<p><strong>ಚಿಕ್ಕೇರೂರ(ಹಂಸಬಾವಿ):</strong> ಬಿಜೆಪಿಗೆ ಕಾರ್ಯಕರ್ತರೇ ದೊಡ್ಡ ಶಕ್ತಿ. ಪ್ರಧಾನಿ ನರೇಂದ್ರ ಮೋದಿಯವರ ಜನಪರ ಆಡಳಿತದ ಕಾರ್ಯವೈಖರಿಯನ್ನು ಪ್ರತೀ ಮತದಾರನಿಗೂ ಮನವರಿಕೆ ಮಾಡುವ ಮೂಲಕ ಈ ಬಾರಿ ಪ್ರತೀ ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವಂತೆ ಪಕ್ಷ ಸಂಘಟನೆ ಮಾಡಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ ಹೇಳಿದರು.</p>.<p>ಹಾವೇರಿ- ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರು ಹಿರೇಕೆರೂರ ತಾಲ್ಲೂಕಿಗೆ ಚುನಾವಣಾ ಪ್ರಚಾರಕ್ಕಾಗಿ ಆಗಮಿಸುತ್ತಿರುವ ಹಿನ್ನೆಯಲ್ಲಿ ಇಲ್ಲಿಗೆ ಸಮೀಪದ ಚಿಕ್ಕೇರೂರ ಗ್ರಾಮದಲ್ಲಿ ಶನಿವಾರ ರಾತ್ರಿ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಹಿರೇಕೆರೂರ ಮಂಡಲದ ಅಧ್ಯಕ್ಷ ಶಿವಕುಮಾರ ತಿಪ್ಪಶೆಟ್ಟಿ ಮಾತನಾಡಿ, ಬಿಜೆಪಿ ಕಾರ್ಯಕರ್ತರು ಬೂತ್ಮಟ್ಟದಲ್ಲಿ ಉತ್ಸಾಹದಿಂದ ಪಕ್ಷ ಸಂಘಟನೆ ಮಾಡಬೇಕು. ಈ ಚುನಾವಣೆ ದೇಶದ ಇತಿಹಾಸದಲ್ಲಿ ಮಹತ್ತರ ಮೈಲುಗಲ್ಲಾಗುವಂತೆ ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಅಧಿಕಾರಕ್ಕೆ ತರಲು ಪಣ ತೊಡಬೇಕು ಎಂದರು.</p>.<p>ಈ ವೇಳೆ ಮುಖಂಡರಾದ ದೊಡ್ಡಗೌಡ ಪಾಟೀಲ, ಎನ್. ಎಂ.ಈಟೇರ, ಆರ್. ಎನ್.ಗಂಗೋಳ, ಎಸ್.ಎಸ್. ಪಾಟೀಲ, ಲಿಂಗರಾಜ ಚಪ್ಪರದಹಳ್ಳಿ, ರವಿಶಂಕರ ಬಾಳಿಕಾಯಿ, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೇರೂರ(ಹಂಸಬಾವಿ):</strong> ಬಿಜೆಪಿಗೆ ಕಾರ್ಯಕರ್ತರೇ ದೊಡ್ಡ ಶಕ್ತಿ. ಪ್ರಧಾನಿ ನರೇಂದ್ರ ಮೋದಿಯವರ ಜನಪರ ಆಡಳಿತದ ಕಾರ್ಯವೈಖರಿಯನ್ನು ಪ್ರತೀ ಮತದಾರನಿಗೂ ಮನವರಿಕೆ ಮಾಡುವ ಮೂಲಕ ಈ ಬಾರಿ ಪ್ರತೀ ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವಂತೆ ಪಕ್ಷ ಸಂಘಟನೆ ಮಾಡಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ ಹೇಳಿದರು.</p>.<p>ಹಾವೇರಿ- ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರು ಹಿರೇಕೆರೂರ ತಾಲ್ಲೂಕಿಗೆ ಚುನಾವಣಾ ಪ್ರಚಾರಕ್ಕಾಗಿ ಆಗಮಿಸುತ್ತಿರುವ ಹಿನ್ನೆಯಲ್ಲಿ ಇಲ್ಲಿಗೆ ಸಮೀಪದ ಚಿಕ್ಕೇರೂರ ಗ್ರಾಮದಲ್ಲಿ ಶನಿವಾರ ರಾತ್ರಿ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಹಿರೇಕೆರೂರ ಮಂಡಲದ ಅಧ್ಯಕ್ಷ ಶಿವಕುಮಾರ ತಿಪ್ಪಶೆಟ್ಟಿ ಮಾತನಾಡಿ, ಬಿಜೆಪಿ ಕಾರ್ಯಕರ್ತರು ಬೂತ್ಮಟ್ಟದಲ್ಲಿ ಉತ್ಸಾಹದಿಂದ ಪಕ್ಷ ಸಂಘಟನೆ ಮಾಡಬೇಕು. ಈ ಚುನಾವಣೆ ದೇಶದ ಇತಿಹಾಸದಲ್ಲಿ ಮಹತ್ತರ ಮೈಲುಗಲ್ಲಾಗುವಂತೆ ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಅಧಿಕಾರಕ್ಕೆ ತರಲು ಪಣ ತೊಡಬೇಕು ಎಂದರು.</p>.<p>ಈ ವೇಳೆ ಮುಖಂಡರಾದ ದೊಡ್ಡಗೌಡ ಪಾಟೀಲ, ಎನ್. ಎಂ.ಈಟೇರ, ಆರ್. ಎನ್.ಗಂಗೋಳ, ಎಸ್.ಎಸ್. ಪಾಟೀಲ, ಲಿಂಗರಾಜ ಚಪ್ಪರದಹಳ್ಳಿ, ರವಿಶಂಕರ ಬಾಳಿಕಾಯಿ, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>