<p><strong>ಹಾವೇರಿ: </strong>ರಾಜ್ಯದಲ್ಲಿ ನದಾಫ/ಪಿಂಜಾರ ಜನಾಂಗವು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಹಾಗೂ ಸಾಮಾಜಿಕವಾಗಿ, ರಾಜಕೀಯವಾಗಿ ತುಂಬಾ ಹಿಂದುಳಿದಿದೆ. ಈ ಜನಾಂಗದ ಸರ್ವತೋಮುಖ ಪ್ರಗತಿಗಾಗಿ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಎಂದು ‘ಕರ್ನಾಟಕ ರಾಜ್ಯ ನದಾಫ/ಪಿಂಜಾರ ಸಂಘದ ಹಾವೇರಿ ಜಿಲ್ಲಾ ಘಟಕದ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣವರ ಅವರಿಗೆ ಮನವಿ ಸಲ್ಲಿಸಿದರು.</p>.<p>ಕೇಂದ್ರ ಸರ್ಕಾರವು ಒಬಿಸಿ ಪಟ್ಟಿಯಲ್ಲಿ ನಮ್ಮ ಜನಾಂಗವನ್ನು ಸೇರ್ಪಡೆ ಮಾಡಿದ್ದು, ರಾಜ್ಯದಲ್ಲಿ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದಿರುವ ಕಾಯ್ದೆಯಲ್ಲಿಯೂ ಸಹ ನಮ್ಮ ಜನಾಂಗವನ್ನು ಅತ್ಯಂತ ಹಿಂದುಳಿದಿರುವ ಬಗ್ಗೆ ಗುರುತಿಸಲಾಗಿದೆ. ಅಲೆಮಾರಿ ಎಂದು ಗುರುತಿಸಿರುವ ಈ ಸಮುದಾಯದಲ್ಲಿ ಇಲ್ಲಿಯವರೆಗೂ ಒಬ್ಬ ಐಎಎಸ್ ಅಧಿಕಾರಿಯಾಗಲಿ, ಐಪಿಎಸ್ ಅಧಿಕಾರಿಯಾಗಲಿ ಆಯ್ಕೆಯಾಗಿರುವುದಿಲ್ಲ ಎಂದು ತಿಳಿಸಿದ್ದಾರೆ.<br /><br />ಸಂಘದ ಅಧ್ಯಕ್ಷ ಆರ್.ಜಿ.ಗುಡಗೇರಿ, ಹುಸೇನಸಾಬ ದೇವಿಹೂಸೂರ, ಎಂ.ಎಫ್.ಇಂಗಳಗಿ, ಉಪಾಧ್ಯಕ್ಷ ಮರ್ದಾನಸಾಬ ಸುಳ್ಳಳ್ಳಿ, ಕಾಸೀಂಸಾಬ್ ಮುಂದಿನಮನಿ, ನೂರ್ ಅಹಮದ್ ಕರ್ಜಗಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>ರಾಜ್ಯದಲ್ಲಿ ನದಾಫ/ಪಿಂಜಾರ ಜನಾಂಗವು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಹಾಗೂ ಸಾಮಾಜಿಕವಾಗಿ, ರಾಜಕೀಯವಾಗಿ ತುಂಬಾ ಹಿಂದುಳಿದಿದೆ. ಈ ಜನಾಂಗದ ಸರ್ವತೋಮುಖ ಪ್ರಗತಿಗಾಗಿ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಎಂದು ‘ಕರ್ನಾಟಕ ರಾಜ್ಯ ನದಾಫ/ಪಿಂಜಾರ ಸಂಘದ ಹಾವೇರಿ ಜಿಲ್ಲಾ ಘಟಕದ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣವರ ಅವರಿಗೆ ಮನವಿ ಸಲ್ಲಿಸಿದರು.</p>.<p>ಕೇಂದ್ರ ಸರ್ಕಾರವು ಒಬಿಸಿ ಪಟ್ಟಿಯಲ್ಲಿ ನಮ್ಮ ಜನಾಂಗವನ್ನು ಸೇರ್ಪಡೆ ಮಾಡಿದ್ದು, ರಾಜ್ಯದಲ್ಲಿ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದಿರುವ ಕಾಯ್ದೆಯಲ್ಲಿಯೂ ಸಹ ನಮ್ಮ ಜನಾಂಗವನ್ನು ಅತ್ಯಂತ ಹಿಂದುಳಿದಿರುವ ಬಗ್ಗೆ ಗುರುತಿಸಲಾಗಿದೆ. ಅಲೆಮಾರಿ ಎಂದು ಗುರುತಿಸಿರುವ ಈ ಸಮುದಾಯದಲ್ಲಿ ಇಲ್ಲಿಯವರೆಗೂ ಒಬ್ಬ ಐಎಎಸ್ ಅಧಿಕಾರಿಯಾಗಲಿ, ಐಪಿಎಸ್ ಅಧಿಕಾರಿಯಾಗಲಿ ಆಯ್ಕೆಯಾಗಿರುವುದಿಲ್ಲ ಎಂದು ತಿಳಿಸಿದ್ದಾರೆ.<br /><br />ಸಂಘದ ಅಧ್ಯಕ್ಷ ಆರ್.ಜಿ.ಗುಡಗೇರಿ, ಹುಸೇನಸಾಬ ದೇವಿಹೂಸೂರ, ಎಂ.ಎಫ್.ಇಂಗಳಗಿ, ಉಪಾಧ್ಯಕ್ಷ ಮರ್ದಾನಸಾಬ ಸುಳ್ಳಳ್ಳಿ, ಕಾಸೀಂಸಾಬ್ ಮುಂದಿನಮನಿ, ನೂರ್ ಅಹಮದ್ ಕರ್ಜಗಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>