ಸರ್ಕಾರದ ಸುತ್ತೋಲೆ ಅನ್ವಯ ನ್ಯಾಯಾಲಯಗಳಲ್ಲಿ ಕನ್ನಡದಲ್ಲಿ ಅರ್ಜಿ ಸಲ್ಲಿಸುವುದು, ಕನ್ನಡದ ನಮೂನೆಗಳನ್ನು ಬಳಸುವುದು, ವಕೀಲರು ಕನ್ನಡದಲ್ಲೇ ವಾದ ಮಂಡಿಸುವುದು ಹಾಗೂ ನ್ಯಾಯಾಧೀಶರು ತೀರ್ಪುಗಳನ್ನು ಕನ್ನಡದಲ್ಲೇ ನೀಡಬೇಕು ಎಂದಿದೆ. ಬಹಳಷ್ಟು ನ್ಯಾಯಾಧೀಶರು ಕನ್ನಡದಲ್ಲಿಯೇ ತೀರ್ಪು ನೀಡುತ್ತಿದ್ದಾರೆ. ಆದರೆ, ಅಧೀನ ನ್ಯಾಯಾಲಯಗಳಲ್ಲಿ ಕನ್ನಡದ ಬಳಕೆ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸಬೇಕು ಎಂದು ಮನವಿ ಪತ್ರವನ್ನು ಜಾಗೃತಿ ಸಮಿತಿ ಸದಸ್ಯರು ಗುರುವಾರ ನ್ಯಾಯಾಧೀಶರಿಗೆ ಸಲ್ಲಿಸಿದರು.