<p><strong>ಹಾಸನ:</strong> ‘ಹಾಸನಾಂಬ ವೈದ್ಯಕೀಯ ಕಾಲೇಜು ಹಾಗೂ ಜಿಲ್ಲಾ ಆಸ್ಪತ್ರೆಯ ಮೂಲಸೌಕರ್ಯ ಅಭಿವೃದ್ಧಿಗೆ ₹ 171 ಕೋಟಿ ವೆಚ್ಚದ ಯೋಜನೆ ರೂಪಿಸಿದ್ದು, ಅನುಮೋದನೆ ಪಡೆದು ಶೀಘ್ರವೇ ಅನುದಾನ ಒದಗಿಸಲಾಗುವುದು’ ಎಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ತಿಳಿಸಿದರು.</p>.<p>ನಗರದ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ್ದ ಅವರು, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ನಂತರ ಹಿಮ್ಸ್ ನಿರ್ದೇಶಕ ಕಚೇರಿಯಲ್ಲಿ ಸುದ್ದಿಗಾರರಿಗೆ ಈ ಮಾಹಿತಿ ತಿಳಿಸಿದರು.</p>.<p>ಜಿಲ್ಲಾ ಆಸ್ಪತ್ರೆಯ ಹಾಲಿ ಕಟ್ಟಡವನ್ನು 7 ಅಂತಸ್ತಿಗೇರಿಸುವ ಯೋಜನೆಗೆ ₹ 135 ಕೋಟಿ, ವೈದ್ಯಕೀಯ ಹಾಗೂ ಸ್ನಾತ್ತಕೋತ್ತರ ವಿಧ್ಯಾರ್ಥಿಗಳ ವಸತಿನಿಲಯ ಕಟ್ಟಡಗಳಿಗೆ ₹ 24 ಕೋಟಿ ಮತ್ತು ನರ್ಸ್ಗಳ ವಸತಿ ನಿಲಯಕ್ಕೆ ₹ 12 ಕೋಟಿ ಅಂದಾಜಿಸಲಾಗಿದೆ ಎಂದು ಮಾಹಿತಿ ನೀಡಿದರು.</p>.<p>ಜಿಲ್ಲಾ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯ ಒದಗಿಸಲಾಗುವುದು. ಖಾಲಿ ಇರುವ ಬೋಧಕ, ಬೋಧಕೇತರ ಸ್ಥಾನಗಳನ್ನು ಭರ್ತಿ ಮಾಡಲಾಗುವುದು. ಸುಸಜ್ಜಿತ ಹೆರಿಗೆ ಹಾಗೂ ನವಜಾತ ಶಿಶುಗಳ ವಾರ್ಡ್ ಘಟಕ ಸ್ಥಾಪಿಸುವ ಚಿಂತನೆ ಕೂಡ ಇದೆ ಎಂದು ಹೇಳಿದರು.</p>.<p>’ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಬೇಕು. ಸಕಾರಣ ಇಲ್ಲದೆ ಸುಳ್ಳು ನೆಪ ಹೇಳಿ ಚಿಕಿತ್ಸೆ ನೀಡದೆ ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸಿದರೆ ಶಿಸ್ತುಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಸಿದರು.</p>.<p>ಹಾಸನ ಜಿಲ್ಲಾಸ್ಪತ್ರೆಯನ್ನು ರಾಜ್ಯಕ್ಕೆ ಮಾದರಿ ಆಗಿಸಬೇಕು. ಇದಕ್ಕೆ ನಿರ್ದೇಶಕರು, ಜಿಲ್ಲಾ ಶಸ್ತ್ರಚಿಕಿತ್ಸಕರ ಪ್ರಯತ್ನ, ವೈದ್ಯಾಧಿಕಾರಿಗಳ ಸಹಕಾರ ಅಗತ್ಯ ಎಂದು ಹೇಳಿದರು.</p>.<p>‘ಜಿಲ್ಲಾಸ್ಪತ್ರೆ ಮೇಲ್ದರ್ಜೇಗೇರಿಸುವ ಕುರಿತು ಆಗಲೇ ಬೆಂಗಳೂರಿನಲ್ಲಿ ಒಂದು ಸುತ್ತಿನ ಸಭೆ ನಡೆದಿದೆ. ಮುಖ್ಯಮಂತ್ರಿಗೂ ಮನವಿ ಮಾಡಲಾಗಿದೆ. ಹೃದಯ ಚಿಕಿತ್ಸಾ ಕೇಂದ್ರ ಈ ವರ್ಷವೇ ಆರಂಭವಾಗಲಿದೆ. ನರ್ಸ್ಗಳ ವಸತಿ ನಿಲಯವನ್ನು 48ಕ್ಕೆ ಏರಿಸಲಾಗುವುದು’ ಎಂದು ಸಚಿವರು ವಿವರಿಸಿದರು.</p>.<p>108 ಆಂಬುಲೆನ್ಸ್ಗಳು ಖಾಸಗಿ ಆಸ್ಪತ್ರೆಗಳ ಪರ ಕೆಲಸ ಮಾಡುವುದು ಗಮನಕ್ಕೆ ಬಂದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.</p>.<p>ಹಿಮ್ಸ್ ನಿರ್ದೇಶಕ ಡಾ.ರವಿಕುಮಾರ್, ಆಡಳಿತಾಧಿಕಾರಿ ಚಿದಾನಂದ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಂಕರ್ ಇದ್ದರು.</p>.<p><strong>ವಿದ್ಯಾರ್ಥಿಗಳಿಗೆ ಪ್ರತ್ಯೇಕ ಬಸ್</strong></p>.<p><br />ಗ್ರಾಮೀಣ ಪ್ರದೇಶದಿಂದ ಬರುವ ಶಾಲಾ, ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡುವುದಾಗಿ ರೇವಣ್ಣ ಹೇಳಿದರು. ಮಂಗಳವಾರದಿಂದಲೇ ಎಲ್ಲ ತಾಲ್ಲೂಕು ಕೇಂದ್ರಗಳಿಂದ ಶಾಲಾ ಕಾಲೇಜು ಅವಧಿಯಲ್ಲಿ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಲಾಗುವುದು ಎಂದರು.</p>.<p><strong>ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಚಿಂತನೆ</strong><br />‘ಹಿಂದೆ ನಾನು ಸಚಿವನಾಗಿದ್ದಾಗ ಬೂವನಹಳ್ಳಿ ಸಮೀಪ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಭೂಮಿ ಸ್ವಾಧೀನ ಪಡೆಯಲಾಗಿತ್ತು. ಬಳಿಕ ಅದು ನನೆಗುದಿಗೆ ಬಿದ್ದಿತ್ತು. ಅಧಿಕಾರಿಗಳ ಜೊತೆಗೆ ಈ ಕುರಿತು ಚರ್ಚಿಸಲಾಗುವುದು’ ಎಂದು ತಿಳಿಸಿದರು.</p>.<p><strong>ಆರ್ಟಿಒ ವಿರುದ್ಧ ಕ್ರಮ</strong><br />‘ಹಾಸನದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಮೂವರು ಏಜೆಂಟರು ಜನರಿಂದ ಹಣ ವಸೂಲಿ ಮಾಡುತ್ತಿರುವ ಮಾಹಿತಿ ಇದೆ. ಇದು ಸಾಬೀತಾದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ರೇವಣ್ಣ ಹೇಳಿದರು.</p>.<p>‘ಜಿಲ್ಲೆಯಲ್ಲಿ ಎಸಿಬಿ ಮತ್ತು ಲೋಕಾಯುಕ್ತ ಅಧಿಕಾರಿಗಳು ಇನ್ನಷ್ಟು ಚುರುಕಾಗಿ ಕೆಲಸ ಮಾಡಬೇಕಿದೆ. ಭ್ರಷ್ಟಾಚಾರ ಮಟ್ಟ ಹಾಕಿ ಸಾರ್ವಜನಿಕರಿಗೆ ಉತ್ತಮ ಆಡಳಿತ ನೀಡಬೇಕು.’<br /><strong>- ಎಚ್.ಡಿ.ರೇವಣ್ಣ, ಸಚಿವ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ‘ಹಾಸನಾಂಬ ವೈದ್ಯಕೀಯ ಕಾಲೇಜು ಹಾಗೂ ಜಿಲ್ಲಾ ಆಸ್ಪತ್ರೆಯ ಮೂಲಸೌಕರ್ಯ ಅಭಿವೃದ್ಧಿಗೆ ₹ 171 ಕೋಟಿ ವೆಚ್ಚದ ಯೋಜನೆ ರೂಪಿಸಿದ್ದು, ಅನುಮೋದನೆ ಪಡೆದು ಶೀಘ್ರವೇ ಅನುದಾನ ಒದಗಿಸಲಾಗುವುದು’ ಎಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ತಿಳಿಸಿದರು.</p>.<p>ನಗರದ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ್ದ ಅವರು, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ನಂತರ ಹಿಮ್ಸ್ ನಿರ್ದೇಶಕ ಕಚೇರಿಯಲ್ಲಿ ಸುದ್ದಿಗಾರರಿಗೆ ಈ ಮಾಹಿತಿ ತಿಳಿಸಿದರು.</p>.<p>ಜಿಲ್ಲಾ ಆಸ್ಪತ್ರೆಯ ಹಾಲಿ ಕಟ್ಟಡವನ್ನು 7 ಅಂತಸ್ತಿಗೇರಿಸುವ ಯೋಜನೆಗೆ ₹ 135 ಕೋಟಿ, ವೈದ್ಯಕೀಯ ಹಾಗೂ ಸ್ನಾತ್ತಕೋತ್ತರ ವಿಧ್ಯಾರ್ಥಿಗಳ ವಸತಿನಿಲಯ ಕಟ್ಟಡಗಳಿಗೆ ₹ 24 ಕೋಟಿ ಮತ್ತು ನರ್ಸ್ಗಳ ವಸತಿ ನಿಲಯಕ್ಕೆ ₹ 12 ಕೋಟಿ ಅಂದಾಜಿಸಲಾಗಿದೆ ಎಂದು ಮಾಹಿತಿ ನೀಡಿದರು.</p>.<p>ಜಿಲ್ಲಾ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯ ಒದಗಿಸಲಾಗುವುದು. ಖಾಲಿ ಇರುವ ಬೋಧಕ, ಬೋಧಕೇತರ ಸ್ಥಾನಗಳನ್ನು ಭರ್ತಿ ಮಾಡಲಾಗುವುದು. ಸುಸಜ್ಜಿತ ಹೆರಿಗೆ ಹಾಗೂ ನವಜಾತ ಶಿಶುಗಳ ವಾರ್ಡ್ ಘಟಕ ಸ್ಥಾಪಿಸುವ ಚಿಂತನೆ ಕೂಡ ಇದೆ ಎಂದು ಹೇಳಿದರು.</p>.<p>’ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಬೇಕು. ಸಕಾರಣ ಇಲ್ಲದೆ ಸುಳ್ಳು ನೆಪ ಹೇಳಿ ಚಿಕಿತ್ಸೆ ನೀಡದೆ ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸಿದರೆ ಶಿಸ್ತುಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಸಿದರು.</p>.<p>ಹಾಸನ ಜಿಲ್ಲಾಸ್ಪತ್ರೆಯನ್ನು ರಾಜ್ಯಕ್ಕೆ ಮಾದರಿ ಆಗಿಸಬೇಕು. ಇದಕ್ಕೆ ನಿರ್ದೇಶಕರು, ಜಿಲ್ಲಾ ಶಸ್ತ್ರಚಿಕಿತ್ಸಕರ ಪ್ರಯತ್ನ, ವೈದ್ಯಾಧಿಕಾರಿಗಳ ಸಹಕಾರ ಅಗತ್ಯ ಎಂದು ಹೇಳಿದರು.</p>.<p>‘ಜಿಲ್ಲಾಸ್ಪತ್ರೆ ಮೇಲ್ದರ್ಜೇಗೇರಿಸುವ ಕುರಿತು ಆಗಲೇ ಬೆಂಗಳೂರಿನಲ್ಲಿ ಒಂದು ಸುತ್ತಿನ ಸಭೆ ನಡೆದಿದೆ. ಮುಖ್ಯಮಂತ್ರಿಗೂ ಮನವಿ ಮಾಡಲಾಗಿದೆ. ಹೃದಯ ಚಿಕಿತ್ಸಾ ಕೇಂದ್ರ ಈ ವರ್ಷವೇ ಆರಂಭವಾಗಲಿದೆ. ನರ್ಸ್ಗಳ ವಸತಿ ನಿಲಯವನ್ನು 48ಕ್ಕೆ ಏರಿಸಲಾಗುವುದು’ ಎಂದು ಸಚಿವರು ವಿವರಿಸಿದರು.</p>.<p>108 ಆಂಬುಲೆನ್ಸ್ಗಳು ಖಾಸಗಿ ಆಸ್ಪತ್ರೆಗಳ ಪರ ಕೆಲಸ ಮಾಡುವುದು ಗಮನಕ್ಕೆ ಬಂದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.</p>.<p>ಹಿಮ್ಸ್ ನಿರ್ದೇಶಕ ಡಾ.ರವಿಕುಮಾರ್, ಆಡಳಿತಾಧಿಕಾರಿ ಚಿದಾನಂದ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಂಕರ್ ಇದ್ದರು.</p>.<p><strong>ವಿದ್ಯಾರ್ಥಿಗಳಿಗೆ ಪ್ರತ್ಯೇಕ ಬಸ್</strong></p>.<p><br />ಗ್ರಾಮೀಣ ಪ್ರದೇಶದಿಂದ ಬರುವ ಶಾಲಾ, ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡುವುದಾಗಿ ರೇವಣ್ಣ ಹೇಳಿದರು. ಮಂಗಳವಾರದಿಂದಲೇ ಎಲ್ಲ ತಾಲ್ಲೂಕು ಕೇಂದ್ರಗಳಿಂದ ಶಾಲಾ ಕಾಲೇಜು ಅವಧಿಯಲ್ಲಿ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಲಾಗುವುದು ಎಂದರು.</p>.<p><strong>ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಚಿಂತನೆ</strong><br />‘ಹಿಂದೆ ನಾನು ಸಚಿವನಾಗಿದ್ದಾಗ ಬೂವನಹಳ್ಳಿ ಸಮೀಪ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಭೂಮಿ ಸ್ವಾಧೀನ ಪಡೆಯಲಾಗಿತ್ತು. ಬಳಿಕ ಅದು ನನೆಗುದಿಗೆ ಬಿದ್ದಿತ್ತು. ಅಧಿಕಾರಿಗಳ ಜೊತೆಗೆ ಈ ಕುರಿತು ಚರ್ಚಿಸಲಾಗುವುದು’ ಎಂದು ತಿಳಿಸಿದರು.</p>.<p><strong>ಆರ್ಟಿಒ ವಿರುದ್ಧ ಕ್ರಮ</strong><br />‘ಹಾಸನದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಮೂವರು ಏಜೆಂಟರು ಜನರಿಂದ ಹಣ ವಸೂಲಿ ಮಾಡುತ್ತಿರುವ ಮಾಹಿತಿ ಇದೆ. ಇದು ಸಾಬೀತಾದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ರೇವಣ್ಣ ಹೇಳಿದರು.</p>.<p>‘ಜಿಲ್ಲೆಯಲ್ಲಿ ಎಸಿಬಿ ಮತ್ತು ಲೋಕಾಯುಕ್ತ ಅಧಿಕಾರಿಗಳು ಇನ್ನಷ್ಟು ಚುರುಕಾಗಿ ಕೆಲಸ ಮಾಡಬೇಕಿದೆ. ಭ್ರಷ್ಟಾಚಾರ ಮಟ್ಟ ಹಾಕಿ ಸಾರ್ವಜನಿಕರಿಗೆ ಉತ್ತಮ ಆಡಳಿತ ನೀಡಬೇಕು.’<br /><strong>- ಎಚ್.ಡಿ.ರೇವಣ್ಣ, ಸಚಿವ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>