<p><strong>ರಾಣೆಬೆನ್ನೂರು (ಹಾವೇರಿ ಜಿಲ್ಲೆ):</strong> ‘ನರೇಗಾ ಯೋಜನೆಗಿದ್ದ ಮಹಾತ್ಮ ಗಾಂಧೀಜಿ ಹೆಸರನ್ನು ತೆಗೆದು ಹಾಕಿದ್ದಾರೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅವರ ಪಾತ್ರವಿಲ್ಲವೆಂದು ವಾದಿಸುತ್ತಾರೆ. ಇತಿಹಾಸ ತಿರುಚುವ ಕೆಲಸ ನಡೆದಿದೆ. ನಾವು ಗಟ್ಟಿಯಾಗಿ ನಿಲ್ಲದಿದ್ದರೆ, ಅಂಬೇಡ್ಕರ್ ಅವರ ಹೆಸರನ್ನು ಅಳಿಸಲು ಯತ್ನಿಸುತ್ತಾರೆ’ ಎಂದು ಸಚಿವ ಸತೀಶ ಜಾರಕಿಹೊಳಿ ಆತಂಕ ವ್ಯಕ್ತಪಡಿಸಿದರು.</p>.<p>ಇಲ್ಲಿಯ ಚಿದಂಬರನಗರದಲ್ಲಿರುವ ‘ಡಾ. ಬಿ.ಆರ್. ಅಂಬೇಡ್ಕರ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ’ದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಂಬೇಡ್ಕರ ಅವರ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.</p>.<p>‘ಅಸ್ಪೃಶ್ಯತೆಗಳನ್ನು ದೂರಗೊಳಿಸಿ ಸಮಾನತೆ ಸಂದೇಶ ಸಾರಿದವರು ಅಂಬೇಡ್ಕರ. ಸಂವಿಧಾನ ಕೇವಲ ಪರಿಶಿಷ್ಟರಿಗೆ ಸೀಮಿತ ಎಂದು ಭಾವಿಸಿದ್ದಾರೆ. ಇದು ಸರಿಯಲ್ಲ. ಸಂವಿಧಾನದ ಪರಿಕಲ್ಪನೆಯಲ್ಲಿ ಎಲ್ಲರೂ ಸರಿ ಸಮಾನರು. ಭೂಮಿ ಇರುವವರೆಗೆ ಅಂಬೇಡ್ಕರ್ ಅವರ ಸಂವಿಧಾನ ಕಾಪಾಡುವ ಪ್ರಯತ್ನ ಮಾಡಬೇಕು’ ಎಂದು ಹೇಳಿದರು.</p>.<p>ನ್ಯಾಯಾಲಯದಲ್ಲೂ ಅಂಬೇಡ್ಕರ್ ಚಿತ್ರ: ‘ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ವಸತಿ ನಿಲಯ ಮತ್ತು ಶಾಲೆಗಳನ್ನು ತೆರೆಯಲು ಸರ್ಕಾರ ಪ್ರಯತ್ನಿಸುತ್ತದೆ. ಮುಂದಿನ ಬಜೆಟ್ನಲ್ಲಿ ಈ ಬಗ್ಗೆ ತೀರ್ಮಾನ ತಿಳಿಸಲಾಗುವುದು. ನ್ಯಾಯಾಲಯಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಹಾಕುವ ಬಗ್ಗೆ ಚಿಂತನೆ ಮಾಡಲಾಗುತ್ತಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಣೆಬೆನ್ನೂರು (ಹಾವೇರಿ ಜಿಲ್ಲೆ):</strong> ‘ನರೇಗಾ ಯೋಜನೆಗಿದ್ದ ಮಹಾತ್ಮ ಗಾಂಧೀಜಿ ಹೆಸರನ್ನು ತೆಗೆದು ಹಾಕಿದ್ದಾರೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅವರ ಪಾತ್ರವಿಲ್ಲವೆಂದು ವಾದಿಸುತ್ತಾರೆ. ಇತಿಹಾಸ ತಿರುಚುವ ಕೆಲಸ ನಡೆದಿದೆ. ನಾವು ಗಟ್ಟಿಯಾಗಿ ನಿಲ್ಲದಿದ್ದರೆ, ಅಂಬೇಡ್ಕರ್ ಅವರ ಹೆಸರನ್ನು ಅಳಿಸಲು ಯತ್ನಿಸುತ್ತಾರೆ’ ಎಂದು ಸಚಿವ ಸತೀಶ ಜಾರಕಿಹೊಳಿ ಆತಂಕ ವ್ಯಕ್ತಪಡಿಸಿದರು.</p>.<p>ಇಲ್ಲಿಯ ಚಿದಂಬರನಗರದಲ್ಲಿರುವ ‘ಡಾ. ಬಿ.ಆರ್. ಅಂಬೇಡ್ಕರ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ’ದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಂಬೇಡ್ಕರ ಅವರ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.</p>.<p>‘ಅಸ್ಪೃಶ್ಯತೆಗಳನ್ನು ದೂರಗೊಳಿಸಿ ಸಮಾನತೆ ಸಂದೇಶ ಸಾರಿದವರು ಅಂಬೇಡ್ಕರ. ಸಂವಿಧಾನ ಕೇವಲ ಪರಿಶಿಷ್ಟರಿಗೆ ಸೀಮಿತ ಎಂದು ಭಾವಿಸಿದ್ದಾರೆ. ಇದು ಸರಿಯಲ್ಲ. ಸಂವಿಧಾನದ ಪರಿಕಲ್ಪನೆಯಲ್ಲಿ ಎಲ್ಲರೂ ಸರಿ ಸಮಾನರು. ಭೂಮಿ ಇರುವವರೆಗೆ ಅಂಬೇಡ್ಕರ್ ಅವರ ಸಂವಿಧಾನ ಕಾಪಾಡುವ ಪ್ರಯತ್ನ ಮಾಡಬೇಕು’ ಎಂದು ಹೇಳಿದರು.</p>.<p>ನ್ಯಾಯಾಲಯದಲ್ಲೂ ಅಂಬೇಡ್ಕರ್ ಚಿತ್ರ: ‘ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ವಸತಿ ನಿಲಯ ಮತ್ತು ಶಾಲೆಗಳನ್ನು ತೆರೆಯಲು ಸರ್ಕಾರ ಪ್ರಯತ್ನಿಸುತ್ತದೆ. ಮುಂದಿನ ಬಜೆಟ್ನಲ್ಲಿ ಈ ಬಗ್ಗೆ ತೀರ್ಮಾನ ತಿಳಿಸಲಾಗುವುದು. ನ್ಯಾಯಾಲಯಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಹಾಕುವ ಬಗ್ಗೆ ಚಿಂತನೆ ಮಾಡಲಾಗುತ್ತಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>