<p><strong>ಹಾವೇರಿ:</strong>ದೇವಗಿರಿ ಗ್ರಾಮದ ಸುತ್ತಮುತ್ತಲಿನ ಹೊಲಗಳಿಗೆ ಹೋಗುವ ದಾರಿಗಳನ್ನು ವೀಕ್ಷಿಸಿದ್ದು, ‘ನಮ್ಮ ಹೊಲ ನಮ್ಮ ದಾರಿ’ ಯೋಜನೆಯಡಿ ಹೊಲಕ್ಕೆ ಹೋಗುವ ಎಲ್ಲ ದಾರಿಗಳ ಸಮಸ್ಯೆಯನ್ನು ಸರಿಪಡಿಸಲಾಗುವುದು ಎಂದು ತಹಶೀಲ್ದಾರ್ ಶಂಕರ್ ಜಿ.ಎಸ್. ಭರವಸೆ ನೀಡಿದರು.</p>.<p>ತಾಲ್ಲೂಕಿನ ದೇವಗಿರಿ ಗ್ರಾಮದ ದುರ್ಗಮ್ಮ ದೇವಿ ದೇವಸ್ಥಾನದಲ್ಲಿ ಶನಿವಾರ ರೈತ ಸಂಘದ ಪದಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.ನರೇಗಾ ಯೋಜನೆಯಲ್ಲಿ ಡಾಂಬರು ರಸ್ತೆ ಮಾಡುವ ಭರವಸೆಯನ್ನೂ ನೀಡಿದರು.</p>.<p>ರೈತರಿಗೆ ಯಾವುದೇ ಸಮಸ್ಯೆಯಾದಲ್ಲಿ ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು. ಸಮಾಜದಲ್ಲಿ ಶಾಂತಿ–ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಹಾವೇರಿ ಗ್ರಾಮೀಣ ಇನ್ಸ್ಪೆಕ್ಟರ್ ನಾಗಮ್ಮ ಕೆ. ಮತ್ತು ಪಿಎಸ್ಐ ಮಂಜುನಾಥ್ ಬಿ.ಎನ್. ತಿಳಿಸಿದರು.</p>.<p>ಸಭೆಯಲ್ಲಿ ರೈತ ಮುಖಂಡರು ಮತ್ತು ಗ್ರಾಮಸ್ಥರಾದಎಂ.ಎನ್. ನಾಯಕ್, ಹನುಮಂತಪ್ಪ ಹುಚ್ಚಣ್ಣನವರ್, ರಾಜು ತರ್ಲಘಟ್ಟ, ಚೆನ್ನಪ್ಪ ಮರಡೊರ, ಮುತ್ತು ಗುಡಗೇರಿ, ರುದ್ರಪ್ಪ ಬಳಿಗಾರ, ಮತ್ತು ನೂರ್ ಅಹಮದ್ ಮಲ್ಲ ಮುಂತಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong>ದೇವಗಿರಿ ಗ್ರಾಮದ ಸುತ್ತಮುತ್ತಲಿನ ಹೊಲಗಳಿಗೆ ಹೋಗುವ ದಾರಿಗಳನ್ನು ವೀಕ್ಷಿಸಿದ್ದು, ‘ನಮ್ಮ ಹೊಲ ನಮ್ಮ ದಾರಿ’ ಯೋಜನೆಯಡಿ ಹೊಲಕ್ಕೆ ಹೋಗುವ ಎಲ್ಲ ದಾರಿಗಳ ಸಮಸ್ಯೆಯನ್ನು ಸರಿಪಡಿಸಲಾಗುವುದು ಎಂದು ತಹಶೀಲ್ದಾರ್ ಶಂಕರ್ ಜಿ.ಎಸ್. ಭರವಸೆ ನೀಡಿದರು.</p>.<p>ತಾಲ್ಲೂಕಿನ ದೇವಗಿರಿ ಗ್ರಾಮದ ದುರ್ಗಮ್ಮ ದೇವಿ ದೇವಸ್ಥಾನದಲ್ಲಿ ಶನಿವಾರ ರೈತ ಸಂಘದ ಪದಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.ನರೇಗಾ ಯೋಜನೆಯಲ್ಲಿ ಡಾಂಬರು ರಸ್ತೆ ಮಾಡುವ ಭರವಸೆಯನ್ನೂ ನೀಡಿದರು.</p>.<p>ರೈತರಿಗೆ ಯಾವುದೇ ಸಮಸ್ಯೆಯಾದಲ್ಲಿ ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು. ಸಮಾಜದಲ್ಲಿ ಶಾಂತಿ–ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಹಾವೇರಿ ಗ್ರಾಮೀಣ ಇನ್ಸ್ಪೆಕ್ಟರ್ ನಾಗಮ್ಮ ಕೆ. ಮತ್ತು ಪಿಎಸ್ಐ ಮಂಜುನಾಥ್ ಬಿ.ಎನ್. ತಿಳಿಸಿದರು.</p>.<p>ಸಭೆಯಲ್ಲಿ ರೈತ ಮುಖಂಡರು ಮತ್ತು ಗ್ರಾಮಸ್ಥರಾದಎಂ.ಎನ್. ನಾಯಕ್, ಹನುಮಂತಪ್ಪ ಹುಚ್ಚಣ್ಣನವರ್, ರಾಜು ತರ್ಲಘಟ್ಟ, ಚೆನ್ನಪ್ಪ ಮರಡೊರ, ಮುತ್ತು ಗುಡಗೇರಿ, ರುದ್ರಪ್ಪ ಬಳಿಗಾರ, ಮತ್ತು ನೂರ್ ಅಹಮದ್ ಮಲ್ಲ ಮುಂತಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>