‘ಈ ಹಿನ್ನೆಲೆಯಲ್ಲಿ ಅ.7ರಂದು ಬೆಂಗಳೂರಿನಲ್ಲಿ ಸಂಘದ ಗೌರವಾಧ್ಯಕ್ಷ ಆಯನೂರು ಮಂಜುನಾಥ ಮತ್ತು ರಾಜ್ಯ ಘಟಕದ ಅಧ್ಯಕ್ಷ ವಿಶ್ವಾರಾಧ್ಯ ಎಚ್.ವೈ. ನೇತೃತ್ವದಲ್ಲಿ ರಾಜ್ಯ ಮಟ್ಟದ ಪದಾಧಿಕಾರಿಗಳ ಸಭೆ ನಡೆಯಿತು. ಸಚಿವರ ಮನವಿ ಮೇರೆಗೆ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಮುಷ್ಕರವನ್ನು ಅಂತ್ಯಗೊಳಿಸಿ, ಕರ್ತವ್ಯಕ್ಕೆ ಹಾಜರಾಗಲು ಸಭೆ ನಿರ್ಣಯ ತೆಗೆದುಕೊಂಡಿತು. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ಬುಧವಾರ ಕರ್ತವ್ಯಕ್ಕೆ ಹಾಜರಾಗಿದ್ದೇವೆ’ ಎಂದು ಜಿಲ್ಲಾ ಘಟಕದ ಅಧ್ಯಕ್ಷ ವಸಂತಕುಮಾರ ಗೌಡ್ರ ‘ಪ್ರಜಾವಾಣಿ’ಗೆ ತಿಳಿಸಿದರು.