<p><strong>ಹಾನಗಲ್: ‘</strong>ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಘಟಕದ ಚುನಾವಣೆಯನ್ನು ಬಹಿಷ್ಕರಿಸುವ ನಿರ್ಣಯ ಕೈಗೊಳ್ಳಲಾಗಿದೆ’ ಎಂದು ಮಹಾಸಭಾ ಸದಸ್ಯ ಪ್ರಶಾಂತ ಮುಚ್ಚಂಡಿ ಹೇಳಿದರು.</p>.<p>ಇಲ್ಲಿನ ಕುಮಾರೇಶ್ವರ ವಿರಕ್ತಮಠದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಬಹಿಷ್ಕಾರದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಈಗಾಗಲೇ ಚುನಾವಣಾ ಪ್ರಕ್ರಿಯೆಗಳು ಆರಂಭಗೊಡಿವೆ. ಅಖಿಲ ಭಾರತ ವೀರಶೈವ ಮಹಾಸಭೆ ಸ್ಥಾಪನೆ ಮಾಡಿದ ಹಾನಗಲ್ ಕುಮಾರೇಶ್ವರ ವಿರಕ್ತಮಠದ ಆಸ್ತಿಗಳನ್ನು ಸಂರಕ್ಷಿಸಬೇಕಾಗಿದ್ದ ಅಖಿಲ<br> ಭಾರತ ವೀರಶೈವ ಮಹಾಸಭಾ ನಿರ್ಲಕ್ಷ್ಯ ವಹಿಸಿದ್ದು, ಇದು ತಾಲ್ಲೂಕಿನ ವೀರಶೈವ ಮಹಾಸಭಾ ಸದಸ್ಯರ ಅಸಮಾಧಾನಕ್ಕೆ ಕಾರಣವಾಗಿದೆ’ ಎಂದರು.</p>.<p>‘ಹಾನಗಲ್ ವಿರಕ್ತಮಠ ಮತ್ತು ಮಠದ ಆಸ್ತಿ ಸಂಕಷ್ಟದಲ್ಲಿರುವಾಗ ಮಹಾಸಭಾ ಚುನಾವಣೆಯ ಅವಶ್ಯಕತೆ ಇಲ್ಲ. ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಘಟಕ, ಜಿಲ್ಲಾ ಘಟಕ ಮತ್ತು<br> ರಾಜ್ಯ ಘಟಕದಿಂದ ನಮ್ಮ ಮಠದ ವಿಷಯವನ್ನು ಇತ್ಯರ್ಥಗೊಳಿಸುವವರೆಗೆ ಚುನಾವಣೆ ಬೇಡ’ ಎಂದು ಆಗ್ರಹಿಸಿದರು.</p>.<p>ಈರಣ್ಣ ಹುಗ್ಗಿ, ರವೀಂದ್ರ ಚಿಕ್ಕೇರಿ, ಬಿ.ಎಸ್.ದಳವಾಯಿ, ಬಸು ಹಾದಿಮನಿ, ವೀರಣ್ಣ ಸಿಂಧೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾನಗಲ್: ‘</strong>ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಘಟಕದ ಚುನಾವಣೆಯನ್ನು ಬಹಿಷ್ಕರಿಸುವ ನಿರ್ಣಯ ಕೈಗೊಳ್ಳಲಾಗಿದೆ’ ಎಂದು ಮಹಾಸಭಾ ಸದಸ್ಯ ಪ್ರಶಾಂತ ಮುಚ್ಚಂಡಿ ಹೇಳಿದರು.</p>.<p>ಇಲ್ಲಿನ ಕುಮಾರೇಶ್ವರ ವಿರಕ್ತಮಠದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಬಹಿಷ್ಕಾರದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಈಗಾಗಲೇ ಚುನಾವಣಾ ಪ್ರಕ್ರಿಯೆಗಳು ಆರಂಭಗೊಡಿವೆ. ಅಖಿಲ ಭಾರತ ವೀರಶೈವ ಮಹಾಸಭೆ ಸ್ಥಾಪನೆ ಮಾಡಿದ ಹಾನಗಲ್ ಕುಮಾರೇಶ್ವರ ವಿರಕ್ತಮಠದ ಆಸ್ತಿಗಳನ್ನು ಸಂರಕ್ಷಿಸಬೇಕಾಗಿದ್ದ ಅಖಿಲ<br> ಭಾರತ ವೀರಶೈವ ಮಹಾಸಭಾ ನಿರ್ಲಕ್ಷ್ಯ ವಹಿಸಿದ್ದು, ಇದು ತಾಲ್ಲೂಕಿನ ವೀರಶೈವ ಮಹಾಸಭಾ ಸದಸ್ಯರ ಅಸಮಾಧಾನಕ್ಕೆ ಕಾರಣವಾಗಿದೆ’ ಎಂದರು.</p>.<p>‘ಹಾನಗಲ್ ವಿರಕ್ತಮಠ ಮತ್ತು ಮಠದ ಆಸ್ತಿ ಸಂಕಷ್ಟದಲ್ಲಿರುವಾಗ ಮಹಾಸಭಾ ಚುನಾವಣೆಯ ಅವಶ್ಯಕತೆ ಇಲ್ಲ. ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಘಟಕ, ಜಿಲ್ಲಾ ಘಟಕ ಮತ್ತು<br> ರಾಜ್ಯ ಘಟಕದಿಂದ ನಮ್ಮ ಮಠದ ವಿಷಯವನ್ನು ಇತ್ಯರ್ಥಗೊಳಿಸುವವರೆಗೆ ಚುನಾವಣೆ ಬೇಡ’ ಎಂದು ಆಗ್ರಹಿಸಿದರು.</p>.<p>ಈರಣ್ಣ ಹುಗ್ಗಿ, ರವೀಂದ್ರ ಚಿಕ್ಕೇರಿ, ಬಿ.ಎಸ್.ದಳವಾಯಿ, ಬಸು ಹಾದಿಮನಿ, ವೀರಣ್ಣ ಸಿಂಧೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>