ಗೋದಾಮಿನ ಚಾವಿ ತೆಗೆಯಲು ಅಧಿಕಾರಿಗಳು ಹಿಂದೇಟು ಹಾಕಿದಾಗ, ಎಪಿಎಂಸಿ ಅಧ್ಯಕ್ಷರ ಸಮ್ಮುಖದಲ್ಲೇ ರೈತ ಮುಖಂಡರು ಗೋದಾಮಿನ ಬೀಗ ಒಡೆದರು. ನೂರಾರು ಚೀಲ ಯೂರಿಯಾ ದಾಸ್ತಾನು ಮಾಡಿದ್ದು ಕಂಡು ಬಂದಿತು. ಈ ಯೂರಿಯಾ ಯಾರಿಗೆ ಸೇರಿದ್ದು ಎಂಬ ಬಗ್ಗೆ ಫೆಡರೇಷನ್ ಮತ್ತು ಕೃಷಿ ಅಧಿಕಾರಿಗಳಿಂದ ಸಮರ್ಪಕ ಉತ್ತರ ಸಿಗಲಿಲ್ಲ. ಸೂಕ್ತ ತನಿಖೆ ನಡೆಸಬೇಕು, ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ರೈತ ಮುಖಂಡರು ಒತ್ತಾಯಿಸಿದ್ದಾರೆ.