<p><strong>ರಾಣೆಬೆನ್ನೂರು</strong>: ತಾಲ್ಲೂಕಿನ ಮೆಡ್ಲೇರಿ, ರಾಣೆಬೆನ್ನೂರು ಮತ್ತು ಕುಪ್ಪೇಲೂರ ಈ ಮೂರು ಹೋಬಳಿಗಳಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಕಟಾವಿಗೆ ಬಂದ ಭತ್ತ, ಮೆಕ್ಕೆಜೋಳ ಮತ್ತು ಈರುಳ್ಳಿ ಬೆಳೆಗಳು ಸಂಪೂರ್ಣ ಹಾನಿಯಾಗಿವೆ.</p>.<p>ತೇವಾಂಶ ಹೆಚ್ಚಾಗಿ ಮೆಕ್ಕೆಜೋಳಕ್ಕೆ ಲದ್ದಿ ಹುಳ, ಭತ್ತಕ್ಕೆ ಗಂಧಿಹುಳ ಕಾಟ ಹೆಚ್ಚಾಗಿದ್ದರಿಂದ ರೈತರು ಸಾಲ ಸೂಲ ಮಾಡಿ ಕ್ರಿಮಿನಾಶಕ ತಂದು ಸಿಂಪಡಿಸಿದ್ದರು. ಅದು ಕೂಡ ಮಳೆಗೆ ನೀರಿನಲ್ಲಿ ಹೋಮ ಮಾಡಿದಂತಾಗಿದೆ.</p>.<p class="Subhead"><strong>ಕೊಳೆತ ಈರುಳ್ಳಿ:</strong></p>.<p>ತಾಲ್ಲೂಕಿನ ಬೆನಕನಕೊಂಡ ಗ್ರಾಮದ ಶಿವಕುಮಾರ ಬಲಿಗೇರ ಮತ್ತು ಎಸ್.ಎಂ. ಮಲಗೌಡ್ರ ಎಂಬುವರಿಗೆ ಸೇರಿದ ಈರುಳ್ಳಿ ಕಿತ್ತು ಗೂಡು ಹಾಕಿದ್ದು ಕೊಳೆತು ನಾರುತ್ತಿದೆ. ಅಲ್ಲದೇ ಹಸಿ ಮೆಣಸಿನ ಗಿಡಗಳು ತೇವಾಂಶ ಹೆಚ್ಚಾಗಿ ರೋಗಕ್ಕೀಡಾಗಿವೆ. ಹರನಗಿರಿ ಗ್ರಾಮದಲ್ಲಿ ಸೋಮರಡ್ಡಿ ರಾಯರಡ್ಡಿ, ಮಂಜಪ್ಪ ಕುಪ್ಪೇಲೂರ, ನಾಗರಾಜ ಐರಣಿ ಅವರು ಸೇರಿದಂತೆ 40 ಎಕರೆಗೂ ಹೆಚ್ಚು ಭತ್ತದ ಬೆಳೆ ಹಾನಿಗೊಂಡಿದೆ.</p>.<p>‘ಭತ್ತ ಬೆಳೆದ ಪ್ರತಿ ರೈತರು ಬೆಳೆವಿಮೆ ಮಾಡಿಸಿದ್ದರಿಂದ ಹಾನಿಗೊಂಡ ಬಗ್ಗೆ ಸಮೀಕ್ಷೆ ಮಾಡಿ ವಿಮಾ ಕಂಪನಿಗೆ ವರದಿ ಸಲ್ಲಿಸಲಾಗಿದೆ’ ಎಂದು ಸಹಾಯಕ ಕೃಷಿ ನಿರ್ದೇಶಕ ಎಚ್.ಬಿ. ಗೌಡಪ್ಪಳವರ ತಿಳಿಸಿದ್ದಾರೆ.</p>.<p>ಒಟ್ಟಾರೆ ತಾಲ್ಲೂಕಿನಾದ್ಯಂತ ಹೆಚ್ಚಿನ ಮಳೆಗೆ ತೇವಾಂಶದಿಂದ 1,695 ಹೆಕ್ಟೇರ್ ಈರುಳ್ಳಿ ಬೆಳೆ ನಾಶವಾಗಿದೆ ಎಂದು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮೀ ತಿಳಿಸಿದ್ದಾರೆ.</p>.<p class="Subhead"><strong>16 ಮನೆಗಳಿಗೆ ಹಾನಿ:</strong></p>.<p>‘ತಾಲ್ಲೂಕಿನಾದ್ಯಂತ 16 ಮನೆಗಳು ಮತ್ತು ಪಟ್ಟಣದಲ್ಲಿ 5 ಮನೆಗಳು ಭಾಗಶಃ ಹಾನಿಗೊಂಡಿವೆ. ಬೆಳೆ ಹಾನಿ ಬಗ್ಗೆ ಸಮೀಕ್ಷೆ ಮಾಡಿ ವರದಿ ಸಲ್ಲಿಸಲು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಲಾಗಿದೆ. ಕುಮಧ್ವತಿ ಮತ್ತು ತುಂಗಭದ್ರಾ ನದಿ ನೀರಿನ ಪ್ರವಾಹ ಹೆಚ್ಚಾಗುವ ಸಂಭವಿದ್ದು, ನದಿ ತೀರದ ಪ್ರದೇಶದ ಜನರಿಗೆ ಎತ್ತರದ ಪ್ರದೇಶಕ್ಕೆ ತೆರಳಲು ಸೂಚಿಸಿದೆ’ ಎಂದು ತಹಶೀಲ್ದಾರ್ ಬಸನಗೌಡ ಕೋಟೂರ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಣೆಬೆನ್ನೂರು</strong>: ತಾಲ್ಲೂಕಿನ ಮೆಡ್ಲೇರಿ, ರಾಣೆಬೆನ್ನೂರು ಮತ್ತು ಕುಪ್ಪೇಲೂರ ಈ ಮೂರು ಹೋಬಳಿಗಳಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಕಟಾವಿಗೆ ಬಂದ ಭತ್ತ, ಮೆಕ್ಕೆಜೋಳ ಮತ್ತು ಈರುಳ್ಳಿ ಬೆಳೆಗಳು ಸಂಪೂರ್ಣ ಹಾನಿಯಾಗಿವೆ.</p>.<p>ತೇವಾಂಶ ಹೆಚ್ಚಾಗಿ ಮೆಕ್ಕೆಜೋಳಕ್ಕೆ ಲದ್ದಿ ಹುಳ, ಭತ್ತಕ್ಕೆ ಗಂಧಿಹುಳ ಕಾಟ ಹೆಚ್ಚಾಗಿದ್ದರಿಂದ ರೈತರು ಸಾಲ ಸೂಲ ಮಾಡಿ ಕ್ರಿಮಿನಾಶಕ ತಂದು ಸಿಂಪಡಿಸಿದ್ದರು. ಅದು ಕೂಡ ಮಳೆಗೆ ನೀರಿನಲ್ಲಿ ಹೋಮ ಮಾಡಿದಂತಾಗಿದೆ.</p>.<p class="Subhead"><strong>ಕೊಳೆತ ಈರುಳ್ಳಿ:</strong></p>.<p>ತಾಲ್ಲೂಕಿನ ಬೆನಕನಕೊಂಡ ಗ್ರಾಮದ ಶಿವಕುಮಾರ ಬಲಿಗೇರ ಮತ್ತು ಎಸ್.ಎಂ. ಮಲಗೌಡ್ರ ಎಂಬುವರಿಗೆ ಸೇರಿದ ಈರುಳ್ಳಿ ಕಿತ್ತು ಗೂಡು ಹಾಕಿದ್ದು ಕೊಳೆತು ನಾರುತ್ತಿದೆ. ಅಲ್ಲದೇ ಹಸಿ ಮೆಣಸಿನ ಗಿಡಗಳು ತೇವಾಂಶ ಹೆಚ್ಚಾಗಿ ರೋಗಕ್ಕೀಡಾಗಿವೆ. ಹರನಗಿರಿ ಗ್ರಾಮದಲ್ಲಿ ಸೋಮರಡ್ಡಿ ರಾಯರಡ್ಡಿ, ಮಂಜಪ್ಪ ಕುಪ್ಪೇಲೂರ, ನಾಗರಾಜ ಐರಣಿ ಅವರು ಸೇರಿದಂತೆ 40 ಎಕರೆಗೂ ಹೆಚ್ಚು ಭತ್ತದ ಬೆಳೆ ಹಾನಿಗೊಂಡಿದೆ.</p>.<p>‘ಭತ್ತ ಬೆಳೆದ ಪ್ರತಿ ರೈತರು ಬೆಳೆವಿಮೆ ಮಾಡಿಸಿದ್ದರಿಂದ ಹಾನಿಗೊಂಡ ಬಗ್ಗೆ ಸಮೀಕ್ಷೆ ಮಾಡಿ ವಿಮಾ ಕಂಪನಿಗೆ ವರದಿ ಸಲ್ಲಿಸಲಾಗಿದೆ’ ಎಂದು ಸಹಾಯಕ ಕೃಷಿ ನಿರ್ದೇಶಕ ಎಚ್.ಬಿ. ಗೌಡಪ್ಪಳವರ ತಿಳಿಸಿದ್ದಾರೆ.</p>.<p>ಒಟ್ಟಾರೆ ತಾಲ್ಲೂಕಿನಾದ್ಯಂತ ಹೆಚ್ಚಿನ ಮಳೆಗೆ ತೇವಾಂಶದಿಂದ 1,695 ಹೆಕ್ಟೇರ್ ಈರುಳ್ಳಿ ಬೆಳೆ ನಾಶವಾಗಿದೆ ಎಂದು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮೀ ತಿಳಿಸಿದ್ದಾರೆ.</p>.<p class="Subhead"><strong>16 ಮನೆಗಳಿಗೆ ಹಾನಿ:</strong></p>.<p>‘ತಾಲ್ಲೂಕಿನಾದ್ಯಂತ 16 ಮನೆಗಳು ಮತ್ತು ಪಟ್ಟಣದಲ್ಲಿ 5 ಮನೆಗಳು ಭಾಗಶಃ ಹಾನಿಗೊಂಡಿವೆ. ಬೆಳೆ ಹಾನಿ ಬಗ್ಗೆ ಸಮೀಕ್ಷೆ ಮಾಡಿ ವರದಿ ಸಲ್ಲಿಸಲು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಲಾಗಿದೆ. ಕುಮಧ್ವತಿ ಮತ್ತು ತುಂಗಭದ್ರಾ ನದಿ ನೀರಿನ ಪ್ರವಾಹ ಹೆಚ್ಚಾಗುವ ಸಂಭವಿದ್ದು, ನದಿ ತೀರದ ಪ್ರದೇಶದ ಜನರಿಗೆ ಎತ್ತರದ ಪ್ರದೇಶಕ್ಕೆ ತೆರಳಲು ಸೂಚಿಸಿದೆ’ ಎಂದು ತಹಶೀಲ್ದಾರ್ ಬಸನಗೌಡ ಕೋಟೂರ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>