ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಲದ ಹೆಸರಲ್ಲಿ ₹3.56 ಲಕ್ಷ ವಂಚನೆ

Last Updated 4 ಜುಲೈ 2021, 16:20 IST
ಅಕ್ಷರ ಗಾತ್ರ

ಹಾವೇರಿ: ಬಜಾಜ್‌ ಫೈನಾನ್ಸ್‌ ಕಂಪನಿ ವ್ಯವಸ್ಥಾಪಕ ನಿರ್ದೇಶಕ, ವ್ಯವಸ್ಥಾಪಕ ಹಾಗೂ ಸಿಬ್ಬಂದಿ ಎಂದು ಪರಿಚಯ ಮಾಡಿಕೊಂಡ ದುಷ್ಕರ್ಮಿಗಳು, ₹2 ಲಕ್ಷ ಸಾಲ ಕೊಡಿಸುತ್ತೇವೆ ಎಂದು ನಂಬಿಸಿ, ವ್ಯಕ್ತಿಯೊಬ್ಬರಿಗೆ ₹3.56 ಲಕ್ಷ ವಂಚಿಸಿರುವ ಘಟನೆ ನಡೆದಿದೆ.

ಸವಣೂರ ತಾಲ್ಲೂಕು ಯಲವಿಗಿ ಗ್ರಾಮದ ಔಷಧ ವ್ಯಾಪಾರಿ ಮಂಜುನಾಥ ತುರಾಯದ ಹಣ ಕಳೆದುಕೊಂಡವರು. ಇವರ ಮೊಬೈಲ್‌ ಸಂಖ್ಯೆಗೆ ಕರೆ ಹಾಗೂ ಮೆಸೇಜ್‌ ಕಳುಹಿಸಿದ ಆರೋಪಿಗಳು ಸಾಲ ಮಂಜೂರು ಮಾಡಿಸಿಕೊಡುತ್ತೇವೆ ಎಂದು ನಂಬಿಸಿದ್ದಾರೆ.

ನಂತರ ಸಾಲದ ಹಣವನ್ನು ಮಂಜುನಾಥ ಅವರ ಖಾತೆಗೆ ವರ್ಗಾವಣೆ ಮಾಡಲು ಪ್ರೊಸೆಸಿಂಗ್‌ ಶುಲ್ಕ ಸೇರಿದಂತೆ ವಿವಿಧ ಶುಲ್ಕಗಳನ್ನು ಭರಿಸಬೇಕು ಎಂದು ಹೇಳಿ, ಹಣ ವರ್ಗಾವಣೆ ಮಾಡಿಸಿಕೊಂಡು ಮೋಸ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ನಗರದ ಸಿಇಎನ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT