ಚಂದಾಪುರ (ಹಾವೇರಿ): ಶಿಗ್ಗಾವಿ ತಾಲ್ಲೂಕಿನ ಚಂದಾಪುರ ಗ್ರಾಮದಲ್ಲಿ ಸಿಡಿಲು ಬಡಿದು 16 ವರ್ಷದ ಬಾಲಕ ಮಹಾಂತೇಶ ರಾಮಣ್ಣ ಜಟ್ಟಪ್ಪನವರ ಮೃತಪಟ್ಟ ಅಹಿತಕರ ಘಟನೆ ಗುರುವಾರ ಸಂಭವಿಸಿತ್ತು.
ಈ ಘಟನೆಯ ಸುದ್ದಿ ತಿಳಿದ್ದ ತಕ್ಷಣ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಅವರು ದೆಹಲಿ ಪ್ರವಾಸದಿಂದ ಹುಬ್ಬಳ್ಳಿಗೆ ಆಗಮಿಸಿ, ನೇರವಾಗಿ ಮೃತರ ಮನೆಗೆ ಭೇಟಿ ನೀಡಿ, ಈ ಅಹಿತಕರ ಘಟನೆ ಸಂಭವಿಸಿದ 24 ಗಂಟೆಗಳ ಒಳಗಾಗಿ ಕುಟುಂಬಸ್ಥರಿಗೆ ₹5 ಲಕ್ಷ ಪರಿಹಾರ ಧನದ ಚೆಕ್ ಅನ್ನು ವಿತರಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಸಿಎಂ ಸಾಂತ್ವನ: ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೃತ ವಿದ್ಯಾರ್ಥಿಯ ಪಾಲಕರಿಗೆ ಕರೆ ಮಾಡಿ ಸಾಂತ್ವನ ಹೇಳಿದರು.
ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣನವರ, ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್ ರೋಶನ್, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮಸ್ಥರು, ಸ್ಥಳೀಯ ಪ್ರಮುಖರು ಕಾರ್ಯಕರ್ತರು ಇದ್ದರು.