಭಾನುವಾರ ಬೀಗ ಹಾಕಿ ಪ್ರತಿಭಟನೆ ನಡೆಸಿದರು.<br />ಜಿಲ್ಲಾ ಪಂಚಾಯಿತಿ ಸದಸ್ಯೆ ಪಾರ್ವತಮ್ಮ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಶೀಲಮ್ಮ, ತಾಲ್ಲೂಕು ಪಂಚಾಯಿತಿ ಸದಸ್ಯ ಚಂದ್ರಶೇಖರ್ ಮುಂತಾದವರ ನೇತೃತ್ವದಲ್ಲಿ ಕೇಂದ್ರದ ಮುಂದೆ ಜಮಾಯಿಸಿದ ಗ್ರಾಮಸ್ಥರು ಇಲಾಖೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.<br /><br />ಕಲ್ಲುಸಾದರಹಳ್ಳಿಯಲ್ಲಿಯೇ ಉಪ ಕೇಂದ್ರವಿದ್ದರೂ ಗ್ರಾಮ ಮತ್ತು ಸುತ್ತ-ಮುತ್ತಲ ಹತ್ತಾರು ಹಳ್ಳಿಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಇದರಿಂದ ರೈತರು, ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ದೂರಿದರು. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬಂದು ಸೂಕ್ತ ಕ್ರಮ ಜರುಗಿಸುವ ತನಕ ಪ್ರತಿಭಟನೆ ಕೊನೆಗೊಳಿಸುವುದಿಲ್ಲ ಪಟ್ಟುಹಿಡಿದರು.<br /> <br />ಅರಸೀಕೆರೆ ಮೊದಲೇ ಬರದ ಛಾಯೆಗೆ ಸಿಲುಕಿದ್ದು, ರೈತಸಂಕಷ್ಟದಲ್ಲಿದೆ. ರೈತರು ಬೆಳೆಗಳಿಗೆ ನೀರು ಹಾಯಿಸಿ ಬೆಳೆ ಉಳಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ವಿದ್ಯುತ್ ಸರಬರಾಜಿನಲ್ಲಿ ಸತತ ವ್ಯತ್ಯಯದಿಂದಾಗಿ ಪಂಪ್ಸೆಟ್ ಇದ್ದರೂ ನೀರು ಹಾಯಿಸಲಾಗದ ಸ್ಥಿತಿ ಇದೆ~ ಎಂದು ರೈತರು ದೂರಿದರು. <br /><br />ಬಾಣಾವರ ಎಇಇ ಗಣೇಶ್, ಡಿ.ಎಂ.ಕುರ್ಕೆ ಶಾಖಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಸೀಕೆರೆ: </strong> ತಾಲ್ಲೂಕಿನ ಕಲ್ಲುಸಾದರಹಳ್ಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಸುವಂತೆ ಆಗ್ರಹಿಸಿ ಗ್ರಾಮಸ್ಥರು ಕೆಪಿಟಿಸಿಎಲ್ನ ಉಪ ಕೇಂದ್ರ ಕಚೇರಿಗೆ ಭಾನುವಾರ ಬೀಗ ಹಾಕಿ ಪ್ರತಿಭಟನೆ ನಡೆಸಿದರು.<br />ಜಿಲ್ಲಾ ಪಂಚಾಯಿತಿ ಸದಸ್ಯೆ ಪಾರ್ವತಮ್ಮ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಶೀಲಮ್ಮ, ತಾಲ್ಲೂಕು ಪಂಚಾಯಿತಿ ಸದಸ್ಯ ಚಂದ್ರಶೇಖರ್ ಮುಂತಾದವರ ನೇತೃತ್ವದಲ್ಲಿ ಕೇಂದ್ರದ ಮುಂದೆ ಜಮಾಯಿಸಿದ ಗ್ರಾಮಸ್ಥರು ಇಲಾಖೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.<br /><br />ಕಲ್ಲುಸಾದರಹಳ್ಳಿಯಲ್ಲಿಯೇ ಉಪ ಕೇಂದ್ರವಿದ್ದರೂ ಗ್ರಾಮ ಮತ್ತು ಸುತ್ತ-ಮುತ್ತಲ ಹತ್ತಾರು ಹಳ್ಳಿಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಇದರಿಂದ ರೈತರು, ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ದೂರಿದರು. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬಂದು ಸೂಕ್ತ ಕ್ರಮ ಜರುಗಿಸುವ ತನಕ ಪ್ರತಿಭಟನೆ ಕೊನೆಗೊಳಿಸುವುದಿಲ್ಲ ಪಟ್ಟುಹಿಡಿದರು.<br /> <br />ಅರಸೀಕೆರೆ ಮೊದಲೇ ಬರದ ಛಾಯೆಗೆ ಸಿಲುಕಿದ್ದು, ರೈತಸಂಕಷ್ಟದಲ್ಲಿದೆ. ರೈತರು ಬೆಳೆಗಳಿಗೆ ನೀರು ಹಾಯಿಸಿ ಬೆಳೆ ಉಳಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ವಿದ್ಯುತ್ ಸರಬರಾಜಿನಲ್ಲಿ ಸತತ ವ್ಯತ್ಯಯದಿಂದಾಗಿ ಪಂಪ್ಸೆಟ್ ಇದ್ದರೂ ನೀರು ಹಾಯಿಸಲಾಗದ ಸ್ಥಿತಿ ಇದೆ~ ಎಂದು ರೈತರು ದೂರಿದರು. <br /><br />ಬಾಣಾವರ ಎಇಇ ಗಣೇಶ್, ಡಿ.ಎಂ.ಕುರ್ಕೆ ಶಾಖಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>