ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ಎಸಿಬಿ ಬಲೆಗೆ ಕೃಷಿ ಅಧಿಕಾರಿಗಳು

ನಿವೃತ್ತ ನೌಕರನಿಂದ ಲಂಚ ಪಡೆಯುತ್ತಿದ್ದ ವೇಳೆ ದಾಳಿ
Last Updated 7 ಆಗಸ್ಟ್ 2021, 15:35 IST
ಅಕ್ಷರ ಗಾತ್ರ

ಹಾವೇರಿ: ನಿವೃತ್ತ ಸಿಬ್ಬಂದಿಯೊಬ್ಬರಿಂದ ₹15 ಸಾವಿರ ಲಂಚ ಪಡೆಯುವ ವೇಳೆ, ಕೃಷಿ ಇಲಾಖೆಯ ಇಬ್ಬರು ಅಧಿಕಾರಿಗಳು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿರುವ ಘಟನೆ ತಡವಾಗಿ ಬೆಳೆಕಿಗೆ ಬಂದಿದೆ.

ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯ ಆಡಳಿತಾಧಿಕಾರಿ ಶ್ರೀಕಾಂತ ಹುಣಸಿಮರದ ಮತ್ತು ಕಚೇರಿ ಅಧೀಕ್ಷಕ ಚನ್ನವೀರಯ್ಯ ಹಿರೇಮಠ ಎಸಿಬಿ ಬಲೆಗೆ ಬಿದ್ದ ನೌಕರರು.

ಕೃಷಿ ಇಲಾಖೆಯ ನಿವೃತ್ತ ನೌಕರ ಚನ್ನಬಸಪ್ಪ ಕೋರಿ ಅವರ ನಿವೃತ್ತಿ ವೇತನ ಬಿಡುಗಡೆಗಾಗಿ ₹1 ಲಕ್ಷ ಲಂಚದ ಬೇಡಿಕೆ ಇಟ್ಟಿದ್ದರು. ನಗರದ ಬಸ್‌ ನಿಲ್ದಾಣದ ಹೋಟೆಲ್‌ವೊಂದರಲ್ಲಿ ₹15 ಸಾವಿರ ಲಂಚ ಪಡೆಯುವ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದಾಳಿಯ ಬಗ್ಗೆ ಎಸಿಬಿ ಅಧಿಕಾರಿಗಳು ಅಧಿಕೃತಿ ಮಾಹಿತಿಯನ್ನು ಮಾಧ್ಯಮಗಳಿಗೆ ನೀಡಿರಲಿಲ್ಲ. ಈ ಪ್ರಕರಣ ಬೆಳಕಿಗೆ ಬಾರದಂತೆ ತಡೆಯಲು ಕಾಣದ ಕೈಗಳು ಕೆಲಸ ಮಾಡಿವೆ ಎಂದು ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT