<p><strong>ಹಾವೇರಿ</strong>: ನಗರದಲ್ಲಿರುವ ಅಂಜುಮನ್–ಎ–ಇಸ್ಲಾಂ ಸಂಸ್ಥೆಯ ನೂತನ ಪದಾಧಿಕಾರಿಗಳ ಆಯ್ಕೆಗೆ ಫೆ. 15ರಂದು ಮತದಾನ ಪ್ರಕ್ರಿಯೆ ಜರುಗಲಿದ್ದು, ಅದಕ್ಕಾಗಿ ಮುನ್ಸಿಪಲ್ ಹೈಸ್ಕೂಲ್ನಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ.</p>.<p>ಚುನಾವಣೆಯಲ್ಲಿ ಮತ ಚಲಾವಣೆ ಮಾಡಲು ನಗರದ ಮುಸ್ಲಿಂ ಸಮುದಾಯದ 5,057 ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಸಂಸ್ಥೆಯ ಸದಸ್ಯ ಸ್ಥಾನಕ್ಕೆ ಸ್ಪರ್ಧಿಸಲು ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು.</p>.<p>ಆರಂಭದಲ್ಲಿ 78 ಮಂದಿ ಉಮೇದುವಾರಿಕೆ ಸಲ್ಲಿಸಿದ್ದರು. ಈ ಪೈಕಿ ಒಬ್ಬರು ಈಗಾಗಲೇ ನಾಮಪತ್ರ ವಾಪಸು ಪಡೆದಿದ್ದಾರೆ. 77 ಅಭ್ಯರ್ಥಿಗಳು ಚುನಾವಣೆಯ ಅಂತಿಮ ಕಣದಲ್ಲಿದ್ದಾರೆ. ಈ ಪೈಕಿ 33 ಮಂದಿ ಚುನಾಯಿಸಲು ಮತದಾರರಿಗೆ ಅವಕಾಶವಿದೆ.</p>.<p>ಅಂಜುಮನ್ ಸಂಸ್ಥೆಯ ಹಾಲಿ ಸದಸ್ಯರ ಅವಧಿ ಮುಕ್ತಾಯಗೊಂಡಿದ್ದರಿಂದ, ನೂತನ ಪದಾಧಿಕಾರಿಗಳ ಆಯ್ಕೆಗೆ ಹಲವು ತಿಂಗಳ ಹಿಂದೆಯೇ ಚಾಲನೆ ನೀಡಲಾಗಿತ್ತು. ಅದರಂತೆ ಸಮಾಜದ 5,057 ಮಂದಿ, ತಲಾ ₹ 250 ಶುಲ್ಕ ನೀಡಿ ಮತದಾರರ ನೋಂದಣಿ ಮಾಡಿಸಿದ್ದಾರೆ.</p>.<p>‘ಸಂಸ್ಥೆಯ 33 ಸ್ಥಾನಗಳಿಗೆ ಸದಸ್ಯರ ಆಯ್ಕೆ ನಡೆಯಲಿದೆ. ಫೆ. 15ರಂದು ಮುನ್ಸಿಪಲ್ ಹೈಸ್ಕೂಲ್ನಲ್ಲಿ ಮತದಾನ ದಿನಾಂಕ ನಿಗದಿ ಮಾಡಲಾಗಿದೆ. ಮತದಾನಕ್ಕಾಗಿ 20 ಮತಗಟ್ಟೆಗಳನ್ನು ತೆರೆಯಲಾಗುವುದು. ಮತದಾನ ಪ್ರಕ್ರಿಯೆ ಬಗ್ಗೆ ಶನಿವಾರ ಎಲ್ಲ ಸಿಬ್ಬಂದಿಗೆ ತರಬೇತಿಯಿದೆ’ ಎಂದು ಚುನಾವಣಾ ಅಧಿಕಾರಿ ಅಮೀರ್ ಪಾಷಾ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಅಭ್ಯರ್ಥಿಗಳಿಗೆ ಈಗಾಗಲೇ ಚಿಹ್ನೆ ಹಂಚಿಕೆ ಮಾಡಲಾಗಿದೆ. ಚುನಾವಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಿಗಾ ವಹಿಸಲಾಗಿದೆ. ಜಿಲ್ಲಾ ಎಸ್.ಪಿ. ಅವರನ್ನು ಭೇಟಿಯಾಗಿ, ಭದ್ರತೆಗೆ ಪೊಲೀಸರನ್ನು ನಿಯೋಜಿಸಲು ಕೋರಲಾಗಿದೆ. ಮತದಾನದ ದಿನದಂದು ಮತಗಟ್ಟೆ ಬಳಿ ಪೊಲೀಸ್ ಭದ್ರತೆ ಇರಲಿದೆ’ ಎಂದು ಹೇಳಿದರು.</p>.<p><strong>ಮತದಾನ ಮುಗಿದ ಬಳಿಕ ಎಣಿಕೆ:</strong> ‘ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೂ ಮತದಾನ ಜರುಗಲಿದೆ. ಮತದಾನ ಮುಗಿದ ಬಳಿಕ, ಮತಗಳ ಎಣಿಕೆ ಶುರುವಾಗಲಿದೆ. ಮತದಾನಕ್ಕೆ ಮತಪತ್ರಗಳನ್ನು ಬಳಸಲಾಗುತ್ತಿದೆ. ಎಣಿಕೆ ಮುಗಿದ ನಂತರ ಫಲಿತಾಂಶ ಪ್ರಕಟಿಸಲಾಗುವುದು’ ಎಂದು ಅಮೀರ್ ಪಾಷಾ ತಿಳಿಸಿದರು.</p>.<p>‘ಒಬ್ಬ ಮತದಾರ, 33 ಮತಗಳನ್ನು ಹಾಕಬೇಕು. ಮತದಾನ ಮಾಡುವ ಸಂದರ್ಭದಲ್ಲಿ ಮತಗಟ್ಟೆ ಅಧಿಕಾರಿಗಳು ನೀಡುವ ಸೂಚನೆಗಳನ್ನು ಗಮನಿಸಿ, ಸರಿಯಾಗಿ ಮತದಾನ ಮಾಡಬೇಕು. ಮತಪತ್ರದಲ್ಲೇ ಬೇರೆ ಏನಾದರೂ ಬರೆಯಬಾರದು. ಸೂಕ್ತ ರೀತಿಯಲ್ಲಿ ಮತದಾನ ಮಾಡದಿದ್ದರೆ, ಅಂಥ ಮತಗಳು ಅಮಾನ್ಯಗೊಳ್ಳಲಿವೆ’ ಎಂದು ಹೇಳಿದರು.</p>.<p><strong>ಚುರುಕಿನ ಪ್ರಚಾರ</strong>: ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು, ತಂಡಗಳ ಮೂಲಕ ಚುರುಕಿನ ಪ್ರಚಾರ ನಡೆಸುತ್ತಿದ್ದಾರೆ. ಕೆಲವರು ವೈಯಕ್ತಿಕವಾಗಿ ಮತದಾರರನ್ನು ಭೇಟಿಯಾಗಿ ಪ್ರಚಾರ ಮಾಡುತ್ತಿದ್ದಾರೆ. ಆಟೊ ಹಾಗೂ ಕಾರುಗಳ ಮೂಲಕವೂ ಕೆಲ ಅಭ್ಯರ್ಥಿಗಳು ಪ್ರಚಾರ ಮಾಡುತ್ತಿದ್ದಾರೆ.</p>.<p>ಮುಸ್ಲಿಂ ಸಮುದಾಯದ ಜನರು ಹೆಚ್ಚಾಗಿ ವಾಸವಿರುವ ಪ್ರದೇಶಗಳು ಹಾಗೂ ರಸ್ತೆಗಳ ಅಕ್ಕ–ಪಕ್ಕದಲ್ಲಿ ಕೆಲ ಅಭ್ಯರ್ಥಿಗಳು ಬ್ಯಾನರ್ಗಳನ್ನು ಅಳಡಿಸಿದ್ದಾರೆ.</p>.<p>ಚುನಾವಣೆಗೆ ಸಂಬಂಧಪಟ್ಟಂತೆ ಅಭ್ಯರ್ಥಿಯೊಬ್ಬರು ನ್ಯಾಯಾಲಯದ ಮೆಟ್ಟಿಲೇರಿ ತಡೆಯಾಜ್ಞೆ ತಂದಿದ್ದರು. ಈಗ ತಡೆಯಾಜ್ಞೆ ತೆರುವುಗೊಂಡಿದ್ದು, ಚುನಾವಣೆ ಪ್ರಕ್ರಿಯೆ ಯಥಾಪ್ರಕಾರ ಶುರುವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ನಗರದಲ್ಲಿರುವ ಅಂಜುಮನ್–ಎ–ಇಸ್ಲಾಂ ಸಂಸ್ಥೆಯ ನೂತನ ಪದಾಧಿಕಾರಿಗಳ ಆಯ್ಕೆಗೆ ಫೆ. 15ರಂದು ಮತದಾನ ಪ್ರಕ್ರಿಯೆ ಜರುಗಲಿದ್ದು, ಅದಕ್ಕಾಗಿ ಮುನ್ಸಿಪಲ್ ಹೈಸ್ಕೂಲ್ನಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ.</p>.<p>ಚುನಾವಣೆಯಲ್ಲಿ ಮತ ಚಲಾವಣೆ ಮಾಡಲು ನಗರದ ಮುಸ್ಲಿಂ ಸಮುದಾಯದ 5,057 ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಸಂಸ್ಥೆಯ ಸದಸ್ಯ ಸ್ಥಾನಕ್ಕೆ ಸ್ಪರ್ಧಿಸಲು ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು.</p>.<p>ಆರಂಭದಲ್ಲಿ 78 ಮಂದಿ ಉಮೇದುವಾರಿಕೆ ಸಲ್ಲಿಸಿದ್ದರು. ಈ ಪೈಕಿ ಒಬ್ಬರು ಈಗಾಗಲೇ ನಾಮಪತ್ರ ವಾಪಸು ಪಡೆದಿದ್ದಾರೆ. 77 ಅಭ್ಯರ್ಥಿಗಳು ಚುನಾವಣೆಯ ಅಂತಿಮ ಕಣದಲ್ಲಿದ್ದಾರೆ. ಈ ಪೈಕಿ 33 ಮಂದಿ ಚುನಾಯಿಸಲು ಮತದಾರರಿಗೆ ಅವಕಾಶವಿದೆ.</p>.<p>ಅಂಜುಮನ್ ಸಂಸ್ಥೆಯ ಹಾಲಿ ಸದಸ್ಯರ ಅವಧಿ ಮುಕ್ತಾಯಗೊಂಡಿದ್ದರಿಂದ, ನೂತನ ಪದಾಧಿಕಾರಿಗಳ ಆಯ್ಕೆಗೆ ಹಲವು ತಿಂಗಳ ಹಿಂದೆಯೇ ಚಾಲನೆ ನೀಡಲಾಗಿತ್ತು. ಅದರಂತೆ ಸಮಾಜದ 5,057 ಮಂದಿ, ತಲಾ ₹ 250 ಶುಲ್ಕ ನೀಡಿ ಮತದಾರರ ನೋಂದಣಿ ಮಾಡಿಸಿದ್ದಾರೆ.</p>.<p>‘ಸಂಸ್ಥೆಯ 33 ಸ್ಥಾನಗಳಿಗೆ ಸದಸ್ಯರ ಆಯ್ಕೆ ನಡೆಯಲಿದೆ. ಫೆ. 15ರಂದು ಮುನ್ಸಿಪಲ್ ಹೈಸ್ಕೂಲ್ನಲ್ಲಿ ಮತದಾನ ದಿನಾಂಕ ನಿಗದಿ ಮಾಡಲಾಗಿದೆ. ಮತದಾನಕ್ಕಾಗಿ 20 ಮತಗಟ್ಟೆಗಳನ್ನು ತೆರೆಯಲಾಗುವುದು. ಮತದಾನ ಪ್ರಕ್ರಿಯೆ ಬಗ್ಗೆ ಶನಿವಾರ ಎಲ್ಲ ಸಿಬ್ಬಂದಿಗೆ ತರಬೇತಿಯಿದೆ’ ಎಂದು ಚುನಾವಣಾ ಅಧಿಕಾರಿ ಅಮೀರ್ ಪಾಷಾ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಅಭ್ಯರ್ಥಿಗಳಿಗೆ ಈಗಾಗಲೇ ಚಿಹ್ನೆ ಹಂಚಿಕೆ ಮಾಡಲಾಗಿದೆ. ಚುನಾವಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಿಗಾ ವಹಿಸಲಾಗಿದೆ. ಜಿಲ್ಲಾ ಎಸ್.ಪಿ. ಅವರನ್ನು ಭೇಟಿಯಾಗಿ, ಭದ್ರತೆಗೆ ಪೊಲೀಸರನ್ನು ನಿಯೋಜಿಸಲು ಕೋರಲಾಗಿದೆ. ಮತದಾನದ ದಿನದಂದು ಮತಗಟ್ಟೆ ಬಳಿ ಪೊಲೀಸ್ ಭದ್ರತೆ ಇರಲಿದೆ’ ಎಂದು ಹೇಳಿದರು.</p>.<p><strong>ಮತದಾನ ಮುಗಿದ ಬಳಿಕ ಎಣಿಕೆ:</strong> ‘ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೂ ಮತದಾನ ಜರುಗಲಿದೆ. ಮತದಾನ ಮುಗಿದ ಬಳಿಕ, ಮತಗಳ ಎಣಿಕೆ ಶುರುವಾಗಲಿದೆ. ಮತದಾನಕ್ಕೆ ಮತಪತ್ರಗಳನ್ನು ಬಳಸಲಾಗುತ್ತಿದೆ. ಎಣಿಕೆ ಮುಗಿದ ನಂತರ ಫಲಿತಾಂಶ ಪ್ರಕಟಿಸಲಾಗುವುದು’ ಎಂದು ಅಮೀರ್ ಪಾಷಾ ತಿಳಿಸಿದರು.</p>.<p>‘ಒಬ್ಬ ಮತದಾರ, 33 ಮತಗಳನ್ನು ಹಾಕಬೇಕು. ಮತದಾನ ಮಾಡುವ ಸಂದರ್ಭದಲ್ಲಿ ಮತಗಟ್ಟೆ ಅಧಿಕಾರಿಗಳು ನೀಡುವ ಸೂಚನೆಗಳನ್ನು ಗಮನಿಸಿ, ಸರಿಯಾಗಿ ಮತದಾನ ಮಾಡಬೇಕು. ಮತಪತ್ರದಲ್ಲೇ ಬೇರೆ ಏನಾದರೂ ಬರೆಯಬಾರದು. ಸೂಕ್ತ ರೀತಿಯಲ್ಲಿ ಮತದಾನ ಮಾಡದಿದ್ದರೆ, ಅಂಥ ಮತಗಳು ಅಮಾನ್ಯಗೊಳ್ಳಲಿವೆ’ ಎಂದು ಹೇಳಿದರು.</p>.<p><strong>ಚುರುಕಿನ ಪ್ರಚಾರ</strong>: ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು, ತಂಡಗಳ ಮೂಲಕ ಚುರುಕಿನ ಪ್ರಚಾರ ನಡೆಸುತ್ತಿದ್ದಾರೆ. ಕೆಲವರು ವೈಯಕ್ತಿಕವಾಗಿ ಮತದಾರರನ್ನು ಭೇಟಿಯಾಗಿ ಪ್ರಚಾರ ಮಾಡುತ್ತಿದ್ದಾರೆ. ಆಟೊ ಹಾಗೂ ಕಾರುಗಳ ಮೂಲಕವೂ ಕೆಲ ಅಭ್ಯರ್ಥಿಗಳು ಪ್ರಚಾರ ಮಾಡುತ್ತಿದ್ದಾರೆ.</p>.<p>ಮುಸ್ಲಿಂ ಸಮುದಾಯದ ಜನರು ಹೆಚ್ಚಾಗಿ ವಾಸವಿರುವ ಪ್ರದೇಶಗಳು ಹಾಗೂ ರಸ್ತೆಗಳ ಅಕ್ಕ–ಪಕ್ಕದಲ್ಲಿ ಕೆಲ ಅಭ್ಯರ್ಥಿಗಳು ಬ್ಯಾನರ್ಗಳನ್ನು ಅಳಡಿಸಿದ್ದಾರೆ.</p>.<p>ಚುನಾವಣೆಗೆ ಸಂಬಂಧಪಟ್ಟಂತೆ ಅಭ್ಯರ್ಥಿಯೊಬ್ಬರು ನ್ಯಾಯಾಲಯದ ಮೆಟ್ಟಿಲೇರಿ ತಡೆಯಾಜ್ಞೆ ತಂದಿದ್ದರು. ಈಗ ತಡೆಯಾಜ್ಞೆ ತೆರುವುಗೊಂಡಿದ್ದು, ಚುನಾವಣೆ ಪ್ರಕ್ರಿಯೆ ಯಥಾಪ್ರಕಾರ ಶುರುವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>