<p><strong>ಶಿಗ್ಗಾವಿ:</strong> ‘ಪಾನ ಮುಕ್ತ ದೇಶ ನಿರ್ಮಾಣದಿಂದ ದುಶ್ಚಟಗಳು ದೂರವಾಗಿ ಪ್ರತಿಯೊಬ್ಬರ ಭವಿಷ್ಯ ಉಜ್ವಲವಾಗಲಿದೆ’ ಎಂದು ಶಾಸಕ ಯಾಶೀರ್ ಅಹ್ಮದ್ಖಾನ್ ಪಠಾಣ ಹೇಳಿದರು.</p>.<p>ಪಟ್ಟಣದ ವಿರಕ್ತಮಠದಲ್ಲಿ ಸೋಮವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್, ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ಜಿಲ್ಲಾ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಸಹಯೋಗದಲ್ಲಿ ನಡೆದ ಗಾಂಧಿಸ್ಮೃತಿ, ಪಾನ ಮುಕ್ತರ ಅಭಿನಂದನಾ ಹಾಗೂ ಜನಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>ಸಮಾಜ ಶ್ರೇಯೋಭಿವೃದ್ಧಿಗೆ ಧರ್ಮಸ್ಥಳ ಸಂಘದ ಸೇವಾ ಕಾರ್ಯ ಶ್ಲಾಘನೀಯ. ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಪೂರಕ ಯೋಜನೆ ಜಾರಿಗೆ ತರುವುದರ ಮೂಲಕ ಅಭಿವೃದ್ಧಿಗೆ ಶ್ರಮಿಸುತ್ತಿದೆ’ ಎಂದರು.</p>.<p>ತಹಶೀಲ್ದಾರ್ ಯಲ್ಲಪ್ಪ ಗೋಣೆಣ್ಣವರ ಮಾತನಾಡಿ, ‘ವ್ಯಸನಗಳು ಮನುಷ್ಯನ ಬದುಕನ್ನು ಹಾಳು ಮಾಡುತ್ತಿವೆ. ಸಂಘವು ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ನೀಡಿದೆ’ ಎಂದರು.</p>.<p>ಧರ್ಮಸ್ಥಳ ಸಂಘದ ಧಾರವಾಡ ವಿಭಾಗದ ನಿರ್ದೇಶಕ ಬಾಸ್ಕರ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷ ಕಲ್ಯಾಣ ಕುಮಾರ ಶೆಟ್ಟರ್, ಸದಸ್ಯ ಶಿವಾನಂದ ಮ್ಯಾಗೇರಿ, ಜಿಲ್ಲಾಘಟಕದ ಅಧ್ಯಕ್ಷ ಶಿವರಾಯ ಪ್ರಭು, ಸಂಘದ ತಾಲ್ಲೂಕು ನಿದೇಶಕ ಶೇಖರ ನಾಯಕ ಮಾತನಾಡಿದರು.</p>.<p>ವಿರಕ್ತಮಠದ ಸಂಗನಬಸವ ಸ್ವಾಮೀಜಿ ಉದ್ಘಾಟಿಸಿದರು. ಮುಖಂಡರಾದ ಬಸಣ್ಣ ಹೆಸರೂರ, ಮೈಲಾರೆಪ್ಪ ತಳ್ಳಿಹಳ್ಳಿ, ವಾಸುದೇವಮೂರ್ತಿ ಮೂಡೆ, ಬಸವರಾಜ ಹುಲತ್ತಿ, ನಿಂಗಪ್ಪ ನೆಗಳೂರ, ಎಸ್.ಎಫ್. ಮಣಕಟ್ಟಿ, ಮಂಜುನಾಥ ಕಾರಡಗಿ, ಮಲ್ಲಮ್ಮ ಸೋಮನಕಟ್ಟಿ, ಅನಸೂಯಾ ಬಳಿಗಾರ, ರಾಘವೇಂದ್ರ ಪೂಜಾರ ಇದ್ದರು.</p>.<p>ಬೆಳಿಗ್ಗೆ ಪಟ್ಟಣದ ಕಿತ್ತೂರ ರಾಣಿ ಚನ್ನಮ್ಮ ವೃತ್ತದಿಂದ ವಿರಕ್ತಮಠದವರೆಗೆ ಜಾಗೃತಿ ಜಾಥಾ ಹಾಗೂ ವಿವಿಧ ಶಾಲೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಗ್ಗಾವಿ:</strong> ‘ಪಾನ ಮುಕ್ತ ದೇಶ ನಿರ್ಮಾಣದಿಂದ ದುಶ್ಚಟಗಳು ದೂರವಾಗಿ ಪ್ರತಿಯೊಬ್ಬರ ಭವಿಷ್ಯ ಉಜ್ವಲವಾಗಲಿದೆ’ ಎಂದು ಶಾಸಕ ಯಾಶೀರ್ ಅಹ್ಮದ್ಖಾನ್ ಪಠಾಣ ಹೇಳಿದರು.</p>.<p>ಪಟ್ಟಣದ ವಿರಕ್ತಮಠದಲ್ಲಿ ಸೋಮವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್, ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ಜಿಲ್ಲಾ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಸಹಯೋಗದಲ್ಲಿ ನಡೆದ ಗಾಂಧಿಸ್ಮೃತಿ, ಪಾನ ಮುಕ್ತರ ಅಭಿನಂದನಾ ಹಾಗೂ ಜನಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>ಸಮಾಜ ಶ್ರೇಯೋಭಿವೃದ್ಧಿಗೆ ಧರ್ಮಸ್ಥಳ ಸಂಘದ ಸೇವಾ ಕಾರ್ಯ ಶ್ಲಾಘನೀಯ. ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಪೂರಕ ಯೋಜನೆ ಜಾರಿಗೆ ತರುವುದರ ಮೂಲಕ ಅಭಿವೃದ್ಧಿಗೆ ಶ್ರಮಿಸುತ್ತಿದೆ’ ಎಂದರು.</p>.<p>ತಹಶೀಲ್ದಾರ್ ಯಲ್ಲಪ್ಪ ಗೋಣೆಣ್ಣವರ ಮಾತನಾಡಿ, ‘ವ್ಯಸನಗಳು ಮನುಷ್ಯನ ಬದುಕನ್ನು ಹಾಳು ಮಾಡುತ್ತಿವೆ. ಸಂಘವು ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ನೀಡಿದೆ’ ಎಂದರು.</p>.<p>ಧರ್ಮಸ್ಥಳ ಸಂಘದ ಧಾರವಾಡ ವಿಭಾಗದ ನಿರ್ದೇಶಕ ಬಾಸ್ಕರ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷ ಕಲ್ಯಾಣ ಕುಮಾರ ಶೆಟ್ಟರ್, ಸದಸ್ಯ ಶಿವಾನಂದ ಮ್ಯಾಗೇರಿ, ಜಿಲ್ಲಾಘಟಕದ ಅಧ್ಯಕ್ಷ ಶಿವರಾಯ ಪ್ರಭು, ಸಂಘದ ತಾಲ್ಲೂಕು ನಿದೇಶಕ ಶೇಖರ ನಾಯಕ ಮಾತನಾಡಿದರು.</p>.<p>ವಿರಕ್ತಮಠದ ಸಂಗನಬಸವ ಸ್ವಾಮೀಜಿ ಉದ್ಘಾಟಿಸಿದರು. ಮುಖಂಡರಾದ ಬಸಣ್ಣ ಹೆಸರೂರ, ಮೈಲಾರೆಪ್ಪ ತಳ್ಳಿಹಳ್ಳಿ, ವಾಸುದೇವಮೂರ್ತಿ ಮೂಡೆ, ಬಸವರಾಜ ಹುಲತ್ತಿ, ನಿಂಗಪ್ಪ ನೆಗಳೂರ, ಎಸ್.ಎಫ್. ಮಣಕಟ್ಟಿ, ಮಂಜುನಾಥ ಕಾರಡಗಿ, ಮಲ್ಲಮ್ಮ ಸೋಮನಕಟ್ಟಿ, ಅನಸೂಯಾ ಬಳಿಗಾರ, ರಾಘವೇಂದ್ರ ಪೂಜಾರ ಇದ್ದರು.</p>.<p>ಬೆಳಿಗ್ಗೆ ಪಟ್ಟಣದ ಕಿತ್ತೂರ ರಾಣಿ ಚನ್ನಮ್ಮ ವೃತ್ತದಿಂದ ವಿರಕ್ತಮಠದವರೆಗೆ ಜಾಗೃತಿ ಜಾಥಾ ಹಾಗೂ ವಿವಿಧ ಶಾಲೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>