<p><strong>ಬ್ಯಾಡಗಿ</strong>: ಪಟ್ಟಣದ ಸೋಮೇಶ್ವರ ನಗರದ ಮನೆಯೊಂದರಲ್ಲಿ ₹8.49 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಕಳವು ಮಾಡಲಾಗಿದೆ.</p>.<p>ಮನೆಯಲ್ಲಿ ಯಾರೂ ಇಲ್ಲದ ವೇಳೆ, ಬೀಗ ಮುರಿದು ಒಳನುಗ್ಗಿದ ಕಳ್ಳರು ತಿಜೋರಿಯಲ್ಲಿದ್ದ 154 ಗ್ರಾಂ ಚಿನ್ನಾಭರಣ ಹಾಗೂ 24 ಗ್ರಾಂ ಬೆಳ್ಳಿ ಆಭರಣಗಳನ್ನು ಕದ್ದು ಪರಾರಿಯಾದ್ದಾರೆ ಎಂದು ಶಿವಯೋಗೆಪ್ಪ ಮುರುಗೆಪ್ಪ ಚಿನವಾಲ ದೂರು ನೀಡಿದ್ದಾರೆ.</p>.<p>ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<p><strong>ಕಾರು ಡಿಕ್ಕಿ: ಇಬ್ಬರಿಗೆ ಗಾಯ</strong></p>.<p>ಬ್ಯಾಡಗಿ: ತಾಲ್ಲೂಕಿನ ಕದಮನಹಳ್ಳಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೈಕ್ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.</p>.<p>ಕಲ್ಲೆದೇವರು ಗ್ರಾಮದ ಉಮೇಶ ಪುಟ್ಟಪ್ಪ ಚೂರಿ ಹಾಗೂ ವೀರೇಶ ಉಮಾಪತಿ ದಾನಯ್ಯನಮಠ ಗಾಯಗೊಂಡವರು. ಅವರಿಗೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕಾರು ಚಾಲಕ, ಹುಬ್ಬಳ್ಳಿಯ ಗಾಮನಗಟ್ಟಿ ನಿವಾಸಿ ಎಸ್. ಶ್ರೀನಿವಾಸ ವಿರುದ್ಧ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಡಗಿ</strong>: ಪಟ್ಟಣದ ಸೋಮೇಶ್ವರ ನಗರದ ಮನೆಯೊಂದರಲ್ಲಿ ₹8.49 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಕಳವು ಮಾಡಲಾಗಿದೆ.</p>.<p>ಮನೆಯಲ್ಲಿ ಯಾರೂ ಇಲ್ಲದ ವೇಳೆ, ಬೀಗ ಮುರಿದು ಒಳನುಗ್ಗಿದ ಕಳ್ಳರು ತಿಜೋರಿಯಲ್ಲಿದ್ದ 154 ಗ್ರಾಂ ಚಿನ್ನಾಭರಣ ಹಾಗೂ 24 ಗ್ರಾಂ ಬೆಳ್ಳಿ ಆಭರಣಗಳನ್ನು ಕದ್ದು ಪರಾರಿಯಾದ್ದಾರೆ ಎಂದು ಶಿವಯೋಗೆಪ್ಪ ಮುರುಗೆಪ್ಪ ಚಿನವಾಲ ದೂರು ನೀಡಿದ್ದಾರೆ.</p>.<p>ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<p><strong>ಕಾರು ಡಿಕ್ಕಿ: ಇಬ್ಬರಿಗೆ ಗಾಯ</strong></p>.<p>ಬ್ಯಾಡಗಿ: ತಾಲ್ಲೂಕಿನ ಕದಮನಹಳ್ಳಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೈಕ್ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.</p>.<p>ಕಲ್ಲೆದೇವರು ಗ್ರಾಮದ ಉಮೇಶ ಪುಟ್ಟಪ್ಪ ಚೂರಿ ಹಾಗೂ ವೀರೇಶ ಉಮಾಪತಿ ದಾನಯ್ಯನಮಠ ಗಾಯಗೊಂಡವರು. ಅವರಿಗೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕಾರು ಚಾಲಕ, ಹುಬ್ಬಳ್ಳಿಯ ಗಾಮನಗಟ್ಟಿ ನಿವಾಸಿ ಎಸ್. ಶ್ರೀನಿವಾಸ ವಿರುದ್ಧ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>