ಜಾತಿ ಗಣತಿ ಹೆಸರಲ್ಲಿ ಜಾತಿ, ಜಾತಿಗಳ ನಡುವೆ ಮೇಲು– ಕೀಳು ಎಂಬ ಕಂದಕ ಸೃಷ್ಟಿಸುತ್ತಿದ್ದಾರೆ. ಜನರಲ್ಲಿ ಪರೋಕ್ಷವಾಗಿ ಜಾತಿಯ ಬೀಜ ಬಿತ್ತುತ್ತಿದ್ದಾರೆ. ರಾಜ್ಯದಲ್ಲಿ ಗೋ ಹತ್ಯೆ ರಾಜಾರೋಷವಾಗಿ ನಡೆಯುತ್ತಿದೆ. ಇದನ್ನು ತಡೆಯಲು ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಗೋ ಹತ್ಯೆಯನ್ನು ನಿಷೇಧ ಕಾಯ್ದೆ ಜಾರಿಗೆ ತರಬೇಕು ಎಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿತ್ತು. ಆಗ ರಾಜ್ಯಪಾಲರು ಮನವಿ ತಿರಸ್ಕರಿಸಿ ಕೇಂದ್ರಕ್ಕೆ ಕಳುಹಿಸಿದ್ದರು’ ಎಂದು ಅಸಮಾಧಾನ ವ್ಯಕ್ತಪಡಿಸಿದರು.