‘ನಮ್ಮ ಜಿಲ್ಲೆಯಲ್ಲಿ ಕೋವಿಡ್ನಿಂದ ತಂದೆ ಮತ್ತು ತಾಯಿ ಇಬ್ಬರನ್ನೂ ಕಳೆದುಕೊಂಡು ಮಕ್ಕಳು ಅನಾಥರಾದ ಪ್ರಕರಣಗಳು ಇದುವರೆಗೂ ಕಂಡು ಬಂದಿಲ್ಲ. ತಂದೆ ಅಥವಾ ತಾಯಿ ಕಳೆದುಕೊಂಡು ತಬ್ಬಲಿಯಾದ ಮಕ್ಕಳು ಆರ್ಥಿಕ ನೆರವು ನಿರಾಕರಿಸಿದರೆ, ಹಾಸ್ಟೆಲ್ ಸೌಲಭ್ಯ ಕಲ್ಪಿಸುತ್ತೇವೆ. ಅನಾಥ ಮಕ್ಕಳಿಗೆ 18 ವರ್ಷದವರೆಗೆ ಬಾಲ ಮಂದಿರದಲ್ಲಿ ಉಚಿತ ಊಟ, ವಸತಿ, ಶಿಕ್ಷಣ, ಕೌಶಲ ತರಬೇತಿ ನೀಡಿ, ಭವಿಷ್ಯ ರೂಪಿಸಿಕೊಳ್ಳಲು ಅವಕಾಶ ಕಲ್ಪಿಸುತ್ತೇವೆ’ ಎಂದು ತಿಳಿಸಿದರು.