<p><strong>ಬ್ಯಾಡಗಿ</strong>: ಗುಜರಾತ ಹೈಕೋರ್ಟ್ ಆದೇಶದನ್ವಯ ಅಂಗನವಾಡಿ ಕಾರ್ಯಕರ್ತೆಯರನ್ನು ಕಾಯಂಗೊಳಿಸುವುದು, ₹26 ಸಾವಿರ ಕನಿಷ್ಠ ವೇತನ, ₹10 ಸಾವಿರ ಮಾಸಿಕ ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ತಾಲ್ಲೂಕು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಬುಧವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಫಿರೋಜಷಾ ಸೋಮನಕಟ್ಟಿ ಹಾಗೂ ಸಿಡಿಪಿಒ ಚಂದ್ರಶೇಖರ ಅವರಿಗೆ ಮನವಿ ಸಲ್ಲಿಸಿದರು.</p>.<p>ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ತಾಲ್ಲೂಕು ಘಕಟದ ಪ್ರಧಾನ ಕಾರ್ಯದರ್ಶಿ ಹೇಮಾವತಿ ಎಲಿ ಮಾತನಾಡಿ, ‘ಅಂಗನವಾಡಿ ಕೇಂದ್ರಗಳಿಗೆ ಮೂಲ ಸೌಲಭ್ಯಗಳನ್ನು ಕಲ್ಪಿಸಿ, ಎಲ್ಕೆಜಿ ಸ್ಥಾಪಿಸಬೇಕು, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>ಅಧ್ಯಕ್ಷೆ ಗೌರಮ್ಮ ನಾಯ್ಕರ್ ಮಾತನಾಡಿ, ‘ಅಂಗನವಾಡಿ ಕಾರ್ಯಕರ್ತೆಯರನ್ನು ಕೇಂದ್ರ ಸರ್ಕಾರ ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲಿ ಖಾಯಂಗೊಳಿಸಬೇಕು. ಅಲ್ಲಿಯವರೆಗೆ ಕನಿಷ್ಠ ವೇತನ ನೀಡಬೇಕು. ಫಲಾನುಭವಿಗಳ ಘಟಕ ವೆಚ್ಚ ಹೆಚ್ಚಿಸಬೇಕು’ ಎಂದರು.</p>.<p>ಉಪಾಧ್ಯಕ್ಷೆ ಹೇಮಾ ಆಸಾದಿ ಮಾತನಾಡಿ, ‘ಅಂಗನವಾಡಿ ಕೇಂದ್ರಗಳಲ್ಲಿ ಎಫ್ಆರ್ಎಸ್ ಜಾರಿಗೆ ತಂದು ಒತ್ತಡ ಹೇರಲಾಗುತ್ತಿದೆ. ಇದನ್ನು ಕೂಡಲೆ ವಾಪಸ್ ಪಡೆಯುವಂತೆ’ ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಪರಮೇಶ್ವರಿ ಮಧ್ಯಾಹ್ನದ, ಲೀಲಾವತಿ ಸಾತಣ್ಣನವರ, ಲೀಲಾ ಆಲದಕಟ್ಟಿ, ಸುಧಾ ಅಂಗಡಿ, ರಾಜೇಶ್ವರಿ ಹಿರೇಮಠ, ಕವಿತಾ ನಾಡಿಗೇರ, ಶಕುಂತಲಾ ದಾನಣ್ಣನವರ, ಗೋಜಾ ನಾಯಕ, ಮುತ್ತಕ್ಕ ಪೂಜಾರ, ರತ್ನಾ ಡಂಬಳ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಡಗಿ</strong>: ಗುಜರಾತ ಹೈಕೋರ್ಟ್ ಆದೇಶದನ್ವಯ ಅಂಗನವಾಡಿ ಕಾರ್ಯಕರ್ತೆಯರನ್ನು ಕಾಯಂಗೊಳಿಸುವುದು, ₹26 ಸಾವಿರ ಕನಿಷ್ಠ ವೇತನ, ₹10 ಸಾವಿರ ಮಾಸಿಕ ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ತಾಲ್ಲೂಕು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಬುಧವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಫಿರೋಜಷಾ ಸೋಮನಕಟ್ಟಿ ಹಾಗೂ ಸಿಡಿಪಿಒ ಚಂದ್ರಶೇಖರ ಅವರಿಗೆ ಮನವಿ ಸಲ್ಲಿಸಿದರು.</p>.<p>ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ತಾಲ್ಲೂಕು ಘಕಟದ ಪ್ರಧಾನ ಕಾರ್ಯದರ್ಶಿ ಹೇಮಾವತಿ ಎಲಿ ಮಾತನಾಡಿ, ‘ಅಂಗನವಾಡಿ ಕೇಂದ್ರಗಳಿಗೆ ಮೂಲ ಸೌಲಭ್ಯಗಳನ್ನು ಕಲ್ಪಿಸಿ, ಎಲ್ಕೆಜಿ ಸ್ಥಾಪಿಸಬೇಕು, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>ಅಧ್ಯಕ್ಷೆ ಗೌರಮ್ಮ ನಾಯ್ಕರ್ ಮಾತನಾಡಿ, ‘ಅಂಗನವಾಡಿ ಕಾರ್ಯಕರ್ತೆಯರನ್ನು ಕೇಂದ್ರ ಸರ್ಕಾರ ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲಿ ಖಾಯಂಗೊಳಿಸಬೇಕು. ಅಲ್ಲಿಯವರೆಗೆ ಕನಿಷ್ಠ ವೇತನ ನೀಡಬೇಕು. ಫಲಾನುಭವಿಗಳ ಘಟಕ ವೆಚ್ಚ ಹೆಚ್ಚಿಸಬೇಕು’ ಎಂದರು.</p>.<p>ಉಪಾಧ್ಯಕ್ಷೆ ಹೇಮಾ ಆಸಾದಿ ಮಾತನಾಡಿ, ‘ಅಂಗನವಾಡಿ ಕೇಂದ್ರಗಳಲ್ಲಿ ಎಫ್ಆರ್ಎಸ್ ಜಾರಿಗೆ ತಂದು ಒತ್ತಡ ಹೇರಲಾಗುತ್ತಿದೆ. ಇದನ್ನು ಕೂಡಲೆ ವಾಪಸ್ ಪಡೆಯುವಂತೆ’ ಆಗ್ರಹಿಸಿದರು.</p>.<p>ಪ್ರತಿಭಟನೆಯಲ್ಲಿ ಪರಮೇಶ್ವರಿ ಮಧ್ಯಾಹ್ನದ, ಲೀಲಾವತಿ ಸಾತಣ್ಣನವರ, ಲೀಲಾ ಆಲದಕಟ್ಟಿ, ಸುಧಾ ಅಂಗಡಿ, ರಾಜೇಶ್ವರಿ ಹಿರೇಮಠ, ಕವಿತಾ ನಾಡಿಗೇರ, ಶಕುಂತಲಾ ದಾನಣ್ಣನವರ, ಗೋಜಾ ನಾಯಕ, ಮುತ್ತಕ್ಕ ಪೂಜಾರ, ರತ್ನಾ ಡಂಬಳ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>