<p><strong>ಹಾವೇರಿ</strong>: ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದ ಚುನಾವಣೆಗೆ ಒಟ್ಟು ನಾಲ್ವರು ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ. ನಾಲ್ವರು ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ವಾಪಸ್ ಪಡೆದಿದ್ದಾರೆ.</p>.<p>ರಾಣೆಬೆನ್ನೂರಿನ ವೆಂಕಟೇಶ ಈಡಿಗರ, ರಾಣೆಬೆನ್ನೂರಿನ ಪ್ರಭುಲಿಂಗಪ್ಪ ಹಲಗೇರಿ, ಹಾನಗಲ್ ತಾಲ್ಲೂಕು ಸಾಂವಸಗಿ ಗ್ರಾಮದ ಮಾರುತಿ ಶಿಡ್ಲಾಪುರ ಹಾಗೂ ಬ್ಯಾಡಗಿಯ ಲಿಂಗಯ್ಯ ಹಿರೇಮಠ ಅವರು ಅಂತಿಮ ಕಣದಲ್ಲಿ ಉಳಿದಿದ್ದಾರೆ.</p>.<p>ರಟ್ಟೀಹಳ್ಳಿಯ ಮಲ್ಲಿಕಾರ್ಜುನ ಹೆರಕಾರ, ರಾಣೆಬೆನ್ನೂರಿನ ರಾಮಪ್ಪ ನಂದಿಹಳ್ಳಿ, ಹಾವೇರಿಯ ಸಿದ್ಧೇಶ್ವರ ಕಾಡದೇವರಮಠ, ರಾಣೆಬೆನ್ನೂರಿನ ಹಾಲೇಶ ಶಿವಪ್ಪನವರ ಈ ನಾಲ್ವರೂ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಸೋಮವಾರ ಹಿಂತೆಗೆದುಕೊಂಡು ಚುನಾವಣೆಯಿಂದ ಹಿಂದೆ ಸರಿದರು.ಏ. 12ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಕಡೆಯ ದಿನವಾಗಿತ್ತು.</p>.<p>ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಒಟ್ಟು 9 ಆಕಾಂಕ್ಷಿಗಳಿಂದ ಒಟ್ಟು 15 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಅವುಗಳಲ್ಲಿ 8 ಕ್ರಮಬದ್ಧಗೊಂಡು, ಕೆ.ಎಸ್. ನಾಗರಾಜ ಅವರು ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿತ್ತು. ಮೇ 9ರಂದು ಚುನಾವಣೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದ ಚುನಾವಣೆಗೆ ಒಟ್ಟು ನಾಲ್ವರು ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ. ನಾಲ್ವರು ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ವಾಪಸ್ ಪಡೆದಿದ್ದಾರೆ.</p>.<p>ರಾಣೆಬೆನ್ನೂರಿನ ವೆಂಕಟೇಶ ಈಡಿಗರ, ರಾಣೆಬೆನ್ನೂರಿನ ಪ್ರಭುಲಿಂಗಪ್ಪ ಹಲಗೇರಿ, ಹಾನಗಲ್ ತಾಲ್ಲೂಕು ಸಾಂವಸಗಿ ಗ್ರಾಮದ ಮಾರುತಿ ಶಿಡ್ಲಾಪುರ ಹಾಗೂ ಬ್ಯಾಡಗಿಯ ಲಿಂಗಯ್ಯ ಹಿರೇಮಠ ಅವರು ಅಂತಿಮ ಕಣದಲ್ಲಿ ಉಳಿದಿದ್ದಾರೆ.</p>.<p>ರಟ್ಟೀಹಳ್ಳಿಯ ಮಲ್ಲಿಕಾರ್ಜುನ ಹೆರಕಾರ, ರಾಣೆಬೆನ್ನೂರಿನ ರಾಮಪ್ಪ ನಂದಿಹಳ್ಳಿ, ಹಾವೇರಿಯ ಸಿದ್ಧೇಶ್ವರ ಕಾಡದೇವರಮಠ, ರಾಣೆಬೆನ್ನೂರಿನ ಹಾಲೇಶ ಶಿವಪ್ಪನವರ ಈ ನಾಲ್ವರೂ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಸೋಮವಾರ ಹಿಂತೆಗೆದುಕೊಂಡು ಚುನಾವಣೆಯಿಂದ ಹಿಂದೆ ಸರಿದರು.ಏ. 12ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಕಡೆಯ ದಿನವಾಗಿತ್ತು.</p>.<p>ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಒಟ್ಟು 9 ಆಕಾಂಕ್ಷಿಗಳಿಂದ ಒಟ್ಟು 15 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಅವುಗಳಲ್ಲಿ 8 ಕ್ರಮಬದ್ಧಗೊಂಡು, ಕೆ.ಎಸ್. ನಾಗರಾಜ ಅವರು ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿತ್ತು. ಮೇ 9ರಂದು ಚುನಾವಣೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>