<p><strong>ಹಾವೇರಿ</strong>: ಮಹಾರಾಷ್ಟ್ರದಲ್ಲಿ 528 ಎಕರೆ ಜಮೀನಿನಲ್ಲಿ ಕೃಷಿ ಮಾಡಿ ಯಶಸ್ವಿಯಾಗಿರುವ ಮಾಜಿ ಸೈನಿಕರು, ಇದೀಗ ಹಾವೇರಿಯಲ್ಲಿ ರೈತರಿಗೆ ಕೃಷಿ ಸಲಹೆಗಳನ್ನು ನೀಡಲು ಹೊಸ ‘ಕೃಷಿ ಸೇವಾ ಕೇಂದ್ರ’ ಆರಂಭಿಸುತ್ತಿದ್ದಾರೆ. ಸೇವಾ ಕೇಂದ್ರವನ್ನು ಭಾನುವಾರ ರೈತರ ಬಳಕೆಗೆ ಮುಕ್ತಗೊಳಿಸಲಾಯಿತು.</p>.<p>ಸೇನೆಯಿಂದ ನಿವೃತ್ತರಾದ ಮಾಜಿ ಸೈನಿಕರೇ ಸೇರಿಕೊಂಡು ‘ವೆಂಕಟೇಶ್ವರ ಕೋ ಆಪರೇಟಿವ್ ಪವರ್ ಆ್ಯಂಡ್ ಅಗ್ರೊ ಪ್ರೊಸೆಸಿಂಗ್ ಕಂಪನಿ’ ಸ್ಥಾಪಿಸಿದ್ದಾರೆ. ಇದರಡಿ ಕೃಷಿ ಕೆಲಸ ಹಾಗೂ ರೈತರ ಆರ್ಥಿಕ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದಾರೆ. ಹಾವೇರಿಯ ಬಸವೇಶ್ವರನಗರದಲ್ಲಿ ಕಚೇರಿ ತೆರೆಯಲಾಗಿದ್ದು, 9 ಸಾವಿರ ರೈತರು ಈಗಾಗಲೇ ಸದಸ್ಯತ್ವ ನೋಂದಣಿ ಮಾಡಿಸಿದ್ದಾರೆ.</p>.<p>ಕೇಂದ್ರವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದ ಸಂಸದ ಬಸವರಾಜ ಬೊಮ್ಮಾಯಿ, ‘ಪ್ರಧಾನಿ ನರೇಂದ್ರ ಮೋದಿ ಅವರು ನೈಸರ್ಗಿಕ ಕೃಷಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದಾರೆ. ರೈತರು ತಮ್ಮ ಪೂರ್ವಜರ ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಹೆಚ್ಚಿನ ಉತ್ಪಾದನೆ ಮಾಡಬೇಕು. ಮಾಜಿ ಸೈನಿಕರು ಕಟ್ಟಿರುವ ಈ ಕಂಪನಿ, ರೈತರನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು. ಸೈನಿಕರ ಮೇಲೆ ವಿಶ್ವಾಸ ಹೆಚ್ಚಿರುತ್ತದೆ. ಅದನ್ನು ಕಂಪನಿ ಉಳಿಸಿಕೊಳ್ಳಬೇಕು’ ಎಂದರು.</p>.<p>2 ಲಕ್ಷ ಸದಸ್ಯರು: ಮಹಾರಾಷ್ಟ್ರದ ನಾಸಿಕ್ನಲ್ಲಿ ಆರಂಭವಾದ ಕಂಪನಿ, ಇಂದು ದೇಶದಾದ್ಯಂತ ಕಚೇರಿಗಳನ್ನು ಹೊಂದಿದೆ. ಕಂಪನಿಯಲ್ಲಿ 2 ಲಕ್ಷ ರೈತರು ಸದಸ್ಯತ್ವ ಪಡೆದಿದ್ದಾರೆ. ಸಬ್ಸಿಡಿ ದರದಲ್ಲಿ ಬೀಜ, ಔಷಧಿ, ಗೊಬ್ಬರ ಪಡೆಯುತ್ತಿದ್ದಾರೆ. ಜೊತೆಗೆ, ಕೀಟನಾಶಕ ಖರೀದಿ ಮೇಲೆಯೇ ವಿಮೆ ಸೌಲಭ್ಯ ನೀಡಲಾಗುತ್ತಿದೆ.</p>.<p>‘ನಮ್ಮ ಕಂಪನಿಯು ಸರ್ಕಾರ ಹಾಗೂ ಖಾಸಗಿಯವರ ಸಹಕಾರವಿಲ್ಲದೇ, ಸದಸ್ಯರ ಮೂಲಕ ಸ್ವಾವಲಂಬಿಯಾಗಿ ಬೆಳೆಯುತ್ತಿದೆ. ರೈತರ ಪ್ರತಿಯೊಂದು ಸಮಸ್ಯೆಗೂ ಪರಿಹಾರ ಕಂಡುಕೊಳ್ಳಲಾಗುತ್ತಿದೆ. ಮೆಕ್ಕೆಜೋಳವನ್ನು ಎಂಎಸ್ಪಿ ದರದಲ್ಲಿ ಖರೀದಿಸಿ, ಇಥೆನಾಲ್ ಮಾಡುವ ಕಾರ್ಖಾನೆಯನ್ನು ಸೊಲ್ಲಾಪುರದಲ್ಲಿ ನಿರ್ಮಿಸಲಾಗುತ್ತಿದೆ’ ಎಂದು ಮಾಜಿ ಸೈನಿಕರು ತಿಳಿಸಿದರು.</p>.<p>ಕಂಪನಿಯ ಶಿವಾಜಿ ಶ್ಯಾಮರಾವ್ ಡೋಲೆ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ಮಹಾರಾಷ್ಟ್ರದಲ್ಲಿ 528 ಎಕರೆ ಜಮೀನಿನಲ್ಲಿ ಕೃಷಿ ಮಾಡಿ ಯಶಸ್ವಿಯಾಗಿರುವ ಮಾಜಿ ಸೈನಿಕರು, ಇದೀಗ ಹಾವೇರಿಯಲ್ಲಿ ರೈತರಿಗೆ ಕೃಷಿ ಸಲಹೆಗಳನ್ನು ನೀಡಲು ಹೊಸ ‘ಕೃಷಿ ಸೇವಾ ಕೇಂದ್ರ’ ಆರಂಭಿಸುತ್ತಿದ್ದಾರೆ. ಸೇವಾ ಕೇಂದ್ರವನ್ನು ಭಾನುವಾರ ರೈತರ ಬಳಕೆಗೆ ಮುಕ್ತಗೊಳಿಸಲಾಯಿತು.</p>.<p>ಸೇನೆಯಿಂದ ನಿವೃತ್ತರಾದ ಮಾಜಿ ಸೈನಿಕರೇ ಸೇರಿಕೊಂಡು ‘ವೆಂಕಟೇಶ್ವರ ಕೋ ಆಪರೇಟಿವ್ ಪವರ್ ಆ್ಯಂಡ್ ಅಗ್ರೊ ಪ್ರೊಸೆಸಿಂಗ್ ಕಂಪನಿ’ ಸ್ಥಾಪಿಸಿದ್ದಾರೆ. ಇದರಡಿ ಕೃಷಿ ಕೆಲಸ ಹಾಗೂ ರೈತರ ಆರ್ಥಿಕ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದಾರೆ. ಹಾವೇರಿಯ ಬಸವೇಶ್ವರನಗರದಲ್ಲಿ ಕಚೇರಿ ತೆರೆಯಲಾಗಿದ್ದು, 9 ಸಾವಿರ ರೈತರು ಈಗಾಗಲೇ ಸದಸ್ಯತ್ವ ನೋಂದಣಿ ಮಾಡಿಸಿದ್ದಾರೆ.</p>.<p>ಕೇಂದ್ರವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದ ಸಂಸದ ಬಸವರಾಜ ಬೊಮ್ಮಾಯಿ, ‘ಪ್ರಧಾನಿ ನರೇಂದ್ರ ಮೋದಿ ಅವರು ನೈಸರ್ಗಿಕ ಕೃಷಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದಾರೆ. ರೈತರು ತಮ್ಮ ಪೂರ್ವಜರ ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಹೆಚ್ಚಿನ ಉತ್ಪಾದನೆ ಮಾಡಬೇಕು. ಮಾಜಿ ಸೈನಿಕರು ಕಟ್ಟಿರುವ ಈ ಕಂಪನಿ, ರೈತರನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು. ಸೈನಿಕರ ಮೇಲೆ ವಿಶ್ವಾಸ ಹೆಚ್ಚಿರುತ್ತದೆ. ಅದನ್ನು ಕಂಪನಿ ಉಳಿಸಿಕೊಳ್ಳಬೇಕು’ ಎಂದರು.</p>.<p>2 ಲಕ್ಷ ಸದಸ್ಯರು: ಮಹಾರಾಷ್ಟ್ರದ ನಾಸಿಕ್ನಲ್ಲಿ ಆರಂಭವಾದ ಕಂಪನಿ, ಇಂದು ದೇಶದಾದ್ಯಂತ ಕಚೇರಿಗಳನ್ನು ಹೊಂದಿದೆ. ಕಂಪನಿಯಲ್ಲಿ 2 ಲಕ್ಷ ರೈತರು ಸದಸ್ಯತ್ವ ಪಡೆದಿದ್ದಾರೆ. ಸಬ್ಸಿಡಿ ದರದಲ್ಲಿ ಬೀಜ, ಔಷಧಿ, ಗೊಬ್ಬರ ಪಡೆಯುತ್ತಿದ್ದಾರೆ. ಜೊತೆಗೆ, ಕೀಟನಾಶಕ ಖರೀದಿ ಮೇಲೆಯೇ ವಿಮೆ ಸೌಲಭ್ಯ ನೀಡಲಾಗುತ್ತಿದೆ.</p>.<p>‘ನಮ್ಮ ಕಂಪನಿಯು ಸರ್ಕಾರ ಹಾಗೂ ಖಾಸಗಿಯವರ ಸಹಕಾರವಿಲ್ಲದೇ, ಸದಸ್ಯರ ಮೂಲಕ ಸ್ವಾವಲಂಬಿಯಾಗಿ ಬೆಳೆಯುತ್ತಿದೆ. ರೈತರ ಪ್ರತಿಯೊಂದು ಸಮಸ್ಯೆಗೂ ಪರಿಹಾರ ಕಂಡುಕೊಳ್ಳಲಾಗುತ್ತಿದೆ. ಮೆಕ್ಕೆಜೋಳವನ್ನು ಎಂಎಸ್ಪಿ ದರದಲ್ಲಿ ಖರೀದಿಸಿ, ಇಥೆನಾಲ್ ಮಾಡುವ ಕಾರ್ಖಾನೆಯನ್ನು ಸೊಲ್ಲಾಪುರದಲ್ಲಿ ನಿರ್ಮಿಸಲಾಗುತ್ತಿದೆ’ ಎಂದು ಮಾಜಿ ಸೈನಿಕರು ತಿಳಿಸಿದರು.</p>.<p>ಕಂಪನಿಯ ಶಿವಾಜಿ ಶ್ಯಾಮರಾವ್ ಡೋಲೆ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>