ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ಕಮಹಾದೇವಿ ಸರಳ ಜಯಂತಿ

Last Updated 27 ಏಪ್ರಿಲ್ 2021, 15:07 IST
ಅಕ್ಷರ ಗಾತ್ರ

ಹಾವೇರಿ: ನಗರದ ಹೊಸಮಠದ ಬಸವಕೇಂದ್ರದಲ್ಲಿಅಕ್ಕಮಹಾದೇವಿ ಮಹಿಳಾ ಬಳಗದ ಸಹಯೋಗದಲ್ಲಿ ಮಂಗಳವಾರ
ಅಕ್ಕಮಹಾದೇವಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಸಾನ್ನಿಧ್ಯ ವಹಿಸಿದ್ದ ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಮಾತನಾಡಿ, ‘ಜೀವನದ ಸತ್ಯಗಳನ್ನು ಆಧ್ಯಾತ್ಮಿಕ ನಿಧಿಯ ರತ್ನಗಳನ್ನು ನಿರೂಪಿಸಿ, ಅದನ್ನು ಪಡೆಯುವ ವಿಧಾನವನ್ನು ತಿಳಿಸಿಕೊಡುವ ಧರ್ಮವು ಯಾರೊಬ್ಬರ ಆಸ್ತಿಯೂ ಅಲ್ಲ ಎಂದು ಸಾರಿದ ಅಕ್ಕಮಹಾದೇವಿಮಹಿಳಾ ಸಮಾಜದ ಮೇರು ಪರ್ವತವಾಗಿ ಬೆಳಗಿದರು ಎಂದು ಬಣ್ಣಿಸಿದರು.

‘ಓಡುವ ಮನಸ್ಸನ್ನು ನಿಲ್ಲಿಸಿದ ಅಕ್ಕ ನಿರಾಕಾರ ದೇವನ ಸತಿಯಾದಳು. ಲೋಕದ ಎಲ್ಲಾ ಕ್ರಿಯೆಗಳಿಗೆ ಸೂರ್ಯನೇ ಕೇಂದ್ರಬೀಂದು. ಸೂರ್ಯನ ಉದಯವು ಜಗದ ಕ್ರಿಯಾಶೀಲತೆಗೆ ಸಾಕ್ಷಿಯಾಗಿದೆ ಎಂದು ಸಾರಿದರು. ಸಹಸ್ರಾರು ವರ್ಷಗಳಿಂದ ಬಂಧನದಲ್ಲಿ ಬಾಳುತ್ತಿದ್ದ ಸ್ತ್ರೀ ಕುಲಕ್ಕೆ ಗೌರವದ ಸ್ಥಾನಮಾನ ತಂದುಕೊಡುವ ಮುಖಾಂತರ ಮಹಿಳೆಯರು ಸಮಾಜದ ಎಲ್ಲ ಸ್ತರಗಳಲ್ಲಿ ಪುರುಷರಿಗೆ ಸಮಾನವಾಗಿ ನಿಲ್ಲಬಲ್ಲಳು ಎಂಬುದನ್ನು ಜಗತ್ತಿಗೆ ಸಾಬೀತು ಪಡಿಸಿದ ಧೀರ ಮಹಿಳೆ ಎಂದು ಗುಣಗಾನ ಮಾಡಿದರು.

ಲಲಿತಾ ಹಿರೇಮಠ, ಕಮಲಾ ಬುಕ್ಕಶೆಟ್ಟಿ, ನಾಗಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT