<p><strong>ಹಾಸನ: </strong>`ಬೆಂಗಳೂರು ಹಾಸನ ಚತುಷ್ಪಥ ರಸ್ತೆಯ ಕಾಮಗಾರಿ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ~ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ತಿಳಿಸಿದರು. ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಪತ್ರಕರ್ತರೊಡನೆ ಮಾತನಾಡುತ್ತ ಅವರು ಈ ವಿಚಾರ ತಿಳಿಸಿದರು.<br /> <br /> `ಮುಂದೆ ಹಾಸನ ಬಿ.ಸಿ ರೋಡ್ ಚತುಷ್ಪಥ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕಾಗಿದ್ದು, ಇದಕ್ಕೆ ಎರಡು ಪ್ರತ್ಯೇಕ ಪ್ರಸ್ತಾವನೆಗಳನ್ನು ಸಲ್ಲಿಸಲಾಗಿದೆ. ಪಶ್ಚಿಮ ಘಟ್ಟ ಭಾಗದಲ್ಲಿ ಈಗ ಇರುವ ರಸ್ತೆಯನ್ನೇ ಅಗಲಗೊಳಿಸುವುದು ಅಥವಾ ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ಸುರಂಗ ಮಾರ್ಗ ಮಾಡುವುದು ಇದರಲ್ಲಿ ಸೇರಿವೆ. <br /> <br /> ಇರುವ ರಸ್ತೆ ಅಗಲಗೊಳಿಸಲು ಕಿ.ಮೀ. ಒಂದಕ್ಕೆ 10 ರಿಂದ 14 ಕೋಟಿ ರೂಪಾಯಿ ವೆಚ್ಚ ಬರುವುದಾದರೆ, ಸುರಂಗ ಮಾರ್ಗಕ್ಕೆ ಕಿ.ಮೀ. ಒಂದಕ್ಕೆ 175ಕೋಟಿ ರೂಪಾಯಿ ವೆಚ್ಚ ಬರಲಿದೆ. ಕೇಂದ್ರ ಸರ್ಕಾರದ ಉನ್ನತ ಮಟ್ಟದ ಸಮಿತಿ ಸದಸ್ಯರು ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವರು. ಈ ಯೋಜನೆಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಪರಿಸರ ಇಲಾಖೆಯ ಸಚಿವರು, ಅಗತ್ಯಬಿದ್ದರೆ ಪ್ರಧಾನಿಯವರನ್ನೂ ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ ಎಂದು ದೇವೇಗೌಡ ತಿಳಿಸಿದರು.<br /> <br /> ಜಿಲ್ಲೆಯ ಕಾಡಾನೆ ಸಮಸ್ಯೆ ನನ್ನ ಗಮನಕ್ಕೆ ಬಂದಿದೆ. ಇಲ್ಲಿ ರೈತರು ಮಾತ್ರವಲ್ಲ ಕಾಡು ಪ್ರಾಣಿಗಳಿಗೂ ತೊಂದರೆಯಾಗದ ರೀತಿಯಲ್ಲಿ ಯೋಜನೆ ರೂಪಿಸಬೇಕಾಗಿದೆ. ಸಮಸ್ಯೆಗೆ ಶೀಘ್ರದಲ್ಲೇ ಸೂಕ್ತ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.<br /> <br /> ತನ್ನ ಕ್ಷೇತ್ರಾಭಿವೃದ್ಧಿ ನಿಧಿಯಲ್ಲಿ ಕೈಗೆತ್ತಿಕೊಂಡಿರುವ 177 ಕಾಮಗಾರಿಗಳಲ್ಲಿ 160 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಒಟ್ಟು 16 ಕೋಟಿ ರೂಪಾಯಿಯಲ್ಲಿ ರೂ. 14 ಕೋಟಿ ವೆಚ್ಚವಾಗಿದೆ. ಉಳಿದ 2 ಕೋಟಿ ರೂಪಾಯಿಯಲ್ಲಿ ಬಾಕಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.<br /> <br /> ಬಿಜೆಪಿಯ ಕೆಲವು ಮಾಜಿ ಸಚಿವರು ಜೆಡಿಎಸ್ ಸೇರ್ಪಡೆಗೆ ಸಂಬಂಧಿಸಿದಂತೆ ಹಬ್ಬಿರುವ ಸುದ್ದಿಯ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು, `ನನಗೆ ರಕ್ತದೊತ್ತಡ ಇರುವುದರಿಂದ ಕೆಲವು ದಿನಗಳಿಂದ ಟಿ.ವಿ. ನೋಡುವುದನ್ನೇ ಬಿಟ್ಟಿದ್ದೇನೆ. ಈ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ವಿಷಯ ತಿಳಿದ ಬಳಿಕವಷ್ಟೇ ಪ್ರತಿಕ್ರಿಯೆ ನೀಡುತ್ತೇನೆ~ ಎಂದರು.<br /> <br /> ಇದಕ್ಕೂ ಮೊದಲು ನಡೆದ ಅಧಿಕಾರಿಗಳ ಸಭೆಯಲ್ಲಿ ಶಾಸಕರಾದ ಎಚ್.ಡಿ. ರೇವಣ್ಣ, ಎಚ್.ಎಸ್. ಪ್ರಕಾಶ್, ಎಚ್.ಕೆ. ಕುಮಾರಸ್ವಾಮಿ ಮತ್ತಿತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>`ಬೆಂಗಳೂರು ಹಾಸನ ಚತುಷ್ಪಥ ರಸ್ತೆಯ ಕಾಮಗಾರಿ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ~ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ತಿಳಿಸಿದರು. ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಪತ್ರಕರ್ತರೊಡನೆ ಮಾತನಾಡುತ್ತ ಅವರು ಈ ವಿಚಾರ ತಿಳಿಸಿದರು.<br /> <br /> `ಮುಂದೆ ಹಾಸನ ಬಿ.ಸಿ ರೋಡ್ ಚತುಷ್ಪಥ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕಾಗಿದ್ದು, ಇದಕ್ಕೆ ಎರಡು ಪ್ರತ್ಯೇಕ ಪ್ರಸ್ತಾವನೆಗಳನ್ನು ಸಲ್ಲಿಸಲಾಗಿದೆ. ಪಶ್ಚಿಮ ಘಟ್ಟ ಭಾಗದಲ್ಲಿ ಈಗ ಇರುವ ರಸ್ತೆಯನ್ನೇ ಅಗಲಗೊಳಿಸುವುದು ಅಥವಾ ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ಸುರಂಗ ಮಾರ್ಗ ಮಾಡುವುದು ಇದರಲ್ಲಿ ಸೇರಿವೆ. <br /> <br /> ಇರುವ ರಸ್ತೆ ಅಗಲಗೊಳಿಸಲು ಕಿ.ಮೀ. ಒಂದಕ್ಕೆ 10 ರಿಂದ 14 ಕೋಟಿ ರೂಪಾಯಿ ವೆಚ್ಚ ಬರುವುದಾದರೆ, ಸುರಂಗ ಮಾರ್ಗಕ್ಕೆ ಕಿ.ಮೀ. ಒಂದಕ್ಕೆ 175ಕೋಟಿ ರೂಪಾಯಿ ವೆಚ್ಚ ಬರಲಿದೆ. ಕೇಂದ್ರ ಸರ್ಕಾರದ ಉನ್ನತ ಮಟ್ಟದ ಸಮಿತಿ ಸದಸ್ಯರು ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವರು. ಈ ಯೋಜನೆಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಪರಿಸರ ಇಲಾಖೆಯ ಸಚಿವರು, ಅಗತ್ಯಬಿದ್ದರೆ ಪ್ರಧಾನಿಯವರನ್ನೂ ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ ಎಂದು ದೇವೇಗೌಡ ತಿಳಿಸಿದರು.<br /> <br /> ಜಿಲ್ಲೆಯ ಕಾಡಾನೆ ಸಮಸ್ಯೆ ನನ್ನ ಗಮನಕ್ಕೆ ಬಂದಿದೆ. ಇಲ್ಲಿ ರೈತರು ಮಾತ್ರವಲ್ಲ ಕಾಡು ಪ್ರಾಣಿಗಳಿಗೂ ತೊಂದರೆಯಾಗದ ರೀತಿಯಲ್ಲಿ ಯೋಜನೆ ರೂಪಿಸಬೇಕಾಗಿದೆ. ಸಮಸ್ಯೆಗೆ ಶೀಘ್ರದಲ್ಲೇ ಸೂಕ್ತ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.<br /> <br /> ತನ್ನ ಕ್ಷೇತ್ರಾಭಿವೃದ್ಧಿ ನಿಧಿಯಲ್ಲಿ ಕೈಗೆತ್ತಿಕೊಂಡಿರುವ 177 ಕಾಮಗಾರಿಗಳಲ್ಲಿ 160 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಒಟ್ಟು 16 ಕೋಟಿ ರೂಪಾಯಿಯಲ್ಲಿ ರೂ. 14 ಕೋಟಿ ವೆಚ್ಚವಾಗಿದೆ. ಉಳಿದ 2 ಕೋಟಿ ರೂಪಾಯಿಯಲ್ಲಿ ಬಾಕಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.<br /> <br /> ಬಿಜೆಪಿಯ ಕೆಲವು ಮಾಜಿ ಸಚಿವರು ಜೆಡಿಎಸ್ ಸೇರ್ಪಡೆಗೆ ಸಂಬಂಧಿಸಿದಂತೆ ಹಬ್ಬಿರುವ ಸುದ್ದಿಯ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು, `ನನಗೆ ರಕ್ತದೊತ್ತಡ ಇರುವುದರಿಂದ ಕೆಲವು ದಿನಗಳಿಂದ ಟಿ.ವಿ. ನೋಡುವುದನ್ನೇ ಬಿಟ್ಟಿದ್ದೇನೆ. ಈ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ವಿಷಯ ತಿಳಿದ ಬಳಿಕವಷ್ಟೇ ಪ್ರತಿಕ್ರಿಯೆ ನೀಡುತ್ತೇನೆ~ ಎಂದರು.<br /> <br /> ಇದಕ್ಕೂ ಮೊದಲು ನಡೆದ ಅಧಿಕಾರಿಗಳ ಸಭೆಯಲ್ಲಿ ಶಾಸಕರಾದ ಎಚ್.ಡಿ. ರೇವಣ್ಣ, ಎಚ್.ಎಸ್. ಪ್ರಕಾಶ್, ಎಚ್.ಕೆ. ಕುಮಾರಸ್ವಾಮಿ ಮತ್ತಿತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>