ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೀರಭದ್ರೇಶ್ವರ, ಆಂಜನೇಯ ಸ್ವಾಮಿ ರಥೋತ್ಸವ

Last Updated 12 ಏಪ್ರಿಲ್ 2022, 5:29 IST
ಅಕ್ಷರ ಗಾತ್ರ

ತಿಳವಳ್ಳಿ: ಸಮೀಪದ ಹುಲಗಡ್ಡಿ ಗ್ರಾಮದ ವೀರಭದ್ರೇಶ್ವರ ಹಾಗೂ ಆಂಜನೇಯಸ್ವಾಮಿಯ ರಥೋತ್ಸವ ಹಾಗೂ ವೀರಭದ್ರ ದೇವರ ಗುಗ್ಗಳವು ಭಾನುವಾರ ಜನಸಾಗರದ ಮಧ್ಯೆ ಅದ್ಧೂರಿಯಾಗಿ ನಡೆಯಿತು.

ವೀರಭದ್ರೇಶ್ವರ ಹಾಗೂ ಆಂಜನೇಯಸ್ವಾಮಿಯ ರಥೋತ್ಸವ ಹಾಗೂ ವೀರಭದ್ರದೇವರ ಗುಗ್ಗಳದಲ್ಲಿ ಹುಲಗಡ್ಡಿ ಸೇರಿದಂತೆ ಸುತ್ತಲಿನ ಗ್ರಾಮಗಳ ಜನರು ಭಾಗವಹಿಸಿದ್ದರು.

ಡೊಳ್ಳು, ಭಜನೆ, ವಾದ್ಯ, ಸಮ್ಮಾಳ, ಗುಗ್ಗಳ, ವೀರಗಾಸೆ ತಂಡಗಳು ಮೆರುಗು ತಂದವು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು. ರಥಕ್ಕೆ ಜನರು ಬಾಳೆಹಣ್ಣು ಮತ್ತು ಉತ್ತತ್ತಿಯನ್ನು ಎಸೆದು ಭಕ್ತಿ ಭಾವ ಮೆರೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT