<p>ಹಾವೇರಿ: ಕೊಪ್ಪಳ ಉಪ ಚುನಾವಣೆ ಯಲ್ಲಿ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಅವರು ಸುಮಾರು 15 ರಿಂದ 20 ಸಾವಿರ ಮತಗಳ ಅಂತರದಿಂದ ಜಯ ಗಳಿಸಲಿದ್ದಾರೆ ಎಂದು ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.<br /> <br /> ಶುಕ್ರವಾರ ಶಿಕಾರಿಪುರಕ್ಕೆ ಹೋಗುವ ಮುನ್ನ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಗಣ್ಣ ಕರಡಿ ಬಗ್ಗೆ ಜನರಲ್ಲಿ ಬಹಳಷ್ಟು ಕಳಕಳಿಯಿದೆ. ಹೀಗಾಗಿ ಅವರು ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.<br /> <br /> ಬಿಜೆಪಿಯ ಎಲ್ಲ ನಾಯಕರು ಈ ಚುನಾವಣೆಯಲ್ಲಿ ಕೆಲಸ ಮಾಡುತ್ತಿ ರುವುದರಿಂದ ಇಲ್ಲಿ ನಾಯಕತ್ವ ಪ್ರಶ್ನೆಯೇ ಬರುವುದಿಲ್ಲ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ನಡೆಯಲಿದೆ ಎಂದು ಅವರು ತಿಳಿಸಿದರು.<br /> <br /> ಸಿಬಿಐ ಅಕ್ರಮ ಗಣಿಗಾರಿಕೆ ಕುರಿತು ರಾಜ್ಯದಲ್ಲಿ ತನಿಖೆ ನಡೆಸುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಈಗಾಗಲೇ ಪಕ್ಕದ ಆಂಧ್ರದಲ್ಲಿ ತನಿಖೆ ನಡೆಸಿದೆ. ಅದರ ಮುಂದುವರೆದ ಭಾಗವಾಗಿ ರಾಜ್ಯದಲ್ಲಿ ತನಿಖೆ ನಡೆಯಬಹುದು. ಅದನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇರುವುದಿಲ್ಲ ಎಂದು ಹೇಳಿದರು.<br /> <br /> ರಾಜೀನಾಮೆ ನೀಡಿದ ರಾಮುಲು ಅವರನ್ನು ಶೀಘ್ರದಲ್ಲಿ ಕರೆದು ರಾಜೀನಾಮೆ ವಾಪಸ್ಸು ಪಡೆಯುವಂತೆ ಮನವೊಲಿಸಲಾಗುವುದು ಎಂದು ತಿಳಿಸಿದರು.<br /> <br /> ಶಾಸಕ ನೆಹರೂ ಓಲೇಕಾರ, ಬಿಜೆಪಿ ಜಿಲ್ಲಾ ಘಟಕ ಹಾಗೂ ಕಾಡಾ ಅಧ್ಯಕ್ಷದ ಸೋಮಣ್ಣ ಬೇವಿನಮರದ, ನಗರಸಭೆ ಅಧ್ಯಕ್ಷ ಜಗದೀಶ ಮಲಗೋಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಿರೀಶ ತುಪ್ಪದ, ವಿಜಯಕುಮಾರ ಚಿನ್ನಿಕಟ್ಟಿ, ಪ್ರಭು ಹಿಟ್ನಳ್ಳಿ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾವೇರಿ: ಕೊಪ್ಪಳ ಉಪ ಚುನಾವಣೆ ಯಲ್ಲಿ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಅವರು ಸುಮಾರು 15 ರಿಂದ 20 ಸಾವಿರ ಮತಗಳ ಅಂತರದಿಂದ ಜಯ ಗಳಿಸಲಿದ್ದಾರೆ ಎಂದು ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.<br /> <br /> ಶುಕ್ರವಾರ ಶಿಕಾರಿಪುರಕ್ಕೆ ಹೋಗುವ ಮುನ್ನ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಗಣ್ಣ ಕರಡಿ ಬಗ್ಗೆ ಜನರಲ್ಲಿ ಬಹಳಷ್ಟು ಕಳಕಳಿಯಿದೆ. ಹೀಗಾಗಿ ಅವರು ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.<br /> <br /> ಬಿಜೆಪಿಯ ಎಲ್ಲ ನಾಯಕರು ಈ ಚುನಾವಣೆಯಲ್ಲಿ ಕೆಲಸ ಮಾಡುತ್ತಿ ರುವುದರಿಂದ ಇಲ್ಲಿ ನಾಯಕತ್ವ ಪ್ರಶ್ನೆಯೇ ಬರುವುದಿಲ್ಲ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ನಡೆಯಲಿದೆ ಎಂದು ಅವರು ತಿಳಿಸಿದರು.<br /> <br /> ಸಿಬಿಐ ಅಕ್ರಮ ಗಣಿಗಾರಿಕೆ ಕುರಿತು ರಾಜ್ಯದಲ್ಲಿ ತನಿಖೆ ನಡೆಸುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಈಗಾಗಲೇ ಪಕ್ಕದ ಆಂಧ್ರದಲ್ಲಿ ತನಿಖೆ ನಡೆಸಿದೆ. ಅದರ ಮುಂದುವರೆದ ಭಾಗವಾಗಿ ರಾಜ್ಯದಲ್ಲಿ ತನಿಖೆ ನಡೆಯಬಹುದು. ಅದನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇರುವುದಿಲ್ಲ ಎಂದು ಹೇಳಿದರು.<br /> <br /> ರಾಜೀನಾಮೆ ನೀಡಿದ ರಾಮುಲು ಅವರನ್ನು ಶೀಘ್ರದಲ್ಲಿ ಕರೆದು ರಾಜೀನಾಮೆ ವಾಪಸ್ಸು ಪಡೆಯುವಂತೆ ಮನವೊಲಿಸಲಾಗುವುದು ಎಂದು ತಿಳಿಸಿದರು.<br /> <br /> ಶಾಸಕ ನೆಹರೂ ಓಲೇಕಾರ, ಬಿಜೆಪಿ ಜಿಲ್ಲಾ ಘಟಕ ಹಾಗೂ ಕಾಡಾ ಅಧ್ಯಕ್ಷದ ಸೋಮಣ್ಣ ಬೇವಿನಮರದ, ನಗರಸಭೆ ಅಧ್ಯಕ್ಷ ಜಗದೀಶ ಮಲಗೋಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಿರೀಶ ತುಪ್ಪದ, ವಿಜಯಕುಮಾರ ಚಿನ್ನಿಕಟ್ಟಿ, ಪ್ರಭು ಹಿಟ್ನಳ್ಳಿ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>