<p><strong>ರಾಣೆಬೆನ್ನೂರು: ‘</strong>ರಾಜ್ಯ ಸರ್ಕಾರದ ಹಾಗೂ ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ತಯಾರಿಸುವವರು, ವಿದ್ಯಾರ್ಥಿಗಳಿಗೆ ಎರಡನೇ ತಾಯಿ ಇದ್ದಂತೆ. ಅವರು ತಮ್ಮ ಜವಾಬ್ದಾರಿ ಅರಿತು ಕಾಯಕದ ಮೂಲಕ ಗೌರವ ಹೆಚ್ಚಿಸಿಕೊಳ್ಳಬೇಕು’ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.</p>.<p>ನಗರದ ಶಿಕ್ಷಕರ ಸಭಾಭವನದಲ್ಲಿ ‘ಅಕ್ಷರ ದಾಸೋಹ ಕಾರ್ಯಕ್ರಮದ ಯಶಸ್ವಿ ಅನುಷ್ಠಾನ’ ಕುರಿತು ಅಡುಗೆ ಸಿಬ್ಬಂದಿಗಾಗಿ ಶನಿವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಡುಗೆ ಸಿಬ್ಬಂದಿಗೆ ₹ 1000 ಹೆಚ್ಚುವರಿ ಗೌರವಧನ ಮಾಡಿದ್ದಾರೆ. ಅಡುಗೆ ಸಹಾಯಕರು ನಿವೃತ್ತಿ ಹೊಂದಿದವರಿಗೆ ಇಡಿಗಂಟು ಮೂಲಕ ಒಂದೇ ಬಾರಿಗೆ 15 ವರ್ಷ ಸೇವೆ ಸಲ್ಲಿಸಿದವರಿಗೆ ₹ 30 ಸಾವಿರ ಹಾಗೂ 15 ವರ್ಷ ಮೇಲ್ಪಟ್ಟು ಸೇವೆ ಮಾಡಿದವರಿಗೆ ₹ 40 ಸಾವಿರ ನೀಡುವ ವ್ಯವಸ್ಥೆ ಕಲ್ಪಿಸಿದ್ದಾರೆ’ ಎಂದರು.</p>.<p>‘ಬಡವರಿಗೆ ಹಣ ನೀಡಿದರೆ ಬಿಜೆಪಿಯವರಿಗೆ ತೊಂದರೆಯಾಗುತ್ತದೆ. ಗ್ಯಾರಂಟಿಗಳಿಂದ ಕುಟುಂಬಗಳು ಬಡತನ ರೇಖೆಯಿಂದ ಮೇಲೆ ಬಂದಿವೆ. ಮಹಿಳೆಯರು ಗ್ಯಾರಂಟಿ ಯೋಜನೆಗಳಿಂದ ಸಬಲರಾಗಿದ್ದಾರೆ‘ ಎಂದರು.</p>.<p>ಐಎಫ್ಟಿಯು ರಾಜ್ಯ ಘಟಕದ ಅಧ್ಯಕ್ಷ ಹೊನ್ನಪ್ಪ ಮರಿಯಮ್ಮನವರ, ಬಿ.ಆರ್.ಸಿ ಮಂಜುನಾಥ ನಾಯಕ್ ಮಾತನಾಡಿದರು.</p>.<p>ಅಗ್ನಿಶಾಮಕ ದಳದವರು, ಎಲ್ಲಿಯಾದರೂ ಬೆಂಕಿ ಅವಘಡ ಸಂಭವಿಸಿದರೆ ಅದನ್ನು ನಿಯಂತ್ರಿಸುವುದು ಹೇಗೆ ಎಂಬ ಬಗ್ಗೆ ಪಾತ್ಯಕ್ಷಿಕೆ ನೀಡಿದರು.</p>.<p>ಪ್ರಭಾಕರ ಚಿಂದಿ, ಲತಾ ಹಿರೇಮಠ, ರಾಜೇಶ್ವರಿ ಪಾಟೀಲ, ಗಂಗಪ್ಪ ನಾಯಕ, ಪ್ರವೀಣ ಕೋರ್ಪಡೆ, ಸಂತೋಷ ಹುಳ್ಳೇರ, ಶಿವಕುಮಾರ ಚವಟಗಿ, ಶಿವಪ್ಪ ಬನ್ನಿಕೋಡ, ಎನ್.ಎನ್.ಅಣ್ಣೇರ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಣೆಬೆನ್ನೂರು: ‘</strong>ರಾಜ್ಯ ಸರ್ಕಾರದ ಹಾಗೂ ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ತಯಾರಿಸುವವರು, ವಿದ್ಯಾರ್ಥಿಗಳಿಗೆ ಎರಡನೇ ತಾಯಿ ಇದ್ದಂತೆ. ಅವರು ತಮ್ಮ ಜವಾಬ್ದಾರಿ ಅರಿತು ಕಾಯಕದ ಮೂಲಕ ಗೌರವ ಹೆಚ್ಚಿಸಿಕೊಳ್ಳಬೇಕು’ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.</p>.<p>ನಗರದ ಶಿಕ್ಷಕರ ಸಭಾಭವನದಲ್ಲಿ ‘ಅಕ್ಷರ ದಾಸೋಹ ಕಾರ್ಯಕ್ರಮದ ಯಶಸ್ವಿ ಅನುಷ್ಠಾನ’ ಕುರಿತು ಅಡುಗೆ ಸಿಬ್ಬಂದಿಗಾಗಿ ಶನಿವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಡುಗೆ ಸಿಬ್ಬಂದಿಗೆ ₹ 1000 ಹೆಚ್ಚುವರಿ ಗೌರವಧನ ಮಾಡಿದ್ದಾರೆ. ಅಡುಗೆ ಸಹಾಯಕರು ನಿವೃತ್ತಿ ಹೊಂದಿದವರಿಗೆ ಇಡಿಗಂಟು ಮೂಲಕ ಒಂದೇ ಬಾರಿಗೆ 15 ವರ್ಷ ಸೇವೆ ಸಲ್ಲಿಸಿದವರಿಗೆ ₹ 30 ಸಾವಿರ ಹಾಗೂ 15 ವರ್ಷ ಮೇಲ್ಪಟ್ಟು ಸೇವೆ ಮಾಡಿದವರಿಗೆ ₹ 40 ಸಾವಿರ ನೀಡುವ ವ್ಯವಸ್ಥೆ ಕಲ್ಪಿಸಿದ್ದಾರೆ’ ಎಂದರು.</p>.<p>‘ಬಡವರಿಗೆ ಹಣ ನೀಡಿದರೆ ಬಿಜೆಪಿಯವರಿಗೆ ತೊಂದರೆಯಾಗುತ್ತದೆ. ಗ್ಯಾರಂಟಿಗಳಿಂದ ಕುಟುಂಬಗಳು ಬಡತನ ರೇಖೆಯಿಂದ ಮೇಲೆ ಬಂದಿವೆ. ಮಹಿಳೆಯರು ಗ್ಯಾರಂಟಿ ಯೋಜನೆಗಳಿಂದ ಸಬಲರಾಗಿದ್ದಾರೆ‘ ಎಂದರು.</p>.<p>ಐಎಫ್ಟಿಯು ರಾಜ್ಯ ಘಟಕದ ಅಧ್ಯಕ್ಷ ಹೊನ್ನಪ್ಪ ಮರಿಯಮ್ಮನವರ, ಬಿ.ಆರ್.ಸಿ ಮಂಜುನಾಥ ನಾಯಕ್ ಮಾತನಾಡಿದರು.</p>.<p>ಅಗ್ನಿಶಾಮಕ ದಳದವರು, ಎಲ್ಲಿಯಾದರೂ ಬೆಂಕಿ ಅವಘಡ ಸಂಭವಿಸಿದರೆ ಅದನ್ನು ನಿಯಂತ್ರಿಸುವುದು ಹೇಗೆ ಎಂಬ ಬಗ್ಗೆ ಪಾತ್ಯಕ್ಷಿಕೆ ನೀಡಿದರು.</p>.<p>ಪ್ರಭಾಕರ ಚಿಂದಿ, ಲತಾ ಹಿರೇಮಠ, ರಾಜೇಶ್ವರಿ ಪಾಟೀಲ, ಗಂಗಪ್ಪ ನಾಯಕ, ಪ್ರವೀಣ ಕೋರ್ಪಡೆ, ಸಂತೋಷ ಹುಳ್ಳೇರ, ಶಿವಕುಮಾರ ಚವಟಗಿ, ಶಿವಪ್ಪ ಬನ್ನಿಕೋಡ, ಎನ್.ಎನ್.ಅಣ್ಣೇರ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>