ಹೊಸಳ್ಳಿ ಗ್ರಾಮದ ನಿವಾಸಿ ರವಿ ತಳವಾರ ಅವರ ಐದು ತಿಂಗಳ ಮಗ ಕಾರ್ತಿಕ ತೀವ್ರಬ ಜ್ವರದಿಂದ ಬಳತ್ತಿದ್ದು, ಶನಿವಾರ ರಾತ್ರಿ ಹಿರೇಕೆರೂರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿತ್ತು. ಸೂಕ್ತ ಚಿಕಿತ್ಸೆ ನೀಡದೆ, ಹಾವೇರಿ ಜಿಲ್ಲಾ ಆಸ್ಪತ್ರೆಗೆ ತೆಗೆದುಕೊಂಡು ಹೋಗುವಂತೆ ಅಲ್ಲಿನ ಸಿಬ್ಬಂದಿ ತಿಳಿಸಿದ್ದರು. ಅಲ್ಲಿಂದ ಜಿಲ್ಲಾ ಆಸ್ಪತ್ರೆಗೆ ಮಗುವನ್ನು ಸಾಗಿಸಲಾಗಿತ್ತು. ನಂತರ ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಬೇರೆಡೆ ಹೋಗಲು ತಿಳಿಸಿದ್ದಾರೆ. ಪೋಷಕರು ಮಗುವನ್ನು ಕರೆದುಕೊಂಡು ದಾವಣಗೇರೆ ಬಾಪೂಜಿ ಆಸ್ಪತ್ರೆಯಲ್ಲಿ ದಾಖಲಿಸಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮಗು ಮೃತಪಟ್ಟಿದೆ.