‘ವರ್ಗಾವಣೆಯಾದ ಶಿಕ್ಷಕರನ್ನು ಬಿಡುಗಡೆ ಮಾಡಲು, ವೈದ್ಯಕೀಯ ಬಿಲ್ ಪಾಸ್ ಮಾಡಲು, ಬಿಸಿಯೂಟ ಯೋಜನೆ, ಹೊಸ ಶಾಲೆಗೆ ಅನುಮತಿ ನೀಡಲು, ಸಾಮಗ್ರಿ ಖರೀದಿಯಲ್ಲಿ ಕಮಿಷನ್ ಸೇರಿದಂತೆ ಡಿಡಿಪಿಐ ಕಚೇರಿಯಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂಬ ಆರೋಪದ ಮೇರೆಗೆ ದಾಳಿ ನಡೆಸಲಾಗಿದೆ. ದಾಖಲೆಗಳ ಪರಿಶೀಲನೆ ಮುಂದುವರಿಸಲಾಗಿದೆ’ ಎಂದು ಎಸಿಬಿ ಡಿವೈಎಸ್ಪಿ ಗೋಪಿ ಬಿ.ಆರ್. ತಿಳಿಸಿದ್ದಾರೆ.