‘ರೈತರಿಗೆ ಅವಶ್ಯವಿರುವ ರಸಗೊಬ್ಬರವನ್ನು ಸಕಾಲಕ್ಕೆ ಪೂರೈಸಲಾಗುತ್ತಿದೆ. ರೈತರು ಕೇವಲ ಡಿಎಪಿ ಮತ್ತು ಯೂರಿಯಾ ಬಳಸುವ ಬದಲು ಪರ್ಯಾಯವಾಗಿ ನ್ಯಾನೊ ಡಿಎಪಿ ಮತ್ತು ನ್ಯಾನೊ ಯೂರಿಯಾ ಬಳಸಬಹುದು’ ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ಹೇಳಿದ್ದಾರೆ. ಗೊಬ್ಬರ ಬಳಕೆ ಬಗ್ಗೆ ಮಾಹಿತಿ ನೀಡಿರುವ ಅವರು ‘ಪ್ರತಿ ಎಕರೆಗೆ 500 ಎಂ.ಎನ್ ನ್ಯಾನೊ ಯೂರಿಯಾ ಬಳಸುವುದರಿಂದ ಬೆಳೆಗಳಿಗೆ ನೇರವಾಗಿ ಸಾರಜನಕ ಒದಗಿಸಿದಂತಾಗುತ್ತದೆ ಇದು ಬೆಳೆಗಳಲ್ಲಿ ಇಳುವರಿ ಹೆಚ್ಚಿಸುವಲ್ಲಿ ನೆರವಾಗಲಿದೆ. ಪರಿಸರ ಸಂರಕ್ಷಣೆಯನ್ನೂ ಉತ್ತೇಜಿಸಿದಂತಾಗುತ್ತದೆ. ಬೆಳೆಗಳು ಹಳದಿ-ಕೆಂಪು ಆಗುವುದನ್ನು ತಪ್ಪಿಸಬಹುದಾಗಿದೆ’ ಎಂದರು.