ರಾಣೆಬೆನ್ನೂರು: ತಾಲ್ಲೂಕಿನ ಚಳಗೇರಿ ಟೋಲ್ ನಾಕಾ ಬಳಿ ಲಾರಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ₹ 5.04,900 ಮೊತ್ತದ 45 ಕೆ.ಜಿ ತೂಕದ 510 ಚೀಲ (ಒಟ್ಟು 229.50 ಕ್ವಿಂಟಲ್) ಪಡಿತರ ಅಕ್ಕಿ ಹಾಗೂ ಲಾರಿಯನ್ನು ತಹಶೀಲ್ದಾರ್ ಹಾಗೂ ಪೊಲೀಸ್ರು ಸೆ.1 ರಂದು ವಶಪಡಿಸಿಕೊಂಡಿದ್ದಾರೆ.
ತಹಶೀಲ್ದಾರ್ ಕಚೇರಿಯ ಆಹಾರ ನಿರೀಕ್ಷಕ ಸುರೇಶ ರಾಮಪ್ಪ ತಿಮ್ಮಜ್ಜಿ ಅವರು ಸೆ. 2ರಂದು ಗ್ರಾಮೀಣ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಲಾರಿ ಚಾಲಕ ಹಾಗೂ ಮಾಲೀಕನಾದ ಎಚ್.ಪಿ. ಕುಮಾರ ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ತಾತನಹಳ್ಳಿ ಗ್ರಾಮದವನು ಎಂದು ಪೊಲೀಸರು ತಿಳಿಸಿದ್ದಾರೆ.