ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪರಿಸರ ಸಂರಕ್ಷಣೆಗೆ ಮುಂದಾಗಿ’

Last Updated 29 ಜುಲೈ 2021, 13:44 IST
ಅಕ್ಷರ ಗಾತ್ರ

ಹಾವೇರಿ: ‘ಗಿಡ, ಮರಗಳಿಂದ ಶುದ್ಧ ಗಾಳಿ, ಸ್ವಚ್ಛ ಪರಿಸರ ನಿರ್ಮಾಣವಾಗುತ್ತದೆ. ಶಾಲೆ, ಕಾಲೇಜು, ರಸ್ತೆ ಪಕ್ಕ ಹಾಗೂ ಕೆರೆ ಅಂಗಳದಲ್ಲಿ ಸಸಿ ನೆಟ್ಟು ಪೋಷಣೆ ಮಾಡಬೇಕು ಎಂದುಧರ್ಮಸ್ಥಳ ಗ್ರಾಮಾಭಿವೃದ್ಧಿ ನಿರ್ದೇಶಕ ನಾಗರಾಜ ಶೆಟ್ಟಿ ಹೇಳಿದರು.

ಬ್ಯಾಡಗಿ ತಾಲ್ಲೂಕುಘಾಳಪೂಜಿ ಗ್ರಾಮ ಪಂಚಾಯಿತಿ ಕಾರ್ಯಾಲಯದಿಂದ ‘ನಮ್ಮೂರು ನಮ್ಮ ಕೆರೆ ಯೋಜನೆ’ಯಡಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕವಿತಾ ತಳವಾರ ಮಾತನಾಡಿ, ‘ನಿಂಗನಕಟ್ಟೆ ಕೆರೆಯಲ್ಲಿ ಸಂಪೂರ್ಣವಾಗಿ ಹೂಳೆತ್ತಿದ್ದು, ಮಳೆಯಿಂದ ಸಂಪೂರ್ಣವಾಗಿ ತುಂಬಿದೆ. ಇದರಿಂದ ಅಂತರ್ಜಲ ಮಟ್ಟ ಹೆಚ್ಚಾಗಿನಿಂತುಹೋಗಿದ್ದ ಕೊಳವೆಬಾವಿಗಳಲ್ಲಿ ನೀರು ಕಾಣಿಸಿಕೊಂಡಿದೆ’ ಎಂದರು.

ಮಾರುತಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಎಚ್.ಎಚ್.‌ ಕುರುಬರ ಮಾತನಾಡಿದರು. ಕೆರೆ ಸಮಿತಿ ಅಧ್ಯಕ್ಷ ರಾಮನಗೌಡ ಶಿಡ್ರಳ್ಳಿ, ಪಿಡಿಒ ಗೌಸ್ ಮೋದಿನಸಾಬ‌ ಹಾವೇರಿ ತಾಲ್ಲೂಕಿನ ಯೋಜನಾಧಿಕಾರಿ ನಾರಾಯಣ ಜಿ., ಕೃಷಿ ಮೇಲ್ವಿಚಾರಕರು ನೇಮನಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT