<p><strong>ಹಾವೇರಿ: </strong>ತಾಲ್ಲೂಕಿನ ಕೊರಡೂರು ಗ್ರಾಮದ ಬಳಿ ಸೋಮವಾರ ಮೆಕ್ಕೆಜೋಳ ತುಂಬಿದ್ದ ಲಾರಿ ಪಲ್ಟಿಯಾಗಿ, ಮೂವರು ಹಮಾಲರು ಲಾರಿ ಕೆಳಗೆ ಸಿಲುಕಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.</p>.<p>ಸವಣೂರು ತಾಲ್ಲೂಕಿನ ಇಚ್ಚಂಗಿ ಗ್ರಾಮದ ಮಂಜುನಾಥ ಅಮರಾಪುರ (30), ಆನಂದ ದೇವರಮನಿ (28) ಹಾಗೂ ಮಂಜುನಾಥ ಕಿತ್ತೂರು (28) ಮೃತಪಟ್ಟವರು.</p>.<p>ರಸ್ತೆ ತಿರುವಿನಲ್ಲಿದ್ದ ಗುಂಡಿಯೊಳಗೆ ಚಕ್ರ ಇಳಿದ ಪರಿಣಾಮ ಲಾರಿ ಪಲ್ಟಿಯಾಯಿತು. ಪಲ್ಟಿಯಾದ ಲಾರಿಯನ್ನು ಜೆಸಿಬಿ ಮೂಲಕ ಎತ್ತಿ, ಮೃತದೇಹಗಳನ್ನು ಗ್ರಾಮಸ್ಥರು ಹೊರಗೆ ತೆಗೆದರು.</p>.<p>ಇಚ್ಚಂಗಿ ಗ್ರಾಮದಿಂದ ಗುತ್ತಲಕ್ಕೆ ತೆರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಮೃತರ ಕುಟುಂಬದವರ ರೋದನ ಮುಗಿಲು ಮುಟ್ಟುವಂತಿತ್ತು.</p>.<p>ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>ತಾಲ್ಲೂಕಿನ ಕೊರಡೂರು ಗ್ರಾಮದ ಬಳಿ ಸೋಮವಾರ ಮೆಕ್ಕೆಜೋಳ ತುಂಬಿದ್ದ ಲಾರಿ ಪಲ್ಟಿಯಾಗಿ, ಮೂವರು ಹಮಾಲರು ಲಾರಿ ಕೆಳಗೆ ಸಿಲುಕಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.</p>.<p>ಸವಣೂರು ತಾಲ್ಲೂಕಿನ ಇಚ್ಚಂಗಿ ಗ್ರಾಮದ ಮಂಜುನಾಥ ಅಮರಾಪುರ (30), ಆನಂದ ದೇವರಮನಿ (28) ಹಾಗೂ ಮಂಜುನಾಥ ಕಿತ್ತೂರು (28) ಮೃತಪಟ್ಟವರು.</p>.<p>ರಸ್ತೆ ತಿರುವಿನಲ್ಲಿದ್ದ ಗುಂಡಿಯೊಳಗೆ ಚಕ್ರ ಇಳಿದ ಪರಿಣಾಮ ಲಾರಿ ಪಲ್ಟಿಯಾಯಿತು. ಪಲ್ಟಿಯಾದ ಲಾರಿಯನ್ನು ಜೆಸಿಬಿ ಮೂಲಕ ಎತ್ತಿ, ಮೃತದೇಹಗಳನ್ನು ಗ್ರಾಮಸ್ಥರು ಹೊರಗೆ ತೆಗೆದರು.</p>.<p>ಇಚ್ಚಂಗಿ ಗ್ರಾಮದಿಂದ ಗುತ್ತಲಕ್ಕೆ ತೆರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಮೃತರ ಕುಟುಂಬದವರ ರೋದನ ಮುಗಿಲು ಮುಟ್ಟುವಂತಿತ್ತು.</p>.<p>ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>