<p>ಬ್ಯಾಡಗಿ: ತಾಲ್ಲೂಕಿನ ಅರೆಮಲೆನಾಡು ಭಾಗದ ಸೂಡಂಬಿ, ಹಿರೇಅಣಜಿ ಹಾಗೂ ಚಿಕ್ಕ ಅಣಜಿ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತತ್ವಾರ ಉಂಟಾಗಿದೆ.</p>.<p>ಅಂತರ್ಜಲ ಮಟ್ಟ ಕುಸಿದಿದ್ದು, ಕೊಳವೆ ಬಾವಿಗಳಲ್ಲಿ ನೀರಿಲ್ಲದೆ ಕೃಷಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಇದನ್ನು ಮನಗಂಡಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಸೂಡಂಬಿ ಗ್ರಾಮದಲ್ಲಿ 4, ಹಿರೇ ಅಣಜಿ ಗ್ರಾಮದಲ್ಲಿ 3 ಕೊಳವೆ ಬಾವಿಗಳನ್ನು ಕೊರೆಸಿದೆ. ಆದರೆ, ತಲಾ ಒಂದರಲ್ಲಿ ಮಾತ್ರ ನೀರು ದೊರೆತಿದೆ. ಕೆರೆಗಳು ಬತ್ತಿದ್ದು, ರೈತರ ಕೊಳವೆ ಬಾವಿಗಳನ್ನು ಎರವಲು ಪಡೆದು ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲಾಗಿದೆ ಎಂದು ಎಇಇ ಸುರೇಶ ಬೇಡರ ತಿಳಿಸಿದರು.</p>.<p>ಅರೆ ಮಲೆನಾಡು ಪ್ರದೇಶವಾದರೂ ಕುಡಿಯುವ ನೀರಿಗಾಗಿ ತೀವ್ರ ತೊಂದರೆಯಾಗಿದೆ. ಪ್ರಸಕ್ತ ಕಬ್ಬಿನ ಬೆಳೆಯ ಇಳುವರಿಯೂ ಕಡಿಮೆಯಾಗಿದ್ದು, ರೈತರಲ್ಲಿ ಆತಂಕ ಮೂಡಿಸಿದೆ. ಹೆಚ್ಚು ಕೊಳವೆ ಬಾವಿ ಕೊರೆದ ಪರಿಣಾಮ ಅಂತರ್ಜಲ ಕುಸಿಯಲು ಕಾರಣವಾಗಿದೆ ಎನ್ನುವುದು ತಜ್ಣರ ಅಭಿಪ್ರಾಯವಾಗಿದೆ.</p>.<p>ಈ ಹಿಂದಿನ ಬಿಜೆಪಿ ಸರ್ಕಾರವು ತಾಲ್ಲೂಕಿನ ಕೆರೆಗಳನ್ನು ತುಂಬಿಸುವ ಯೋಜನೆ ಕೈಗೊಂಡರೂ, ನದಿ ನೀರು ಮಾತ್ರ ಕೆರೆ ಸೇರಲೇ ಇಲ್ಲ. ಹೀಗಾಗಿ ಈ ಭಾಗದಲ್ಲಿ ತೀವ್ರ ಅನಾವೃಷ್ಠಿ ಎದುರಿಸುವಂತಾಗಿದೆ ಎಂದು ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬ್ಯಾಡಗಿ: ತಾಲ್ಲೂಕಿನ ಅರೆಮಲೆನಾಡು ಭಾಗದ ಸೂಡಂಬಿ, ಹಿರೇಅಣಜಿ ಹಾಗೂ ಚಿಕ್ಕ ಅಣಜಿ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತತ್ವಾರ ಉಂಟಾಗಿದೆ.</p>.<p>ಅಂತರ್ಜಲ ಮಟ್ಟ ಕುಸಿದಿದ್ದು, ಕೊಳವೆ ಬಾವಿಗಳಲ್ಲಿ ನೀರಿಲ್ಲದೆ ಕೃಷಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಇದನ್ನು ಮನಗಂಡಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಸೂಡಂಬಿ ಗ್ರಾಮದಲ್ಲಿ 4, ಹಿರೇ ಅಣಜಿ ಗ್ರಾಮದಲ್ಲಿ 3 ಕೊಳವೆ ಬಾವಿಗಳನ್ನು ಕೊರೆಸಿದೆ. ಆದರೆ, ತಲಾ ಒಂದರಲ್ಲಿ ಮಾತ್ರ ನೀರು ದೊರೆತಿದೆ. ಕೆರೆಗಳು ಬತ್ತಿದ್ದು, ರೈತರ ಕೊಳವೆ ಬಾವಿಗಳನ್ನು ಎರವಲು ಪಡೆದು ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲಾಗಿದೆ ಎಂದು ಎಇಇ ಸುರೇಶ ಬೇಡರ ತಿಳಿಸಿದರು.</p>.<p>ಅರೆ ಮಲೆನಾಡು ಪ್ರದೇಶವಾದರೂ ಕುಡಿಯುವ ನೀರಿಗಾಗಿ ತೀವ್ರ ತೊಂದರೆಯಾಗಿದೆ. ಪ್ರಸಕ್ತ ಕಬ್ಬಿನ ಬೆಳೆಯ ಇಳುವರಿಯೂ ಕಡಿಮೆಯಾಗಿದ್ದು, ರೈತರಲ್ಲಿ ಆತಂಕ ಮೂಡಿಸಿದೆ. ಹೆಚ್ಚು ಕೊಳವೆ ಬಾವಿ ಕೊರೆದ ಪರಿಣಾಮ ಅಂತರ್ಜಲ ಕುಸಿಯಲು ಕಾರಣವಾಗಿದೆ ಎನ್ನುವುದು ತಜ್ಣರ ಅಭಿಪ್ರಾಯವಾಗಿದೆ.</p>.<p>ಈ ಹಿಂದಿನ ಬಿಜೆಪಿ ಸರ್ಕಾರವು ತಾಲ್ಲೂಕಿನ ಕೆರೆಗಳನ್ನು ತುಂಬಿಸುವ ಯೋಜನೆ ಕೈಗೊಂಡರೂ, ನದಿ ನೀರು ಮಾತ್ರ ಕೆರೆ ಸೇರಲೇ ಇಲ್ಲ. ಹೀಗಾಗಿ ಈ ಭಾಗದಲ್ಲಿ ತೀವ್ರ ಅನಾವೃಷ್ಠಿ ಎದುರಿಸುವಂತಾಗಿದೆ ಎಂದು ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>