ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐದು ಮುಶ್ಯಾಗಳನ್ನು ಕೊಂದ ದುಷ್ಕರ್ಮಿಗಳು

Last Updated 4 ಜುಲೈ 2020, 15:59 IST
ಅಕ್ಷರ ಗಾತ್ರ

ಹಾವೇರಿ: ವಿನಾಶದ ಅಂಚಿನಲ್ಲಿರುವ ಮುಶ್ಯಾಗಳನ್ನು (ಮಂಗ) ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆಹಾನಗಲ್‌ ತಾಲ್ಲೂಕಿನ ತಿಳವಳ್ಳಿ ಗ್ರಾಮದ ಬಳಿ ನಡೆದಿದೆ.

ಬಲೆ ಹಾಕಿ ಐದು ಮುಶ್ಯಾಗಳನ್ನು ಸೆರೆಹಿಡಿದ ದುಷ್ಕರ್ಮಿಗಳು, ದೊಣ್ಣೆಯಿಂದ ಹೊಡೆದು ಸಾಯಿಸಿದ್ದಾರೆ. ಈ ವೇಳೆ ಜನರನ್ನು ಕಂಡು ಸ್ಥಳದಿಂದಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟನಾ ಸ್ಥಳದಲ್ಲಿನಾಲ್ಕು ಜರ್ಕಿನ್, ಬೈಕ್‍ ಚಾವಿ ಪತ್ತೆಯಾಗಿದ್ದು, ಬೇಟೆಗಾರರು ಹತ್ಯೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಮುಶ್ಯಾಗಳ ಮಾಂಸ ಭಕ್ಷಿಸುವ ಕೆಲವರು ಜಿಲ್ಲೆಯಲ್ಲಿ ಸಕ್ರಿಯವಾಗಿದ್ದು, ಈ ಹಿಂದೆಯೂ ಇಂಥ ಘಟನೆಗಳು ಬೆಳಕಿಗೆ ಬಂದಿದ್ದವು.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಮುಶ್ಯಾಗಳ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT