ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ಅತೃಪ್ತ ಶಾಸಕರ ತಂಡ ರಚನೆಯಾಗಲಿದೆ. ಕಾರ್ಯಕರ್ತರ ಜತೆ ಮಾತನಾಡಿ ಮುಂದಿನ ನಡೆಯನ್ನು ನಿರ್ಧರಿಸುತ್ತೇವೆ. ಹಿಂದುಳಿದ ವರ್ಗದವರನ್ನು ಕಡೆಗಣಿಸಿರುವುದರಿಂದ ಸಂಪುಟದಲ್ಲಿ ಸಮತೋಲನ ಇಲ್ಲದಂತಾಗಿದೆ. ಕಳೆದ ಬಾರಿ ಸಚಿವ ಸ್ಥಾನ ಕೈತಪ್ಪಿದಾಗಲೂ ಸುಮ್ಮಿನಿದ್ದೇನೆ. ಈ ಬಾರಿ ನಾನು ಸುಮ್ಮನಿರುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.