<p><strong>ಹಾವೇರಿ: </strong>‘ಜಿಲ್ಲೆಯ 175 ಗ್ರಾಮ ಪಂಚಾಯತಿಗಳ 75,704 ರೈತರಿಗೆ ₹178.88 ಕೋಟಿ ಬೆಳೆ ವಿಮೆ ಮಂಜೂರಾಗಿದೆ. ಇದು ರಾಜ್ಯದಲ್ಲಿ ಅತೀ ಹೆಚ್ಚು ಬೆಳೆ ವಿಮೆ ಮೊತ್ತ ಜಿಲ್ಲೆಗೆ ಬಿಡುಗಡೆಯಾಗಿದೆ. ಪ್ರವಾಹದಿಂದ ಬೆಳೆ ನಷ್ಟ ಸಂಕಷ್ಟದಲ್ಲಿರುವ ರೈತರಿಗೆ ಸಮಯೋಚಿತ ಸಹಾಯ ಸಿಕ್ಕಂತಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.</p>.<p>ಜಿಲ್ಲೆಯ ಬ್ಯಾಡಗಿ, ಹಾನಗಲ್, ಹಾವೇರಿ, ಹಿರೇಕೆರೂರು, ರಾಣೆಬೆನ್ನೂರು ಮತ್ತು ಶಿಗ್ಗಾವಿ ತಾಲ್ಲೂಕುಗಳಲ್ಲಿ ಪ್ರಮುಖವಾಗಿ ಭತ್ತ, ಮೆಕ್ಕೆಜೋಳ, ಹತ್ತಿ ಮತ್ತು ಶೇಂಗಾ ಬೆಳೆಗಳನ್ನು ಬೆಳೆಯಲಾಗುತ್ತಿದೆ. ಜಿಲ್ಲೆಯ 223 ಗ್ರಾಮ ಪಂಚಾಯಿತಿಗಳಲ್ಲಿ ಬೆಳೆ ವಿಮೆಗೆ 1,13,857 ರೈತರು ನೋಂದಾಯಿಸಿದ್ದು, ಈ ಪೈಕಿ 48 ಗ್ರಾಮ ಪಂಚಾಯಿತಿಗಳನ್ನು ಹೊರತುಪಡಿಸಿ ಬೆಳೆ ವಿಮೆ ಮಂಜೂರಾಗಿದೆ ಎಂದು ಹೇಳಿದ್ದಾರೆ.</p>.<p>ಈಗಾಗಲೇ ಮಧ್ಯಂತರ ಬೆಳೆವಿಮೆ ಪರಿಹಾರವಾಗಿ ₹ 48.74 ಕೋಟಿ ನೀಡಲಾಗಿದೆ. ಉಳಿದ ₹130.14 ಕೋಟಿ ಶೀಘ್ರದಲ್ಲೇ ಬಿಡುಗಡೆ ಮಾಡಲು ಕೃಷಿ ಆಯುಕ್ತರಿಗೆ ಹಾಗೂ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.</p>.<p>ಬಾಕಿ ಇರುವ 45 ಗ್ರಾಮ ಪಂಚಾಯಿತಿಗಳ 38,153 ರೈತರಿಗೆ ವಿಮೆ ಬಿಡುಗಡೆ ರೈತರಿಂದ ಒತ್ತಡವಿದ್ದು, ಈ ಹಿಂದೆ ಮಾಡಿರುವ ಬೆಳೆ ಕಟಾವು ಪ್ರಯೋಗಗಳ ಫಲಿತಾಂಶದ ಬಗ್ಗೆ ತೀವ್ರ ಅಸಮಾಧಾನ ಇರುವ ಹಿನ್ನೆಲೆಯಲ್ಲಿ ಸದರಿ ಗ್ರಾಮ ಪಂಚಾಯತಿಗಳ ಬೆಳೆಗಳ ಇಳುವರಿಯನ್ನು ಮತ್ತೊಮ್ಮೆ ಪರಿಶೀಲಿಸಲು ಸೂಚನೆ ನೀಡಲಾಗಿದೆ.</p>.<p>ಪ್ರವಾಹದಿಂದ ಬೆಳೆ ನಷ್ಟ ಆಗಿರುವ ಬಗ್ಗೆ ಸಂಪೂರ್ಣವಾಗಿ ಸರ್ವೆ ಮಾಡಿ ವಿವಿಧ ಬೆಳೆಗಳ ನಷ್ಟದ ವಿವರಗಳನ್ನು ರಾಜ್ಯ ಸರ್ಕಾರಕ್ಕೆ ಕೂಡಲೇ ಕಳುಹಿಸಬೇಕೆಂದು ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>‘ಜಿಲ್ಲೆಯ 175 ಗ್ರಾಮ ಪಂಚಾಯತಿಗಳ 75,704 ರೈತರಿಗೆ ₹178.88 ಕೋಟಿ ಬೆಳೆ ವಿಮೆ ಮಂಜೂರಾಗಿದೆ. ಇದು ರಾಜ್ಯದಲ್ಲಿ ಅತೀ ಹೆಚ್ಚು ಬೆಳೆ ವಿಮೆ ಮೊತ್ತ ಜಿಲ್ಲೆಗೆ ಬಿಡುಗಡೆಯಾಗಿದೆ. ಪ್ರವಾಹದಿಂದ ಬೆಳೆ ನಷ್ಟ ಸಂಕಷ್ಟದಲ್ಲಿರುವ ರೈತರಿಗೆ ಸಮಯೋಚಿತ ಸಹಾಯ ಸಿಕ್ಕಂತಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.</p>.<p>ಜಿಲ್ಲೆಯ ಬ್ಯಾಡಗಿ, ಹಾನಗಲ್, ಹಾವೇರಿ, ಹಿರೇಕೆರೂರು, ರಾಣೆಬೆನ್ನೂರು ಮತ್ತು ಶಿಗ್ಗಾವಿ ತಾಲ್ಲೂಕುಗಳಲ್ಲಿ ಪ್ರಮುಖವಾಗಿ ಭತ್ತ, ಮೆಕ್ಕೆಜೋಳ, ಹತ್ತಿ ಮತ್ತು ಶೇಂಗಾ ಬೆಳೆಗಳನ್ನು ಬೆಳೆಯಲಾಗುತ್ತಿದೆ. ಜಿಲ್ಲೆಯ 223 ಗ್ರಾಮ ಪಂಚಾಯಿತಿಗಳಲ್ಲಿ ಬೆಳೆ ವಿಮೆಗೆ 1,13,857 ರೈತರು ನೋಂದಾಯಿಸಿದ್ದು, ಈ ಪೈಕಿ 48 ಗ್ರಾಮ ಪಂಚಾಯಿತಿಗಳನ್ನು ಹೊರತುಪಡಿಸಿ ಬೆಳೆ ವಿಮೆ ಮಂಜೂರಾಗಿದೆ ಎಂದು ಹೇಳಿದ್ದಾರೆ.</p>.<p>ಈಗಾಗಲೇ ಮಧ್ಯಂತರ ಬೆಳೆವಿಮೆ ಪರಿಹಾರವಾಗಿ ₹ 48.74 ಕೋಟಿ ನೀಡಲಾಗಿದೆ. ಉಳಿದ ₹130.14 ಕೋಟಿ ಶೀಘ್ರದಲ್ಲೇ ಬಿಡುಗಡೆ ಮಾಡಲು ಕೃಷಿ ಆಯುಕ್ತರಿಗೆ ಹಾಗೂ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.</p>.<p>ಬಾಕಿ ಇರುವ 45 ಗ್ರಾಮ ಪಂಚಾಯಿತಿಗಳ 38,153 ರೈತರಿಗೆ ವಿಮೆ ಬಿಡುಗಡೆ ರೈತರಿಂದ ಒತ್ತಡವಿದ್ದು, ಈ ಹಿಂದೆ ಮಾಡಿರುವ ಬೆಳೆ ಕಟಾವು ಪ್ರಯೋಗಗಳ ಫಲಿತಾಂಶದ ಬಗ್ಗೆ ತೀವ್ರ ಅಸಮಾಧಾನ ಇರುವ ಹಿನ್ನೆಲೆಯಲ್ಲಿ ಸದರಿ ಗ್ರಾಮ ಪಂಚಾಯತಿಗಳ ಬೆಳೆಗಳ ಇಳುವರಿಯನ್ನು ಮತ್ತೊಮ್ಮೆ ಪರಿಶೀಲಿಸಲು ಸೂಚನೆ ನೀಡಲಾಗಿದೆ.</p>.<p>ಪ್ರವಾಹದಿಂದ ಬೆಳೆ ನಷ್ಟ ಆಗಿರುವ ಬಗ್ಗೆ ಸಂಪೂರ್ಣವಾಗಿ ಸರ್ವೆ ಮಾಡಿ ವಿವಿಧ ಬೆಳೆಗಳ ನಷ್ಟದ ವಿವರಗಳನ್ನು ರಾಜ್ಯ ಸರ್ಕಾರಕ್ಕೆ ಕೂಡಲೇ ಕಳುಹಿಸಬೇಕೆಂದು ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>