ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ‘ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮೌಲ್ಯ ಕುಸಿಯುತ್ತಿದೆ. ಮಾನವೀಯ ಮೌಲ್ಯಗಳು ಅರ್ಥ ಕಳೆದುಕೊಳ್ಳುತ್ತಿವೆ. ಈ ಬಗ್ಗೆ ನಾವೆಲ್ಲರೂ ಚಿಂತನೆ ಮಾಡಬೇಕು. ದುರಾಸೆ ಎಂಬ ರೋಗವನ್ನು ಅಳಿಸಿ ಹಾಕಬೇಕು. ನಮ್ಮಲ್ಲಿ ಆಕಾಂಕ್ಷೆಗಳು ಇರಬೇಕು. ಆದರೆ, ಕೋಟಿಗಟ್ಟಲೆ ಹಣವನ್ನು ಜೇಬಿಗೆ ಇಳಿಸುವ ದುರಾಸೆ ಇರಬಾರದು. ಕನ್ನಡಿಗರ ಪ್ರಾಮಾಣಿಕತೆ, ಈ ನೆಲದ ಮೌಲ್ಯಗಳು ಏನೆಂಬುದನ್ನು ಜಗತ್ತಿಗೆ ತೋರಿಸಬೇಕು’ ಎಂದು ಹೇಳಿದರು.