<p>ಹಾವೇರಿ: ಐಎಎಸ್, ಎಂಬಿಬಿಎಸ್, ಐಐಟಿಯಂಥ ಪರೀಕ್ಷೆಗಳನ್ನು ಎದುರಿಸುವಾಗ ವಿಫಲರಾದರೆ ಎದೆಗುಂದದೆ ಮರಳಿ ಯತ್ನಿಸಬೇಕು. ನಿರಂತರ ಪರಿಶ್ರಮ, ಶ್ರದ್ಧೆ, ಆಸಕ್ತಿಗಳೇ ಯಶಸ್ಸಿನ ಗುಟ್ಟು’ ಎಂದು ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ರೋಶನ್ ಹೇಳಿದರು. </p>.<p>ಹಾವೇರಿ ನಗರದ ಎಂ.ಆರ್.ಎಂ. ಪಿಯು ಕಾಲೇಜಿನಲ್ಲಿ ಈಚೆಗೆ ನಡೆದ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿ, ಐ.ಎ.ಎಸ್ ಅಧಿಕಾರಿಯಾಗಿ ಯಶಸ್ವಿಯಾಗಲು ಓದುವ ಕ್ರಮಗಳು ಮತ್ತು ವಿದ್ಯಾರ್ಥಿಗಳ ಶ್ರಮದ ಬಗ್ಗೆ ಅರಿವು ಮೂಡಿಸಿದರು. ವಿದ್ಯಾರ್ಥಿಗಳು ಓದುವ ಸಮಯದಲ್ಲಿ ಯೂಟ್ಯೂಬ್ ಪಾಠಗಳು ಸಹ ಪ್ರಯೋಜನಕಾರಿ ಎಂದು ವಿವರಿಸಿದರು. </p>.<p>ಡಿಡಿಪಿಯು ಡಾ.ಉಮೇಶಪ್ಪ ಎಚ್. ಅವರು ‘ಕರುಣಾಳು ಬಾ ಬೆಳಕೆ’ ಗೀತೆಯೊಂದಿಗೆ ತಮ್ಮ ಮಾತುಗಳನ್ನು ಆರಂಭಿಸಿ, ಮಕ್ಕಳು ತಮ್ಮ ಅಂಕಪಟ್ಟಿಯನ್ನು ವೀಕ್ಷಿಸುವಾಗ ತಮ್ಮ ತಂದೆ, ತಾಯಿ ಮತ್ತು ಬಂಧು ಬಳಗದವರ ಮುಖಗಳನ್ನು ನೆನಪಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.</p>.<p>ಎಂ.ಆರ್.ಎಂ. ಸಂಸ್ಥೆಯ ಅಧ್ಯಕ್ಷ ಡಾ.ಎಂ.ರಾಮ ಮೋಹನ ರಾವ್ ಮಾತನಾಡಿ, ಎಂ.ಆರ್.ಎಂ ಕಾಲೇಜಿನಿಂದ ಎಂ.ಬಿ.ಬಿ.ಎಸ್, ಬಿ.ಎ.ಎಂ.ಎಸ್ (ಆಯುರ್ವೇದ) ಮತ್ತು ಐ.ಐ.ಟಿ ಕೋರ್ಸ್ಗಳಿಗೆ ಪ್ರವೇಶ ಪಡೆದಿದ್ದಕ್ಕೆ ಪಾಲಕರಿಗೆ ಮತ್ತು ಮಕ್ಕಳಿಗೆ ಅಭಿನಂದನೆಗಳನ್ನು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾವೇರಿ: ಐಎಎಸ್, ಎಂಬಿಬಿಎಸ್, ಐಐಟಿಯಂಥ ಪರೀಕ್ಷೆಗಳನ್ನು ಎದುರಿಸುವಾಗ ವಿಫಲರಾದರೆ ಎದೆಗುಂದದೆ ಮರಳಿ ಯತ್ನಿಸಬೇಕು. ನಿರಂತರ ಪರಿಶ್ರಮ, ಶ್ರದ್ಧೆ, ಆಸಕ್ತಿಗಳೇ ಯಶಸ್ಸಿನ ಗುಟ್ಟು’ ಎಂದು ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ರೋಶನ್ ಹೇಳಿದರು. </p>.<p>ಹಾವೇರಿ ನಗರದ ಎಂ.ಆರ್.ಎಂ. ಪಿಯು ಕಾಲೇಜಿನಲ್ಲಿ ಈಚೆಗೆ ನಡೆದ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿ, ಐ.ಎ.ಎಸ್ ಅಧಿಕಾರಿಯಾಗಿ ಯಶಸ್ವಿಯಾಗಲು ಓದುವ ಕ್ರಮಗಳು ಮತ್ತು ವಿದ್ಯಾರ್ಥಿಗಳ ಶ್ರಮದ ಬಗ್ಗೆ ಅರಿವು ಮೂಡಿಸಿದರು. ವಿದ್ಯಾರ್ಥಿಗಳು ಓದುವ ಸಮಯದಲ್ಲಿ ಯೂಟ್ಯೂಬ್ ಪಾಠಗಳು ಸಹ ಪ್ರಯೋಜನಕಾರಿ ಎಂದು ವಿವರಿಸಿದರು. </p>.<p>ಡಿಡಿಪಿಯು ಡಾ.ಉಮೇಶಪ್ಪ ಎಚ್. ಅವರು ‘ಕರುಣಾಳು ಬಾ ಬೆಳಕೆ’ ಗೀತೆಯೊಂದಿಗೆ ತಮ್ಮ ಮಾತುಗಳನ್ನು ಆರಂಭಿಸಿ, ಮಕ್ಕಳು ತಮ್ಮ ಅಂಕಪಟ್ಟಿಯನ್ನು ವೀಕ್ಷಿಸುವಾಗ ತಮ್ಮ ತಂದೆ, ತಾಯಿ ಮತ್ತು ಬಂಧು ಬಳಗದವರ ಮುಖಗಳನ್ನು ನೆನಪಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.</p>.<p>ಎಂ.ಆರ್.ಎಂ. ಸಂಸ್ಥೆಯ ಅಧ್ಯಕ್ಷ ಡಾ.ಎಂ.ರಾಮ ಮೋಹನ ರಾವ್ ಮಾತನಾಡಿ, ಎಂ.ಆರ್.ಎಂ ಕಾಲೇಜಿನಿಂದ ಎಂ.ಬಿ.ಬಿ.ಎಸ್, ಬಿ.ಎ.ಎಂ.ಎಸ್ (ಆಯುರ್ವೇದ) ಮತ್ತು ಐ.ಐ.ಟಿ ಕೋರ್ಸ್ಗಳಿಗೆ ಪ್ರವೇಶ ಪಡೆದಿದ್ದಕ್ಕೆ ಪಾಲಕರಿಗೆ ಮತ್ತು ಮಕ್ಕಳಿಗೆ ಅಭಿನಂದನೆಗಳನ್ನು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>