<p><strong>ಹಾವೇರಿ:</strong> ನಗರದ ಪ್ರಮುಖ ವೃತ್ತಗಳಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆ ಬಳಿ ಹಾಕಲಾಗಿದ್ದ ಜಾಹೀರಾತು ಫಲಕಗಳನ್ನು ನಗರಸಭೆ ಸಿಬ್ಬಂದಿ ಶುಕ್ರವಾರ ತೆರವುಗೊಳಿಸಿದರು.</p>.<p>ನಗರದ ಹಲವು ಕಡೆಗಳಲ್ಲಿ ಎಲ್ಲೆಂದರಲ್ಲಿ ಜಾಹೀರಾತು ಫಲಕ ಹಾಗೂ ಪೋಸ್ಟರ್ ಅಂಟಿಸುತ್ತಿದ್ದ ಬಗ್ಗೆ ಪ್ರಜಾವಾಣಿಯಲ್ಲಿ ಮೇ 2ರಂದು ‘ಜಾಹೀರಾತು ಅಬ್ಬರ: ಹೋರಾಟಗಾರರಿಗೆ ಅಪಮಾನ’ ಶೀರ್ಷಿಕೆಯಡಿ ವರದಿ ಪ್ರಕಟಿಸಲಾಗಿತ್ತು. ವರದಿ ಗಮನಿಸಿದ ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ ಅವರು ಜಾಹೀರಾತು ಫಲಕಗಳನ್ನು ತೆರವುಗಳಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದರು.</p>.<p>ಹೊಸಮನಿ ಸಿದ್ದಪ್ಪ ವೃತ್ತಕ್ಕೆ ತೆರಳಿದಿದ್ದ ನಗರಸಭೆ ಸಿಬ್ಬಂದಿ, ಪ್ರತಿಮೆ ಬಳಿ ನೇತು ಹಾಕಿದ್ದ ಫಲಕಗಳನ್ನು ತೆರವುಗೊಳಿಸಿದರು. ಇದರ ಜೊತೆಯಲ್ಲಿಯೇ ನಗರದ ಹಲವು ಕಡೆಗಳಲ್ಲಿ ಅಳವಡಿಸಿದ್ದ ಜಾಹೀರಾತುಗಳನ್ನು ತೆರವುಗೊಳಿಸಿದ್ದಾರೆ.</p>.<p>‘ಪತ್ರಿಕೆಯಲ್ಲಿ ಬಂದ ವರದಿಯಿಂದ ಎಚ್ಚೆತ್ತು ಜಾಹೀರಾತು ಫಲಕ ತೆರವು ಮಾಡಿರುವ ನಗರಸಭೆಗೆ ಅಭಿನಂದನೆಗಳು. ಮುಂಬರುವ ದಿನಗಳಲ್ಲಿಯೂ ಪ್ರತಿಮೆ ಬಳಿ ಯಾವುದೇ ಜಾಹೀರಾತು ಹಾಕದಂತೆ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಜನರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ನಗರದ ಪ್ರಮುಖ ವೃತ್ತಗಳಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆ ಬಳಿ ಹಾಕಲಾಗಿದ್ದ ಜಾಹೀರಾತು ಫಲಕಗಳನ್ನು ನಗರಸಭೆ ಸಿಬ್ಬಂದಿ ಶುಕ್ರವಾರ ತೆರವುಗೊಳಿಸಿದರು.</p>.<p>ನಗರದ ಹಲವು ಕಡೆಗಳಲ್ಲಿ ಎಲ್ಲೆಂದರಲ್ಲಿ ಜಾಹೀರಾತು ಫಲಕ ಹಾಗೂ ಪೋಸ್ಟರ್ ಅಂಟಿಸುತ್ತಿದ್ದ ಬಗ್ಗೆ ಪ್ರಜಾವಾಣಿಯಲ್ಲಿ ಮೇ 2ರಂದು ‘ಜಾಹೀರಾತು ಅಬ್ಬರ: ಹೋರಾಟಗಾರರಿಗೆ ಅಪಮಾನ’ ಶೀರ್ಷಿಕೆಯಡಿ ವರದಿ ಪ್ರಕಟಿಸಲಾಗಿತ್ತು. ವರದಿ ಗಮನಿಸಿದ ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ ಅವರು ಜಾಹೀರಾತು ಫಲಕಗಳನ್ನು ತೆರವುಗಳಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದರು.</p>.<p>ಹೊಸಮನಿ ಸಿದ್ದಪ್ಪ ವೃತ್ತಕ್ಕೆ ತೆರಳಿದಿದ್ದ ನಗರಸಭೆ ಸಿಬ್ಬಂದಿ, ಪ್ರತಿಮೆ ಬಳಿ ನೇತು ಹಾಕಿದ್ದ ಫಲಕಗಳನ್ನು ತೆರವುಗೊಳಿಸಿದರು. ಇದರ ಜೊತೆಯಲ್ಲಿಯೇ ನಗರದ ಹಲವು ಕಡೆಗಳಲ್ಲಿ ಅಳವಡಿಸಿದ್ದ ಜಾಹೀರಾತುಗಳನ್ನು ತೆರವುಗೊಳಿಸಿದ್ದಾರೆ.</p>.<p>‘ಪತ್ರಿಕೆಯಲ್ಲಿ ಬಂದ ವರದಿಯಿಂದ ಎಚ್ಚೆತ್ತು ಜಾಹೀರಾತು ಫಲಕ ತೆರವು ಮಾಡಿರುವ ನಗರಸಭೆಗೆ ಅಭಿನಂದನೆಗಳು. ಮುಂಬರುವ ದಿನಗಳಲ್ಲಿಯೂ ಪ್ರತಿಮೆ ಬಳಿ ಯಾವುದೇ ಜಾಹೀರಾತು ಹಾಕದಂತೆ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಜನರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>