ಇಡೀ ವಿಶ್ವವನ್ನೇ ಕೊರೊನಾ ತಲ್ಲಣಿಸುವಂತೆ ಮಾಡಿತು. ಜನರು ಆತಂಕದ ವಾತಾವರಣದಲ್ಲಿ ಬದುಕುವಂತೆ ಮಾಡಿತು. ಇಂಥ ಸಂಕಷ್ಟದ ಸಮಯದಲ್ಲಿ ಆರೋಗ್ಯ ಸೇವೆ ನೀಡಬೇಕು ಎಂದು ತಿಂಗಳುಗಟ್ಟಲೆ ರಜೆಯನ್ನು ತೆಗೆದುಕೊಳ್ಳದೆ ನಿಸ್ವಾರ್ಥವಾಗಿ ದುಡಿದ ವೈದ್ಯರು, ಶುಶ್ರೂಷಕಿಯರು, ಆಶಾ ಕಾರ್ಯಕರ್ತೆಯರು, ಲ್ಯಾಬ್ ಟೆಕ್ನೀಷಿಯನ್ಗಳು, ಅರೆಕಾಲಿಕ ವೈದ್ಯಕೀಯ ಸಿಬ್ಬಂದಿ, ಪೌರಕಾರ್ಮಿಕರ ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಇವರ ಸೇವೆಯಿಂದ ಜಿಲ್ಲೆಯಲ್ಲಿ ಕೊರನಾ ನಿಯಂತ್ರಣಕ್ಕೆ ಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.