<p><strong>ಶಿಗ್ಗಾವಿ: </strong>‘ಕಂದಾಚಾರ ಹಾಗೂ ಮೂಢನಂಬಿಕೆ ದೂರವಾದರೆ ಸಮಾಜದ ಅಭಿವೃದ್ಧಿ ಸಾಧ್ಯ. ವೈಚಾರಿಕ ನೆಲೆಗಟ್ಟಿನಲ್ಲಿ ಸಾಹಿತ್ಯ ರಚಿಸಿದ ರಾಷ್ಟ್ರಕವಿ ಕುವೆಂಪು ಅವರು ಸುಂದರ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದಾರೆ’ ಎಂದು ದಾವಣಗೆರೆ ಸರ್ಕಾರಿ ಕಾಲೇಜಿನ ಗ್ರಂಥಪಾಲಕಿ ಅನ್ನಪೂರ್ಣ ಪಾಟೀಲ ಹೇಳಿದರು.</p>.<p>ಪಟ್ಟಣದಲ್ಲಿ ಶುಕ್ರವಾರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ನಿಂದ ನಡೆದ ‘ಮನೆಯಂಗಳದಲ್ಲಿ ಸಾಹಿತ್ಯ ಸೌರಭ’ ಕಾರ್ಯಕ್ರಮ ಹಾಗೂ ಕುವೆಂಪು ಜನ್ಮದಿನದ ನಿಮಿತ್ತ ವಿಶ್ವಮಾನವ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮೌಢ್ಯತೆ ಸಮಾಜದ ಏಳಿಗೆಯನ್ನು ಕುಠಿತಗೊಳಿಸುತ್ತದೆ. ಇಂದು ದಬ್ಬಾಳಿಗೆ, ದೌರ್ಜ್ಯಗಳು ಹಾಗೂ ಶೋಷಣೆಗಳು ಹೆಚ್ಚುತ್ತಿವೆ. ಇದನ್ನು ತಡೆಯಲು ಸಾಹಿತ್ಯ ಒಂದು ಮಾರ್ಗವಾಗಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜ ದ್ಯಾಮನಕೊಪ್ಪ ಕಾರ್ಯಕ್ರಮ ಉದ್ಘಾಟಿಸಿದರು.</p>.<p>ವಕೀಲ ಎಫ್.ಎಸ್.ಕೋಣನವರ ಅಧ್ಯಕ್ಷತೆ ವಹಿಸಿದ್ದರು. ಡಾ.ಆರ್.ಎಸ್.ಅರಳೆಲೆಮಠ, ಡಾ.ಜಿ.ಸಿ. ನಿಡಗುಂದಿ, ಎಸ್.ಎನ್.ಮುಗಳಿ, ಎನ್.ಎಸ್.ಬರದೂರ, ಪಿ.ಎಸ್.ಗಾಂಜಿ, ಎಸ್.ವಿ.ದೇಶಪಾಂಡೆ, ಪ್ರಾಚಾರ್ಯ ಎಸ್.ವಿ.ಕುಲಕರ್ಣಿ ಇದ್ದರು.</p>.<p>ಕಲಾವಿದ ಬಸವರಾಜ ಶಿಗ್ಗಾವಿ, ಭಾಗ್ಯಜ್ಯೋತಿ ಬಳಿಗಾರ, ವಿಜಯಲಕ್ಷ್ಮಿ ಗೊಟಗೋಡಿ ಅವರು ಕುವೆಂಪು ರಚಿಸಿದ ಗೀತೆಗಳನ್ನು ಹಾಡಿದರು. ನಿವೃತ್ತ ಶಿಕ್ಷಕ ಕಳ್ಳಿಮನಿ ಸ್ವರಚಿತ ಕವನವಾಚನ ಮಾಡಿದರು, ಡಾ.ಲತಾ ನಿಡಗುಂದಿ ಕುವೆಂಪು ಗೀತೆಗೆ ನೃತ್ಯ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಗ್ಗಾವಿ: </strong>‘ಕಂದಾಚಾರ ಹಾಗೂ ಮೂಢನಂಬಿಕೆ ದೂರವಾದರೆ ಸಮಾಜದ ಅಭಿವೃದ್ಧಿ ಸಾಧ್ಯ. ವೈಚಾರಿಕ ನೆಲೆಗಟ್ಟಿನಲ್ಲಿ ಸಾಹಿತ್ಯ ರಚಿಸಿದ ರಾಷ್ಟ್ರಕವಿ ಕುವೆಂಪು ಅವರು ಸುಂದರ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದಾರೆ’ ಎಂದು ದಾವಣಗೆರೆ ಸರ್ಕಾರಿ ಕಾಲೇಜಿನ ಗ್ರಂಥಪಾಲಕಿ ಅನ್ನಪೂರ್ಣ ಪಾಟೀಲ ಹೇಳಿದರು.</p>.<p>ಪಟ್ಟಣದಲ್ಲಿ ಶುಕ್ರವಾರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ನಿಂದ ನಡೆದ ‘ಮನೆಯಂಗಳದಲ್ಲಿ ಸಾಹಿತ್ಯ ಸೌರಭ’ ಕಾರ್ಯಕ್ರಮ ಹಾಗೂ ಕುವೆಂಪು ಜನ್ಮದಿನದ ನಿಮಿತ್ತ ವಿಶ್ವಮಾನವ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮೌಢ್ಯತೆ ಸಮಾಜದ ಏಳಿಗೆಯನ್ನು ಕುಠಿತಗೊಳಿಸುತ್ತದೆ. ಇಂದು ದಬ್ಬಾಳಿಗೆ, ದೌರ್ಜ್ಯಗಳು ಹಾಗೂ ಶೋಷಣೆಗಳು ಹೆಚ್ಚುತ್ತಿವೆ. ಇದನ್ನು ತಡೆಯಲು ಸಾಹಿತ್ಯ ಒಂದು ಮಾರ್ಗವಾಗಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜ ದ್ಯಾಮನಕೊಪ್ಪ ಕಾರ್ಯಕ್ರಮ ಉದ್ಘಾಟಿಸಿದರು.</p>.<p>ವಕೀಲ ಎಫ್.ಎಸ್.ಕೋಣನವರ ಅಧ್ಯಕ್ಷತೆ ವಹಿಸಿದ್ದರು. ಡಾ.ಆರ್.ಎಸ್.ಅರಳೆಲೆಮಠ, ಡಾ.ಜಿ.ಸಿ. ನಿಡಗುಂದಿ, ಎಸ್.ಎನ್.ಮುಗಳಿ, ಎನ್.ಎಸ್.ಬರದೂರ, ಪಿ.ಎಸ್.ಗಾಂಜಿ, ಎಸ್.ವಿ.ದೇಶಪಾಂಡೆ, ಪ್ರಾಚಾರ್ಯ ಎಸ್.ವಿ.ಕುಲಕರ್ಣಿ ಇದ್ದರು.</p>.<p>ಕಲಾವಿದ ಬಸವರಾಜ ಶಿಗ್ಗಾವಿ, ಭಾಗ್ಯಜ್ಯೋತಿ ಬಳಿಗಾರ, ವಿಜಯಲಕ್ಷ್ಮಿ ಗೊಟಗೋಡಿ ಅವರು ಕುವೆಂಪು ರಚಿಸಿದ ಗೀತೆಗಳನ್ನು ಹಾಡಿದರು. ನಿವೃತ್ತ ಶಿಕ್ಷಕ ಕಳ್ಳಿಮನಿ ಸ್ವರಚಿತ ಕವನವಾಚನ ಮಾಡಿದರು, ಡಾ.ಲತಾ ನಿಡಗುಂದಿ ಕುವೆಂಪು ಗೀತೆಗೆ ನೃತ್ಯ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>