ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ನಾಮಪತ್ರ ಪರಿಶೀಲನೆ ನಡೆಸಿದರು. 19 ಅಭ್ಯರ್ಥಿಗಳಿಂದ 30 ನಾಮಪತ್ರ ಸಲ್ಲಿಕೆಯಾಗಿತ್ತು. ಈ ಪೈಕಿ ಪಕ್ಷೇತರ ಅಭ್ಯರ್ಥಿ ನಜೀರ್ ಅಹ್ಮದ್ ಸವಣೂರ, ವೀರೇಶ ಮಲ್ಲಪ್ಪ ಕಿರವಾಡಿ ಹಾಗೂ ಇಸ್ಮಾಯಿಲ್ ಮುತ್ತಬಿ ನಾಮಪತ್ರಗಳು ತಿರಸ್ಕೃತವಾಗಿವೆ. ಉಳಿದಂತೆ ಎಲ್ಲ ನಾಮಪತ್ರ ಕ್ರಮಬದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ.