‘ರೈತರು ದೆಹಲಿಯಲ್ಲಿ ನಡೆಸುತ್ತಿರುವ ಐತಿಹಾಸಿಕ ಹೋರಾಟವನ್ನು ಇಡೀ ದೇಶದ ಜನರು ಬೆಂಬಲಿಸುತ್ತಿದ್ದಾರೆ. ಈ ಚಳವಳಿಯಲ್ಲಿ ಪಾಲ್ಗೊಂಡಿರುವ ನೂರಾರು ರೈತ ಸಂಘಟನೆಗಳು ಕೇಳುತ್ತಿರುವ ಬೇಡಿಕೆಗಳು ನ್ಯಾಯಯುತವಾಗಿವೆ. ಒಕ್ಕೂಟ ಸರ್ಕಾರ ಇತ್ತೀಚೆಗೆ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳು ಜನವಿರೋಧಿ, ರೈತ ವಿರೋಧಿಯಾಗಿವೆ. ಇವುಗಳನ್ನು ಹಿಂದಕ್ಕೆ ಪಡೆಯದಿದ್ದರೆ, ರೈತರ ಬಾಳು ನರಕವಾಗಲಿದೆ, ರೈತರ ಆತ್ಮಹತ್ಯೆಗಳು ದುಪ್ಪಟ್ಟಾಗಲಿವೆ ಎಂದು ಮನವಿಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.