<p><strong>ಸವಣೂರು:</strong> ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪರಿನಿರ್ವಾಣ ದಿನ ಆಚರಿಸದೇ ನಿರ್ಲಕ್ಷ್ಯ ತೋರಿದ ಪೊಲೀಸ್ ಇಲಾಖೆ ಮೇಲೆ ದಲಿತ ಸಂಘಟನೆಗಳ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಪೊಲೀಸ್ ಠಾಣೆಗೆ ತೆರಳಿದ ದಲಿತ ಮುಖಂಡರು, ಪಿ.ಐ ದೇವಾನಂದ ಅವರನ್ನು ತರಾಟೆಗೆ ತೆಗೆದುಕೊಂಡು, ಪೊಲೀಸ್ ಇಲಾಖೆ ಸಂವಿಧಾನ ಶಿಲ್ಪಿಯ ನೆನಪು ದಿನ ನಿರ್ಲಕ್ಷಿಸಿದ್ದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ದಲಿತ ಮುಖಂಡರನ್ನು ಸಮಾಧಾನ ಪಡಿಸಿದ ಪಿ.ಐ ದೇವಾನಂದ, ರಾತ್ರಿ ಪಾಳಿಯಲ್ಲಿದ್ದೆ. ಆದ್ದರಿಂದ ಠಾಣೆಗೆ ಬರುವುದು ವಿಳಂಬವಾಯಿತು. ಠಾಣೆಯ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ನಿಮ್ಮಲ್ಲಿ ಕ್ಷಮೆ ಯಾಚಿಸುತ್ತೇನೆ. ಮುಂಬರುವ ದಿನಗಳಲ್ಲಿ ಈ ರೀತಿ ತಪ್ಪುಗಳು ನಡೆಯದಂತೆ ನೋಡಿಕೊಳ್ಳುವ ಭರವಸೆ ನೀಡಿದ ಬಳಿಕ ದಲಿತ ಮುಖಂಡರು, ಈ ತಪ್ಪು ಪುನರಾವರ್ತನೆಗೊಂಡರೆ, ಠಾಣೆಯ ಎದುರು ಹಲಗೆ ಹೊಡೆಯುವ ಮೂಲಕ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.<br><br> ಬಳಿಕ ಠಾಣೆಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಮುಖಂಡರಾದ ಲಕ್ಷ್ಮಣ ಕನವಳ್ಳಿ, ಪ್ರವೀಣ ಬಾಲೆಹೊಸೂರ, ರಂಗಪ್ಪ ಮೈಲೆಮ್ಮನವರ, ರಾಮಣ್ಣ ಅಗಸರ, ಮಲ್ಲೇಶ ಹರಿಜನ, ಪರಮೇಶ ಮಲ್ಲಮ್ಮನವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸವಣೂರು:</strong> ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪರಿನಿರ್ವಾಣ ದಿನ ಆಚರಿಸದೇ ನಿರ್ಲಕ್ಷ್ಯ ತೋರಿದ ಪೊಲೀಸ್ ಇಲಾಖೆ ಮೇಲೆ ದಲಿತ ಸಂಘಟನೆಗಳ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಪೊಲೀಸ್ ಠಾಣೆಗೆ ತೆರಳಿದ ದಲಿತ ಮುಖಂಡರು, ಪಿ.ಐ ದೇವಾನಂದ ಅವರನ್ನು ತರಾಟೆಗೆ ತೆಗೆದುಕೊಂಡು, ಪೊಲೀಸ್ ಇಲಾಖೆ ಸಂವಿಧಾನ ಶಿಲ್ಪಿಯ ನೆನಪು ದಿನ ನಿರ್ಲಕ್ಷಿಸಿದ್ದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ದಲಿತ ಮುಖಂಡರನ್ನು ಸಮಾಧಾನ ಪಡಿಸಿದ ಪಿ.ಐ ದೇವಾನಂದ, ರಾತ್ರಿ ಪಾಳಿಯಲ್ಲಿದ್ದೆ. ಆದ್ದರಿಂದ ಠಾಣೆಗೆ ಬರುವುದು ವಿಳಂಬವಾಯಿತು. ಠಾಣೆಯ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ನಿಮ್ಮಲ್ಲಿ ಕ್ಷಮೆ ಯಾಚಿಸುತ್ತೇನೆ. ಮುಂಬರುವ ದಿನಗಳಲ್ಲಿ ಈ ರೀತಿ ತಪ್ಪುಗಳು ನಡೆಯದಂತೆ ನೋಡಿಕೊಳ್ಳುವ ಭರವಸೆ ನೀಡಿದ ಬಳಿಕ ದಲಿತ ಮುಖಂಡರು, ಈ ತಪ್ಪು ಪುನರಾವರ್ತನೆಗೊಂಡರೆ, ಠಾಣೆಯ ಎದುರು ಹಲಗೆ ಹೊಡೆಯುವ ಮೂಲಕ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.<br><br> ಬಳಿಕ ಠಾಣೆಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಮುಖಂಡರಾದ ಲಕ್ಷ್ಮಣ ಕನವಳ್ಳಿ, ಪ್ರವೀಣ ಬಾಲೆಹೊಸೂರ, ರಂಗಪ್ಪ ಮೈಲೆಮ್ಮನವರ, ರಾಮಣ್ಣ ಅಗಸರ, ಮಲ್ಲೇಶ ಹರಿಜನ, ಪರಮೇಶ ಮಲ್ಲಮ್ಮನವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>